ಕನ್ನಡಪ್ರಭ ವಾರ್ತೆ ನಾಪೋಕ್ಲು
ವಿರಾಜಪೇಟೆ ಕಾವೇರಿ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಆಶ್ರಯದಲ್ಲಿ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆದ ವಿಶ್ವ ಸ್ಕಿಝೋಫ್ರೀನಿಯಾ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ಹದಿಹರೆಯದವರಲ್ಲಿ ಸ್ಕಿಝೋಫ್ರೀನಿಯಾ ಸಮಸ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು.ಇದು ತುಂಬಾ ಗಂಭೀರ ಸಮಸ್ಯೆಯಾಗಿದೆ. ಇದೊಂದು ಮಾನಸಿಕ ಸಮಸ್ಯೆಯಾಗಿದ್ದು ಈ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ಇತರೊಂದಿಗೆ ಬೆರೆಯಲು ಹಾಗೂ ಮಾತನಾಡಲು ಸಾಕಷ್ಟು ಹೆದರುತ್ತಾರೆ. ಆತನ ನಡವಳಿಕೆಯಲ್ಲಿ ಬಹಳ ಬದಲಾವಣೆ ಕಂಡುಬರುತ್ತದೆ ಎಂದು ವಿವರಿಸಿದರು.
ಈ ರೀತಿಯ ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವಂತಹ ಯಾವುದಾದರೂ ರೋಗಿ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿದ್ದರೆ ಟೋಲ್ ಫ್ರೀ ಸಂಖ್ಯೆ ೧೪೪೧೬ ಈ ಸಂಖ್ಯೆಗೆ ಕರೆ ಮಾಡಿ ಆಪ್ತ ಸಮಾಲೋಚಕರೊಂದಿಗೆ ನೇರವಾಗಿ ಮಾತನಾಡಬಹುದು. ಈ ರೀತಿಯ ರೋಗ ಲಕ್ಷಣಗಳಿದ್ದಲ್ಲಿ ಅದನ್ನು ಕಡೆಗಣಿಸದೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯುವುದು ಬಹಳ ಅವಶ್ಯಕ. ಇಲ್ಲದಿದ್ದಲ್ಲಿ ಅಂತಹ ರೋಗಿಗಳು ಆತ್ಮಹತ್ಯೆಯಂತಹ ಕೆಲಸಗಳಿಗೆ ಮುಂದಾಗುತ್ತಾರೆ ಎಂದರು.
ಕಾಲೇಜಿನ ಪ್ರಾಂಶುಪಾಲ ಬೆನಡಿಕ್ಟ್ ಆರ್. ಸಲ್ದಾನ ಮಾತನಾಡಿ, ಈ ರೀತಿಯ ಸಮಸ್ಯೆಯಿಂದ ಬಳಲುತ್ತಿರುವಂತಹ ವ್ಯಕ್ತಿಗಳು ನಿಮ್ಮ ಸುತ್ತಮುತ್ತಲಿನ ವಾತಾವರಣದಲ್ಲಿ ಇದ್ದರೆ ಅವರಿಗೆ ಸೂಕ್ತ ಮಾಹಿತಿ ನೀಡಿ ಚಿಕಿತ್ಸೆ ಪಡೆಯುವಂತೆ ನೋಡಿಕೊಳ್ಳಬೇಕು. ಆದಷ್ಟು ಹೆಚ್ಚು ಜನರಿಗೆ ಈ ಮಾನಸಿಕ ಕಾಯಿಲೆ ಬಗ್ಗೆ ತಿಳಿಸುವ ಕೆಲಸ ವಿದ್ಯಾರ್ಥಿಗಳಿಂದ ಆಗಬೇಕು ಎಂದು ಹೇಳಿದರು.