ಕೇಂದ್ರ ಸರ್ಕಾರ ಅನುದಾನ ನೀಡಿಕೆಯಲ್ಲಿ ಹೆಚ್ಚಳ ಮಾಡಿಲ್ಲ ರಾಜ್ಯ ಸರ್ಕಾರದ ಮೇಲೆ ಹೊರೆ ಹೇರಲಾಗಿದ್ದು ಕೇಂದ್ರ ಸರ್ಕಾರ ಅನುದಾನವನ್ನು ಹೆಚ್ಚಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ. ಸಾರ್ವಜನಿಕರು ಅನುದಾನವನ್ನು ದೇಗುಲಗಳಿಗೆ ಕೇಳುವ ಬದಲು ಶಾಲಾ ಕಾಲೇಜುಗಳ ಶೌಚಾಲಯ, ಸಾರ್ವಜನಿಕ ಗ್ರಂಥಾಲಯ ಕಟ್ಟಡಗಳ ನಿರ್ಮಾಣಕ್ಕೆ ಕೇಳಿ ಬಳಸಿಕೊಳ್ಳಬೇಕು.
ಕನ್ನಡಪ್ರಭ ವಾರ್ತೆ ನ್ಯಾಮತಿ
ಕೇಂದ್ರ ಸರ್ಕಾರ ಅನುದಾನ ನೀಡಿಕೆಯಲ್ಲಿ ಹೆಚ್ಚಳ ಮಾಡಿಲ್ಲ ರಾಜ್ಯ ಸರ್ಕಾರದ ಮೇಲೆ ಹೊರೆ ಹೇರಲಾಗಿದ್ದು ಕೇಂದ್ರ ಸರ್ಕಾರ ಅನುದಾನವನ್ನು ಹೆಚ್ಚಿಸಿದರೆ ಎಲ್ಲರಿಗೂ ಅನುಕೂಲವಾಗುತ್ತದೆ. ಸಾರ್ವಜನಿಕರು ಅನುದಾನವನ್ನು ದೇಗುಲಗಳಿಗೆ ಕೇಳುವ ಬದಲು ಶಾಲಾ ಕಾಲೇಜುಗಳ ಶೌಚಾಲಯ, ಸಾರ್ವಜನಿಕ ಗ್ರಂಥಾಲಯ ಕಟ್ಟಡಗಳ ನಿರ್ಮಾಣಕ್ಕೆ ಕೇಳಿ ಬಳಸಿಕೊಳ್ಳಬೇಕು. ಇದರಿಂದ ಸರ್ಕಾರಿ ಶಾಲೆಗಳು ಉಳಿಯುತ್ತವೆ ಎಂದು ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.
ತಾಲೂಕಿನ ಚಟ್ನಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, ಸಾರ್ವಜನಿಕ ಗ್ರಂಥಾಲಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಯಾವುದೇ ಕೆಲಸ, ಕಾರ್ಯಗಳನ್ನು ಅಭಿವೃದ್ದಿ ಪಡಿಸಬೇಕೆಂದರೆ ಜನರ ಸಹಕಾರ ಬಹಳ ಮಹತ್ವವಾಗಿರುತ್ತದೆ ಅಂತಹ ಸಹಕಾರದಿಂದ ಗ್ರಾಮದ ಗ್ರಾಮ ಪಂಚಾಯಿತಿ ಕಟ್ಟಡವು ನಿರ್ಮಾಣವಾಗಿದೆ ಇದಕ್ಕೆ 15ಲಕ್ಷರೂಗಳ ಅನುದಾನವನ್ನು ನೀಡಲಾಗಿದೆ ಎಂದರು.
ಮಹಿಳೆಯರು ತಯಾರಿಸಿದ ದಿನನಿತ್ಯ ಬಳಕೆ ವಸ್ತುಗಳು, ಸಾಂಪ್ರದಾಯಿಕ ಆಹಾರ ಉತ್ಪನ್ನಗಳು, ಗೃಹ ಉಪಯೋಗಿ ವಸ್ತುಗಳು ಸೇರಿದಂತೆ ಹಲವು ವೈವಿದ್ಯಮಯ ಉತ್ಪನ್ನಗಳನ್ನು ವೀಕ್ಷಿಸಿದರು.
ವಿಧಾನ ಪರಿಷತ್ತು ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ಜನವರಿ ತಿಂಗಳಿಗೆ ಅಂತ್ಯವಾಗಲಿದ್ದು ಈ ಬಗ್ಗೆ ಸರ್ಕಾರ ಉಆವುದೇ ಕ್ರಮ ಕೈಗೊಂಡಿಲ್ಲ ಎಂದರು.
ಶಾಸಕ ಡಿ.ಜಿ.ಶಾಂತನಗೌಡರು ಮಾತನಾಡಿ ಗ್ರಾಮದಲ್ಲಿ ಸ್ಮಶಾನ ಜಾಗವನ್ನು ಗುರುತಿಸಿದ್ದು ಒಂದು ತಿಂಗಳಿನಲ್ಲಿ ಮಂಜೂರು ಮಾಡಲಾಗುವುದು. ಸದ್ಯಕ್ಕೆ ಕಾನೂನು ಅಡಿಯ ಪ್ರಕಾರ ಗ್ರಾಮದಲ್ಲಿ ಆಸ್ಪತ್ರೆಯನ್ನು ಮಾಡಲು ಬರುವುದಿಲ್ಲ ಎಂದು ಹೇಳಿದರು.
ಚಟ್ನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ರಂಗಪ್ಪ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಡಿಸಿಸಿ ಬ್ಯಾಂಕ್ ನಿರ್ದೇಶಕ ದೊಡ್ಡೇರಿ ವಿಶ್ವನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲರಾವ್, ಗ್ರಾಪಂ ಮಾಜಿ ಅಧ್ಯಕ್ಷ ಚನ್ನಪ್ಪ, ಗ್ರಾಪಂ ಉಪಾಧ್ಯಕ್ಷ ನವೀನ್ ಎಂ.ಎಸ್., ಸದಸ್ಯ ಮಲ್ಲೇಶಪ್ಪ ಮಾತನಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.