ಕನ್ನಡಪ್ರಭಾ ವಾರ್ತೆ ಚಡಚಣ
ಪಟ್ಟಣದ ಪೊಲೀಸ್ ಠಾಣೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಘಟನೆ ಮಂಗಳವಾರ ಸಂಜೆ 6.30 ರಿಂದ 7.30 ಗಂಟೆಯೊಳಗೆ ನಡೆದಿದೆ. ಘಟನೆಯಲ್ಲಿ ಬ್ಯಾಂಕ್ನಿಂದ ಅಂದಾಜು ₹ 21 ಕೋಟಿ ಮೌಲ್ಯದ 398 ಪ್ಯಾಕ್(20ಕೆಜಿ) ಚಿನ್ನ, ₹ 1.4 ಕೋಟಿ ನಗದು ಹಣ ದರೋಡೆ ಮಾಡಿದ್ದಾರೆ. ಅದೇ ದಿನ ಅಂದರೆ ಮಂಗಳವಾರ ಘಟನೆಯಾದ ಒಂದೂವರೆ ಗಂಟೆಯಲ್ಲಿ ಮಹಾರಾಷ್ಟ್ರದ ಹುಲಜಂತಿ ಗ್ರಾಮದಲ್ಲಿ ತಡರಾತ್ರಿ ದರೋಡೆಗೆ ಬಳಿಸಿದ್ದ ಕಾರ್ನ್ನು ವಶಕ್ಕೆ ಪಡೆದಿದ್ದು, ವಾಹನದಲ್ಲಿದ್ದ 21 ಚಿನ್ನದ ಪಾಕೇಟ್ ಚಿನ್ನ ₹ 1 ಲಕ್ಷ ನಗದು ಹಣ ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಸ್ಥಳದಲ್ಲಿಯೇ ಪೊಲೀಸ್ ಸಿಬ್ಬಂದಿ ಬೀಡುಬಿಟ್ಟಿದ್ದು, ಗುರುವಾರ ಸಂಜೆ ಗ್ರಾಮದಲ್ಲಿನ ಮನೆಯೊಂದರ ಮೇಲೆ ಬ್ಯಾಗ್ ಪತ್ತೆಯಾಗಿರುವ ಬಗ್ಗೆ ತನಿಖೆ ನಡೆಸಿ 136 ಪ್ಯಾಕೇಟ್ ದಲ್ಲಿದ್ದ 6800 ಗ್ರಾಂ ಚಿನ್ನ, ₹ 41 ಲಕ್ಷ ಸಾವಿರ ನಗದು ಹಣ ವಶಪಡಿಸಿಕೊಳ್ಳಲಾಗಿದೆ. ಮಹಾರಾಷ್ಟ್ರದ ಸೋಲಾಪೂರ ಜಿಲ್ಲೆಯ ಮಂಗಳವೇಡ ಗ್ರಾಮದ ಪೊಲೀಸ್ ಠಾಣೆಯಲ್ಲಿಯೂ ಕಳ್ಳತನ ಪ್ರಕರಣ ದಾಖಲಿಸಲಾಗಿದೆ. ಸೋಲಾಪೂರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತನಿಖಾ ತಂಡದ ಸಹಯೋಗದಲ್ಲಿ ತನಿಖೆಯನ್ನು ಮುಂದುವರಿಸಲಾಗಿದೆ. ಆರೋಪಿಗಳು ನಾಪತ್ತೆಯಾಗಿದ್ದಾರೆ. ದರೋಡೆಕೋರರನ್ನು ಹೆಡೆಮುರಿ ಕಟ್ಟಲು ಈಗಾಗಲೇ 8 ತನಿಖಾ ತಂಡಗಳನ್ನು ರಚಿಸಿದ್ದು, ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಶೀಘ್ರದಲ್ಲಿ ದರೋಡೆಕೋರರ ಬಂಧಿಸಲಾಗುತ್ತದೆ ಎಂದು ತಿಳಿಸಿದರು.
ಬಾಕ್ಸ್ಬ್ಯಾಂಕ್ಗಳ ಭದ್ರತೆ ಗುಣಮಟ್ಟ ಸುಧಾರಿಸಬೇಕು: ಸಚಿವ
ಈ ಸಂದರ್ಭದಲ್ಲಿ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ, ಇಂಡಿ ಡಿವೈಎಸ್ಪಿ ಜಗದೀಶ, ಸಿಪಿಐ ಸುರೇಶ ಬೆಂಡಗುಂಬಳ ಇದ್ದರು.