ಸ್ಥಳೀಯ ಸಂಸ್ಥೆ ಉಪ ಚುನಾವಣೆಗೆ ವೇಳಾಪಟ್ಟಿ ಪ್ರಕಟ

KannadaprabhaNewsNetwork |  
Published : Oct 28, 2024, 12:59 AM IST
ಚಿತ್ರದುರ್ಗ ಎರಡನೇ ಪುಟದ ಮಿಡ್ಲ್ 2222     | Kannada Prabha

ಸಾರಾಂಶ

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಹಾಗೂ ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಯಿತು.

ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಹಾಗೂ ಚಿತ್ರದುರ್ಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹಲವು ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಈ ಸಂಬಂಧ ರಾಜಕೀಯ ಪಕ್ಷಗಳ ಸಭೆ ನಡೆಸಿ ಮಾಹಿತಿ ನೀಡಲಾಯಿತು.

ತಹಸೀಲ್ದಾರ್ ಕಾರ್ಯಾಲಯದಲ್ಲಿ ತಹಸೀಲ್ದಾರ್ ಡಾ.ನಾಗವೇಣಿ ಹಾಗೂ ಪೌರಾಯಕ್ತೆ ಎಂ.ರೇಣುಕಾ ಅವರ ಅಧ್ಯಕ್ಷತೆಯಲ್ಲಿ ರಾಜಕೀಯ ಪಕ್ಷಗಳ ಸಭೆ ನಡೆಸಿ, ಕರಡು ಮತದಾರರ ಪಟ್ಟಿ ಪ್ರಚುರಪಡಿಸಿ, ಚುನಾವಣಾ ವೇಳಾಪಟ್ಟಿಯನ್ನು ರಾಜಕೀಯ ಪಕ್ಷಗಳಿಗೆ ನೀಡಲಾಯಿತು.

ಚಿತ್ರದುರ್ಗ ತಾಲೂಕಿನ ವ್ಯಾಪ್ತಿಯಲ್ಲಿ ಚಿಕ್ಕಗೊಂಡನಹಳ್ಳಿ ಗ್ರಾಮಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಭರಮಸಾಗರ ಗ್ರಾಮಪಂಚಾಯಿತಿ ಭರಮಸಾಗರ-4 ಕ್ಷೇತ್ರಕ್ಕೆ ಸಾಮಾನ್ಯ (ಮಹಿಳೆ), ಹಿರೇಗುಂಟನೂರು ಗ್ರಾಮ ಪಂಚಾಯಿತಿ ಗೊಲ್ಲರಹಟ್ಟಿ ಕ್ಷೇತ್ರ ಸಾಮಾನ್ಯ, ಜಂಪಣ್ಣನಾಯಕನಕೋಟೆ ಗ್ರಾಮ ಪಂಚಾಯಿತಿ ಜಂಪಣ್ಣನಾಯಕನಕೋಟೆ-1 ಕ್ಷೇತ್ರಕ್ಕೆ ಸಾಮಾನ್ಯ(ಮಹಿಳೆ) ಹಾಗೂ ಚಿತ್ರದುರ್ಗ ನಗರಸಭೆ ವಾರ್ಡ್ ಸಂಖ್ಯೆ-15ರ ಕ್ಷೇತ್ರಕ್ಕೆ ಹಿಂದುಳಿದ ವರ್ಗ (ಎ) ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು , ಈ ಸಂಬಂಧ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡಲಾಯಿತು.

ಈ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಇದ್ದರು.

ನಗರಸಭೆ ಚುನಾವಣೆಗೆ ನಗರಸಭೆಯಲ್ಲಿ ನಾಮಪತ್ರ ಸಲ್ಲಿಕೆ ನಡೆಯಲಿದ್ದು, ನವೆಂಬರ್ 4ರಂದು ಜಿಲ್ಲಾಧಿಕಾರಿ ಚುನಾವಣಾ ಅಧಿಸೂಚನೆ ಹೊರಡಿಸುವರು. ನ.11ನಾಮ ಪತ್ರ ಸಲ್ಲಿಕೆ ಕೊನೆಯ ದಿನ, ನ.12ರಂದು ನಾಮಪತ್ರ ಪರಿಶೀಲನೆ, ನ.14 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23ರಂದು ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26 ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ.

ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಚುನಾವಣಾಧಿಕಾರಿ ಕಚೇರಿ ಆಗಿರುತ್ತವೆ. ನ.6ರಿಂದ ಚುನಾವಣೆ ನಾಮ ಪತ್ರ ಸಲ್ಲಿಕೆ ನಡೆಯಲಿದೆ. ನ.12 ನಾಮ ಪತ್ರ ಸಲ್ಲಿಕೆ ಕೊನೆಯ ದಿನ. ನ.13ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನ. ನ.23ರಂದು ಅವಶ್ಯಕತೆ ಇದ್ದರೆ ಚುನಾವಣೆ ನಡೆಯಲಿದೆ. ನ.26ರಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ