ಕೆಲಸದ ಸ್ಥಳದಲ್ಲಿ ಶಾಲಾ ದಾಖಲಾತಿ ಆಂದೋಲನ

KannadaprabhaNewsNetwork |  
Published : Jun 02, 2024, 01:45 AM IST
ಕಾರಟಗಿಯ ಸಮೀಪದ ಬೇವಿನಾಳ ಕಿರಿಯ ಪ್ರಾಥಮಿಕ ಶಾಲೆ ಮಕ್ಕಳು ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಮಕ್ಕಳ ಶಾಲೆಗೆ ಕಳುಹಿಸುವಂತೆ ಶುಕ್ರವಾರ ಜಾಗೃತಿ ಮೂಡಿಸಿದರು. | Kannada Prabha

ಸಾರಾಂಶ

ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದ ಸ್ಥಳದಲ್ಲಿ ಶಾಲಾ ದಾಖಲಾತಿ ಆಂದೋಲನ ನಡೆಯಿತು.

ಬೇವಿನಾಳ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಂದ ಜಾಗೃತಿ ಕಾರ್ಯಕ್ರಮಕನ್ನಡಪ್ರಭ ವಾರ್ತೆ ಕಾರಟಗಿ

ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದ ಸ್ಥಳದಲ್ಲಿ ಶಾಲಾ ದಾಖಲಾತಿ ಆಂದೋಲನ ನಡೆಯಿತು. ತಮ್ಮ ಮಕ್ಕಳನ್ನು ಶಾಲೆ ಕಳುಹಿಸಿ ಎಂದು ಕೂಲಿ ಕೆಲಸ ಮಾಡುತ್ತಿದ್ದವರಿಗೆ ವಿದ್ಯಾರ್ಥಿಗಳೇ ಮನವಿ ಮಾಡಿದರು.

ಇಲ್ಲಿಗೆ ಸಮೀಪದ ಬೇವಿನಾಳ ಗ್ರಾಮದ ಹೊರವಲಯದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಶುಕ್ರವಾರ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ ನಿರತರ ಮನವೊಲಿಸಿ ಅವರ ಮಕ್ಕಳನ್ನು ಶಾಲೆಗೆ ಕಳುಹಿಸುವ ಭರವಸೆ ಪಡೆದರು.

೬ರಿಂದ ೧೪ ವರ್ಷದ ವರೆಗಿನ ಎಲ್ಲ ಮಕ್ಕಳಿಗೂ ಉಚಿತ ಹಾಗೂ ಕಡ್ಡಾಯ ಶಿಕ್ಷಣ ನೀಡಬೇಕು. ಯಾವ ಮಗವೂ ಶಿಕ್ಷಣದಿಂದ ವಂಚಿತವಾಗಬಾರದೆಂಬ ಮಹಾದಾಸೆಯಿಂದ ಸರ್ಕಾರ ಹಲವು ಯೋಜನಗಳನ್ನು ಜಾರಿಗೊಳಿಸಿದೆ. ಬೇಸಿಗೆಯ ರಜೆಯ ಆನಂತರ ಈಗ ಶಾಲೆಗಳು ಆರಂಭಗೊಂಡಿವೆ. ಬೇವಿನಹಾಳದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ವಿಭಿನ್ನ ರೀತಿಯ ಶಾಲಾ ಪ್ರಾರಂಭೋತ್ಸವ ಹಾಗೂ ದಾಖಲಾತಿ ಆಂದೋಲನಕ್ಕೆ ಶುಕ್ರವಾರ ಸಾಕ್ಷಿಯಾದರು.

ಚಿನ್ನಕ್ಕಿಂತ ಅನ್ನಲೇಸು, ಅನ್ನಕ್ಕಿಂತ ಅಕ್ಷರ ಲೇಸು, ದುಡ್ಡೆ ದೊಡ್ಡಪ್ಪ, ವಿದ್ಯೆ ಅದರಪ್ಪ, ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ... ಎಂಬ ಭಿತ್ತಿಪತ್ರಗಳನ್ನು ಪ್ರದರ್ಶಸುತ್ತ, ಘೋಷಣೆಗಳನ್ನು ಕೂಗುತ್ತ, ಗ್ರಾಮದ ಗಲ್ಲಿ ಗಲ್ಲಿಗಳಲ್ಲಿ ಸಂಚರಿಸುತ್ತ, ಕೊನೆಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಕೂಲಿಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದ ಸ್ಥಳಕ್ಕೆ ದೌಡಾಯಿಸಿದರು. ಅಲ್ಲಿ ದಾಖಲಾತಿ ಜಾಥಾದ ಮೂಲಕ ಅರ್ಹ ವಯಸ್ಸಿನ ಮಕ್ಕಳನ್ನು ಶಾಲೆಗೆ ಸೇರಿಸಲು ಜಾಗೃತಿ ಮೂಡಿಸಿದರು.

‘ಸಾಲಿ ಕಲಿಯದೆ ನಮ್ಮ ಬಾಳೇ ಅತಂತ್ರ ಆಗೈತಿ, ನಮ್ಮ ಮಕ್ಳನ ಖಂಡಿತ ಶಾಲೆಗೆ ಕಳುಹಿಸುವೆವು, ಅವ್ರ ಬದುಕಾದ್ರೂ ಚುಲೋ ಆಗ್ಲಿ'''''''' ಎಂದು ಬಡ ಕೂಲಿಕಾರ್ಮಿಕರು ಹೇಳಿ, ಮಕ್ಕಳನ್ನು ಶಾಲೆಗೆ ಸೇರಿಸುವ ಭರವಸೆ ನೀಡಿದರು.

ಶಾಲೆಯ ಮುಖ್ಯ ಗುರು ಕಳಕೇಶ ಗುಡ್ಲಾನೂರ, ಎಸ್‌ಡಿಎಂಸಿ ಪದಾಧಿಕಾರಿಗಳು, ಗ್ರಾಪಂ ಸಿಬ್ಬಂದಿ, ಆಶಾ ಕಾರ್ಯಕರ್ತೆ ಶ್ರೀದೇವಿ, ರೇಣುಕಾ, ಸುನೀತಾ, ಶಿವಮ್ಮ, ಶಿಕ್ಷಣಪ್ರೇಮಿ ವಿರೂಪಾಕ್ಷಯ್ಯ ಮತ್ತಿತರರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ