ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಿಜಿಎಸ್ ಗ್ಲೋಬಲ್ ಸ್ಕೂಲ್ ವಾಹನವು ಎದುರಿಗೆ ಬಂದ ಬೈಕ್ ಚಾಲಕನಿಗೆ ಡಿಕ್ಕಿ ಹೊಡೆದಿದೆ.
ರಾಮನಗರ: ಶಾಲಾ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಗರದ ಅರ್ಚಕರಹಳ್ಳಿ ಬಳಿಯ ಬೆಂಗಳೂರು - ಮೈಸೂರು ಹಳೆ ಹೆದ್ದಾರಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೈಕ್ ಸವಾರ ಅಮಿತ್ ಗೌಡ (20) ಮೃತರು.
ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಿಜಿಎಸ್ ಗ್ಲೋಬಲ್ ಸ್ಕೂಲ್ ವಾಹನವು ಎದುರಿಗೆ ಬಂದ ಬೈಕ್ ಚಾಲಕನಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಅಮಿತ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ರಾಮನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.