ಎಸ್‌ಸಿಡಿಸಿಸಿ ಬ್ಯಾಂಕ್ ಸ್ಥಳಾಂತರಿತ ಗುತ್ತಿಗಾರು ಶಾಖೆ ಉದ್ಘಾಟನೆ

KannadaprabhaNewsNetwork |  
Published : Oct 15, 2025, 02:08 AM IST
ಸ್ಥಳಾಂತರಗೊಂಡ ಎಸ್‌ಸಿಡಿಸಿಸಿ ಬ್ಯಾಂಕ್‌ನ ಗುತ್ತಿಗಾರು ಶಾಖೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. | Kannada Prabha

ಸಾರಾಂಶ

ಸುಳ್ಯದ ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ರಾಘವೇಂದ್ರ ಕಾಂಪ್ಲೆಕ್ಸ್‌ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡ ಎಸ್‌ಸಿಡಿಸಿಸಿ ಬ್ಯಾಂಕ್‌ನ ಗುತ್ತಿಗಾರು ಶಾಖೆ ಉದ್ಘಾಟನೆ ಸೋಮವಾರ ನೆರವೇರಿತು.

ಮಂಗಳೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ಕೇವಲ ಬ್ಯಾಂಕ್‌ನ ಚಟುವಟಿಕೆ ಮಾತ್ರವಲ್ಲದೆ ಹಲವು ಸಂಘ- ಸಂಸ್ಥೆಗಳನ್ನು ಸೇರಿಸಿಕೊಂಡು ಮಹಿಳಾ ಸ್ವಸಹಾಯ ಸಂಘಗಳನ್ನು ರಚಿಸಿ, ಗ್ರಾಮೀಣ ಪ್ರದೇಶದ ಮಹಿಳೆಯರ ಸಬಲೀಕರಣಕ್ಕೆ ಕೈಜೋಡಿಸಿರುವುದು ಶ್ಲಾಘನೀಯ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಸುಳ್ಯದ ಗುತ್ತಿಗಾರು ಮುಖ್ಯ ರಸ್ತೆಯಲ್ಲಿರುವ ರಾಘವೇಂದ್ರ ಕಾಂಪ್ಲೆಕ್ಸ್‌ನ ಪ್ರಥಮ ಅಂತಸ್ತಿಗೆ ಸ್ಥಳಾಂತರಗೊಂಡ ಎಸ್‌ಸಿಡಿಸಿಸಿ ಬ್ಯಾಂಕ್‌ನ ಗುತ್ತಿಗಾರು ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ಸಂಘಗಳಿಗೆ ಬೆನ್ನೆಲುಬಾಗಿ ನಿಂತಿದೆ. ರೈತರ ಪರವಾಗಿ ನಿಂತಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಹಲವು ಯೋಜನೆಗಳನ್ನು ರೂಪಿಸಿದೆ. ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ, ಬ್ಯಾಂಕ್‌ನಲ್ಲಿ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ. ಬೆಳೆಯುತ್ತಿರುವ ಗುತ್ತಿಗಾರು ಪೇಟೆಯಲ್ಲಿನ ಶಾಖೆಯಲ್ಲೂ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿರುವುದು ಗ್ರಾಹಕರಿಗೂ, ಇಲ್ಲಿನ ಪ್ರದೇಶದ ಅಭಿವೃದ್ಧಿಗೂ ಪೂರಕವಾಗಲಿದೆ ಎಂದರು.

ಎಸ್‌ಸಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ ಅಧ್ಯಕ್ಷತೆ ವಹಿಸಿ ಎಟಿಎಂ ಕೇಂದ್ರವನ್ನು ಉದ್ಘಾಟಿಸಿದರು. ಭದ್ರತಾ ಕೋಶವನ್ನು ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಉದ್ಘಾಟಿಸಿ, ವಾಹನ ಸಾಲಪತ್ರ ವಿತರಿಸಿದರು. ಗುತ್ತಿಗಾರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಿತ್ರ ಮೂಕಮಲೆ ಠೇವಣಿ ಪತ್ರ ವಿತರಿಸಿದರು. ಗುತ್ತಿಗಾರು ಸಹಕಾರ ಸಂಘದ ಅಧ್ಯಕ್ಷ ಜಯಪ್ರಕಾಶ್ ಮೊಗ್ರ ಲಾಕರ್ ಕೀ ವಿತರಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ ನಿರ್ದೆಶಕರಾದ ಎಸ್.ಎನ್. ಮನ್ಮಥ ಹಾಗೂ ಕುಶಲಪ್ಪ ಗೌಡ ಹೊಸ ಸ್ವಸಹಾಯ ಸಂಘಗಳ ಉದ್ಘಾಟನೆ ನೆರವೇರಿಸಿದರು.ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ, ಗುತ್ತಿಗಾರು ಸಹಕಾರಿ ಸಂಘದ ನಿರ್ದೇಶಕರಾದ ವೆಂಕಟ್ ದಂಬೆಕೋಡಿ, ಮುಳಿಯ ಕೇಶವ ಭಟ್, ಮಡಪ್ಪಾಡಿ ಸಹಕಾರಿ ಸಂಘದ ನಿರ್ದೇಶಕ ಪಿ.ಸಿ. ಜಯರಾಮ, ಮಿತ್ರದೇವ ಮಡಪ್ಪಾಡಿ, ನೆಲ್ಲೂರು ಕೆಮ್ರಾಜೆ ಸಹಕಾರಿ ಸಂಘದ ವಿಷ್ಣು ಭಟ್, ಕಟ್ಟಡ ಮಾಲೀಕ ಅನಿಲ್ ಕುಮಾರ್, ಎಸ್‌ಸಿಡಿಸಿಸಿ ಬ್ಯಾಂಕ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕಷ್ಣ ಭಟ್ ಕೆ. ಇದ್ದರು.ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು. ಸುಳ್ಯ ಶಾಖಾ ವ್ಯವಸ್ಥಾಪಕ ಸಂತೋಷ್ ಕುಮಾರ್ ಎಂ. ನಿರೂಪಿಸಿ, ವಂದಿಸಿದರು.

ಸನ್ಮಾನ: ಈ ಸಂದರ್ಭ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು, ಕಟ್ಟಡ ಮಾಲೀಕ ಅನಿಲ್ ಕುಮಾರ್, ಶಾಖಾ ವ್ಯವಸ್ಥಾಪಕ ಕುಶಾಲಪ್ಪ ಗೌಡ ಯು., ಪುತ್ತೂರು ಶಾಖಾ ವ್ಯವಸ್ಥಾಪಕ ಹರೀಶ್ ಪಿ., ಬೆಳ್ತಂಗಡಿ ವಲಯದ ಬ್ಯಾಂಕ್‌ನ ಸ್ವಸಹಾಯ ಸಂಘಗಳ ಮೇಲ್ವಿಚಾರಕ ರಂಜಿತ್ ಕುಮಾರ್ ಎ., ಗುತ್ತಿಗಾರು ವಲಯದ ಮೇಲ್ವಿಚಾರಕ ಎಂ.ಪಿ. ಮನೋಜ್, ಸುಬ್ರಹ್ಮಣ್ಯ ಭಟ್, ಆದರ್ಶ ಬಿ., ಪ್ರದೀಪ್ ಕುಮಾರ್, ರತನ್ ಕೆ.ಎಸ್., ವಿನಯ ಕುಮಾರ್ ಪಿ. ಅವರನ್ನು ಸನ್ಮಾನಿಸಲಾಯಿತು. ನವೋದಯ ವಲಯ ಮೇಲ್ವಿಚಾರಕ ಮತ್ತು ಪ್ರೇರಕ ಶ್ರೀಧರ ಮಾಣಿಮರ್ಧು, ದಾಮೋದರ, ಹೇಮಂತ್, ಗಂಗಾಧರ್, ಪ್ರಕಾಶ್ ಜೆ., ಸವಿತಾ ಎಸ್.ಟಿ., ಚಂದ್ರಕಲಾ, ಅನಿತಾ, ದೇವಕಿ ಅವರನ್ನು ಗೌರವಿಸಲಾಯಿತು.

PREV

Recommended Stories

ಮರಳು ದಂಧೆ ತಡೆದ ಎಎಸ್‌ಐಗೆ ಹಲ್ಲೆ: ರಾಜೂಗೌಡ
ನಟ ದರ್ಶನ್‌ ಸೆಲ್‌ ಪರಿಶೀಲನೆ ನಡೆಸಿದ ಕಾನೂನು ಪ್ರಾಧಿಕಾರ