ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬಿತ್ತಲು ವಿಜ್ಞಾನ ವಸ್ತುಪ್ರದರ್ಶನ ಪೂರಕ

KannadaprabhaNewsNetwork |  
Published : Dec 24, 2025, 01:45 AM IST
ಫೋಟೋ: 23 ಹೆಚ್‌ಎಸ್‌ಕೆ 1ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯಲ್ಲಿರುವ ನರ್ಚರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದ ಅರಿಸ್ಟಾಟಲ್ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಪ್ರಾಂಶುಪಾಲೆ ಹೇಮಮಾಲಿನಿ ಕೃಷ್ಣಸ್ವಾಮಿ ಉದ್ಘಾಟಿಸಿ, ವಸ್ತಪ್ರದರ್ಶನ ಮಳಿಗೆಗಳನ್ನು ವೀಕ್ಷಿಸಿದರು. | Kannada Prabha

ಸಾರಾಂಶ

ಹೊಸಕೋಟೆ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವದ ಜೊತೆಗೆ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನ ಪೂರಕವಾಗಲಿದೆ ಎಂದು ನರ್ಚರ್ ಇಂಟರ್ ನ್ಯಾಷನಲ್ ಶಾಲೆ ಪ್ರಾಂಶುಪಾಲೆ ಹೇಮಮಾಲಿನಿ ಕೃಷ್ಣಸ್ವಾಮಿ ತಿಳಿಸಿದರು.

ಹೊಸಕೋಟೆ: ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಮನೋಭಾವದ ಜೊತೆಗೆ ವಿಜ್ಞಾನ ವಿಷಯದ ಬಗ್ಗೆ ಆಸಕ್ತಿ ಹೆಚ್ಚಿಸಲು ವಿಜ್ಞಾನ ವಸ್ತು ಪ್ರದರ್ಶನ ಪೂರಕವಾಗಲಿದೆ ಎಂದು ನರ್ಚರ್ ಇಂಟರ್ ನ್ಯಾಷನಲ್ ಶಾಲೆ ಪ್ರಾಂಶುಪಾಲೆ ಹೇಮಮಾಲಿನಿ ಕೃಷ್ಣಸ್ವಾಮಿ ತಿಳಿಸಿದರು.

ತಾಲೂಕಿನ ಸಮೇತನಹಳ್ಳಿಯಲ್ಲಿರುವ ನರ್ಚರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ನಡೆದ ಅರಿಸ್ಟಾಟಲ್ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಪಠ್ಯಪುಸ್ತಕದ ವಿಷಯದ ಜೊತೆಗೆ ಪ್ರಾಯೋಗಿಕವಾಗಿ ಕೂಡ ವಿಷಯಾಭ್ಯಾಸ ಮಾಡುತ್ತಾರೆ. ಇದರ ಜೊತೆಗೆ ನಲಿ-ಕಲಿ ವಿಷಯ ಪರಿಕಲ್ಪನೆಯೊಂದಿಗೆ ಅರಿಸ್ಟಾಟಲ್ ಹೆಸರಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಆಯೋಜಿಸಿದ್ದು ಮಕ್ಕಳಲ್ಲಿರುವ ಪ್ರತಿಭೆಗೆ ವೇದಿಕೆ ಕಲ್ಪಿಸಿದ್ದೇವೆ ಎಂದರು.

ಶಾಲೆಯ ಅಧ್ಯಕ್ಷ ಇಶ್ರಕ್ ಅಹಮದ್ ಮಾತನಾಡಿ, ಪ್ರಸ್ತುತ ಕಾಲಘಟ್ಟದಲ್ಲಿ ವಿಜ್ಞಾನಕ್ಕೆ ಸಾಕಷ್ಟು ಮಹತ್ವವಿದ್ದು ಸಹಸ್ರಾರು ವಿಜ್ಞಾನಿಗಳು ಆವಿಷ್ಕಾರಗಳನ್ನು ಮಾಡುತ್ತಿದ್ದಾರೆ. ಮಕ್ಕಳಲ್ಲಿ ಸಹ ಆವಿಷ್ಕಾರ ಮನೋಭಾವ ಉಂಟು ಮಾಡುವ ಸಲುವಾಗಿ ವಿಜ್ಞಾನ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಮಕ್ಕಳು ಪೋಷಕರ, ಶಾಲಾ ಶಿಕ್ಷಕರ ಸಹಕಾರ ಪಡೆದು ಹಲವಾರು ವೈಜ್ಞಾನಿಕ ಆವಿಷ್ಕಾರ ಮಾಡಿದ್ದಾರೆ. ಈ ಆವಿಷ್ಕಾರ ಮಕ್ಕಳು ಮುಂದಿನ ಶೈಕ್ಷಣಿಕ ಪ್ರಗತಿಗೆ ಪೂರಕವಾಗಲಿದೆ ಎಂದರು.

ನರ್ಚರ್ ಇಂಟರ್‌ ನ್ಯಾಷನಲ್ ಶಾಲೆ ಸಂಸ್ಥಾಪಕ ಸಂಜೀವ್ ಕರ್, ಶಾಲೆಯ ಅಧ್ಯಕ್ಷ ಇಶ್ರಕ್ ಅಹಮದ್ ಸೇರಿದಂತೆ ಹಲವಾರು ಮುಖಂಡರು ಹಾಜರಿದ್ದರು.

ಫೋಟೋ: 23 ಹೆಚ್‌ಎಸ್‌ಕೆ 1

ಹೊಸಕೋಟೆ ತಾಲೂಕಿನ ಸಮೇತನಹಳ್ಳಿಯಲ್ಲಿರುವ ನರ್ಚರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅರಿಸ್ಟಾಟಲ್ ವಿಜ್ಞಾನ ವಸ್ತು ಪ್ರದರ್ಶನವನ್ನು ಪ್ರಾಂಶುಪಾಲೆ ಹೇಮಮಾಲಿನಿ ಕೃಷ್ಣಸ್ವಾಮಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ