ಪಿಟಿಐ ನವದೆಹಲಿ
‘ಕವಿತಾ 5 ತಿಂಗಳಿನಿಂದ ಸಿಬಿಐ ಮತ್ತು ಇ.ಡಿ. (ಜಾರಿ ನಿರ್ದೇನಾಲಯ) ವಶದಲ್ಲಿದ್ದಾರೆ. ಈ ಪ್ರಕರಣದಲ್ಲಿ ಎರಡೂ ತನಿಖಾ ಸಂಸ್ಥೆಗಳು ಆರೋಪಿಯ ವಿಚಾರಣೆ ಮುಗಿಸಿವೆ. ಪ್ರಕರಣದ ವಿಚಾರಣೆ ಸದ್ಯಕ್ಕೆ ಮುಗಿಯುವ ಯಾವುದೇ ಲಕ್ಷಣ ಇಲ್ಲ. ಮೇಲಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಿಳೆಯರಿಗೆ ಕೆಲವೊಂದು ವಿನಾಯ್ತಿ ಇದೆ. ಅವರು ಜಾಮೀನಿಗೆ ಅರ್ಹರಾಗಿದ್ದಾರೆ. ಹೀಗಾಗಿ ಇನ್ನೂ ಆಕೆಯನ್ನು ವಶದಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ’ ಎಂದು ಹೇಳಿ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿದೆ.
ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ತಲಾ 10 ಲಕ್ಷ ರು.ಮೌಲ್ಯದ ಎರಡು ಬಾಂಡ್ಗಳನ್ನು ಶ್ಯೂರಿಟಿಯಾಗಿ ಸಲ್ಲಿಸುವಂತೆ ಸೂಚಿಸಿದ ನ್ಯಾ.ಬಿ.ಆರ್. ಗವಾಯ್ ಮತ್ತು ನ್ಯಾ. ಕೆ.ವಿ.ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ, ಪಾಸ್ಪೊರ್ಟ್ ಅನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಮತ್ತು ಸಾಕ್ಷ್ಯನಾಶದ ಪ್ರಯತ್ನ ಹಾಗೂ ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಸೂಚಿಸಿತು.ತನಿಖೆ ಬಗ್ಗೆ ಸುಪ್ರೀ ಕಿಡಿ:
ವಿಚಾರಣೆ ವೇಳೆ ತನಿಖಾ ಸಂಸ್ಥೆಯ ಪರ ವಕೀಲರು, ಕವಿತಾ ತಮ್ಮ ಫೋನ್ನಲ್ಲಿದ್ದ ಮಾಹಿತಿ ಅಳಿಸಿಹಾಕುವ ಮೂಲಕ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಹೀಗಾಗಿ ಅವರಿಗೆ ಜಾಮೀನು ನೀಡಬಾರದು ಎಂದು ಕೋರಿದರಾದರೂ, ಅದನ್ನು ಒಪ್ಪದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತು.
ಇತ್ತೀಚಿನ ದಿನಗಳಲ್ಲಿ ಹೈಕೋರ್ಟ್ಗಳು ಜಾಮೀನು ನಿರಾಕರಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಜಾಮೀನು ನೀಡಿದ 3ನೇ ಪ್ರಕರಣ ಇದಾಗಿದೆ. ಇದಕ್ಕೂ ಮೊದಲು ದೆಹಲಿಯ ಆಪ್ ನಾಯಕ ಮನೀಶ್ ಸಿಸೋಡಿಯಾ, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ಗೂ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿತ್ತು.
ದೆಹಲಿಯ ಆಮ್ಆದ್ಮಿ ಸರ್ಕಾರ, ರಾಜಧಾನಿಯಲ್ಲಿ ಮದ್ಯದಂಗಡಿ ಲೈಸೆನ್ಸ್ ಹಂಚಿಕೆ ಸಂಬಂಧ ಹೊಸ ನೀತಿ ರೂಪಿಸಿತ್ತು. ಈ ವೇಳ ಕವಿತಾ ಸೌತ್ ಗ್ರೂಪ್ ಹೆಸರಿನಲ್ಲಿ ಗುಂಪು ರೂಪಿಸಿಕೊಂಡು ದೆಹಲಿಯ ಆಪ್ ನಾಯಕರಿಗೆ ನೂರಾರು ಕೋಟಿ ಲಂಚ ನೀಡಿ ತಮಗೆ ಬೇಕಾದವರಿಗೆ ಹಲವು ಮದ್ಯದಂಗಡಿ ಲೈಸೆನ್ಸ್ ಕೊಡಿಸಿದ್ದರು ಎಂಬ ಆರೋಪವಿದೆ.