ಕೊಡ್ಲಿಪೇಟೆ: ಸಾವಿತ್ರಿ ಬಾಯಿ ಫುಲೆ ಜನ್ಮದಿನ ಆಚರಣೆ

KannadaprabhaNewsNetwork |  
Published : Jan 06, 2025, 01:02 AM IST
ಚಿತ್ರ : 5ಎಂಡಿಕೆ1 : ಕೊಡ್ಲಿಪೇಟೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾವಿತ್ರಿ ಬಾಯಿಫುಲೆ ಅವರ ಜನ್ಮದಿನದ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.  | Kannada Prabha

ಸಾರಾಂಶ

ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸಾವಿತ್ರಿ ಬಾಯಿಪುಲೆ ಜನ್ಮದಿನ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಾನವ ಬಂಧುತ್ವ ವೇದಿಕೆ ಕೊಡಗು ಜಿಲ್ಲಾ ಶಾಖೆ ವತಿಯಿಂದ ಸೋಮವಾರಪೇಟೆ ತಾಲೂಕು ಕೊಡ್ಲಿಪೇಟೆ ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ ಸಾವಿತ್ರಿ ಬಾಯಿಫುಲೆ ಅವರ ಜನ್ಮದಿನ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಅತಿಥಿಗಳು ಸಾವಿತ್ರಿ ಬಾಯಿಫುಲೆ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಾನವ ಬಂಧುತ್ವ ವೇದಿಕೆಯ ಜಿಲ್ಲಾ ಸಂಚಾಲಕ ಜೆ.ಎಲ್. ಜನಾರ್ದನ್, ಸಾಮಾಜಿಕ ಅನಿಷ್ಟ ಹಾಗೂ ಗೊಡ್ಡು ಸಂಪ್ರದಾಯಗಳ ನಡುವೆ, ಪುರುಷರಂತೆ ಮಹಿಳೆಯರಿಗೆ ಶಿಕ್ಷಣ, ಉದ್ಯೋಗ ಸಿಗಬೇಕು ಎಂದು ಸಾವಿತ್ರಿ ಬಾಯಿ ಹೋರಾಟ ಮಾಡಿದ್ದಾರೆ ಎಂದರು.

ಮಲ್ಲಿಪಟ್ಟಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಚಂದ್ರಕಲಾ ಮಾತನಾಡಿ, ಸಾವಿತ್ರಿಬಾಯಿಫುಲೆ ಹೆಣ್ಣುಮಕ್ಕಳಿಗೆ ಹಾಗೂ ಮಹಿಳೆಯರಿಗೆ ಶಿಕ್ಷಣ ಸಿಗಬೇಕು, ಮುಖ್ಯವಾಹಿನಿಗೆ ಬರಬೇಕು. ಹೆಣ್ಣು ಅಬಲೆ ಅಲ್ಲ ಸಬಲೆ ಎಂದು ಪ್ರಾತಿಪಾದಿಸಿದ್ದಾರೆ ಎಂದರು.

ಸೋಮವಾರಪೇಟೆ ತಾಲೂಕು ಸಂಚಾಲಕ ಎಂ.ಎಸ್. ವೀರೇಂದ್ರ ಮಾತನಾಡಿ, ಸಾವಿತ್ರಿ ಬಾಯಿಫುಲೆ ಅವರ ಜೀವನ ಚರಿತ್ರೆ, ಸಾಧನೆ ಬಗ್ಗೆ ವಿವರಿಸಿದರು. ಶಾಲೆಯ ಪ್ರಾಂಶುಪಾಲ ಮಹೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸದಸ್ಯ ಎಂ.ಪಿ. ವಿಶ್ವ, ವೀರಭದ್ರ ದೊಡ್ಡಕೊಡ್ಲಿ, ಶಾಲಾ ಶಿಕ್ಷಕರು ಹಾಜರಿದ್ದರು. ಶಿಕ್ಷಕ ಸತೀಶ್ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ