ಭವಿಷ್ಯದ ಮಾರ್ಗದರ್ಶಿ ವಿಜ್ಞಾನ: ರವೀಶ್‌

KannadaprabhaNewsNetwork |  
Published : Sep 03, 2024, 01:39 AM IST
ಚಿಕ್ಕಮಗಳೂರಿನ ಜೂನಿಯರ್ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ತಾಲ್ಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಡಯಟ್ ಉಪನ್ಯಾಸಕ ಕೆ.ಜಿ. ನೀಲಕಂಠಪ್ಪ ಅವರು ಉದ್ಘಾಟಿಸಿದರು. ಬಿಇಓ ರವೀಶ್‌, ಓಂಕಾರಪ್ಪ ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ನಡೆದು ಹೋಗಿರುವುದನ್ನು ಇತಿಹಾಸ ಹೇಳಿದರೆ ವಿಜ್ಞಾನ ಮುಂದೆ ಆಗುವುದನ್ನು ತಿಳಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಸಿ. ರವೀಶ್ ಹೇಳಿದರು.

ವಿಜ್ಞಾನ ವಿಚಾರಗೋಷ್ಠಿ । ವಿಜ್ಞಾನ ನಾಟಕ ಮತ್ತು ವಿಜ್ಞಾನ ವಸ್ತು ಪ್ರದರ್ಶನ,

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ನಡೆದು ಹೋಗಿರುವುದನ್ನು ಇತಿಹಾಸ ಹೇಳಿದರೆ ವಿಜ್ಞಾನ ಮುಂದೆ ಆಗುವುದನ್ನು ತಿಳಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಸಿ. ರವೀಶ್ ಹೇಳಿದರು.

ಜೂನಿಯರ್ ಕಾಲೇಜಿನಲ್ಲಿ ಜಿಪಂ, ತಾಪಂ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತಾಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವೈದ್ಯ, ಇಂಜಿನಿಯರ್ ಮುಂತಾದ ಉನ್ನತ ಹುದ್ದೆಗಳ ಬಗ್ಗೆ ಕನಸು ಕಾಣಬೇಕು. ಅದನ್ನು ನನಸು ಮಾಡಲು ಕಠಿಣ ಪರಿಶ್ರಮದೊಂದಿಗೆ ಯಶಸ್ಸು ಗಳಿಸಿ ಎಂದು ಕವಿಮಾತು ಹೇಳಿದರು.

ಸರ್ಕಾರಿ ಶಾಲೆ, ಆಸ್ಪತ್ರೆಯಲ್ಲಿ ಉಚಿತ ಸೌಲಭ್ಯ ದೊರೆಯುತ್ತವೆ. ಆದರೆ ದೇವರ ದರ್ಶನಕ್ಕೆ ಹೋದರೆ ಶುಲ್ಕ ಪಾವತಿಸ ಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ನೀಡುವ ಸೌಲಭ್ಯ ಸದುಪಯೋಗ ಮಾಡಿಕೊಳ್ಳಿ ಎಂದು ಹೇಳಿದರು.

ವಿದ್ಯಾರ್ಥಿ ಗಳು ಕೌಶಲ್ಯದ ಮೂಲಕ ಬದಲಾವಣೆ ತರಲು ಸಾಧ್ಯವಿದೆ. ಇದಕ್ಕೆ ಯೋಜನಾ ಬದ್ಧವಾಗಿ ನಡೆಯಬೇಕು. ವಿಜ್ಞಾನದಿಂದ ಕ್ರೋಮೋಜೋಮ್‌ಗಳನ್ನು ಬಳಕೆ ಮಾಡಿದರೆ ಎಲ್ಲವೂ ಸರಿದೂಗಿಸಬಹುದು ಎಂದು ತಿಳಿಸಿದರು.

ವಿಜ್ಞಾನಿಗಳು ಸಂಶೋಧನೆ ಮಾಡಿದಂತೆ ನಿಮಗೆ ಸಿಕ್ಕ ಅವಕಾಶ ಬಳಸಿಕೊಂಡು ನೀವೂ ಸಹ ಹೊಸ ಹೊಸ ಆವಿಷ್ಕಾರ ಗಳನ್ನು ಮಾಡಿ ಎಂದು ಸಲಹೆ ನೀಡಿದರು.

ಶಿಕ್ಷಣ ಸಂಯೋಜಕ ಕೃಷ್ಣಮೂರ್ತಿ ರಾಜ್ ಅರಸ್ ಮಾತನಾಡಿ, ಸ್ಪರ್ಧೆಗಳ ನಿಯಮ ಸರಿಯಾಗಿ ಪಾಲಿಸಿ ವಿಚಾರ ಮಂಡನೆ ಮಾಡಿ ಜಯಗಳಿಸಿ ಎಂದು ಹಾರೈಸಿದರು.

ತಾಲೂಕು ಮಟ್ಟದ ಈ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಎಂಬ ಮೂರು ವಿಭಾಗಗಳಿದ್ದು, ನಗದು ಬಹುಮಾನ ನೀಡಲಾಗುವುದು. ವಿಜೇತರಾದ ವಿದ್ಯಾರ್ಥಿಗಳು ತಾವು ಹೊಂದಿದ ಬ್ಯಾಂಕ್‌ ಖಾತೆ ಪಾಸ್‌ಪುಸ್ತಕದ ಜೆರಾಕ್ಸ್ ಪ್ರತಿಯನ್ನು ಮೂರು ದಿನಗಳ ಒಳಗಾಗಿಗೆ ನೋಡಲ್ ಅಧಿಕಾರಿಗಳಿಗೆ ನೀಡುವಂತೆ ತಿಳಿಸಿದರು.

ಶಿಕ್ಷಕರಿಗೆ ಜಿಲ್ಲಾಮಟ್ಟದಲ್ಲಿ ಭಾಗವಹಿಸಲು ಅವಕಾಶ ಇದ್ದು, ತಾಲೂಕು ಮಟ್ಟದಲ್ಲಿ ಎರಡು ವಿಭಾಗದಲ್ಲಿ ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶ ನೀಡಲಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಡಯಟ್ ಉಪನ್ಯಾಸಕ ಕೆ.ಜಿ. ನೀಲಕಂಠಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ಗೋಷ್ಠಿ, ವಿಜ್ಞಾನ ನಾಟಕ, ವಸ್ತುಪ್ರ ದರ್ಶನದಲ್ಲಿ ಭಾಗವಹಿಸುವ ಕುರಿತು ನಿಬಂಧನೆಗಳ ಬಗ್ಗೆ ವಿವರ ನೀಡಿದರು.

ಇಂದು ನಡೆಯುತ್ತಿರುವ ತಾಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ವಿಜೇತರಾದವರಿಗೆ ಸೆ.18 ರಂದು ಚಿಕ್ಕಮಗಳೂರಿನ ಡಯಟ್‌ನಲ್ಲಿ ಜಿಲ್ಲಾ ಮಟ್ಟದ ವಿಜ್ಞಾನಗೋಷ್ಠಿ ನಡೆಯಲಿದ್ದು, ಅವಕಾಶ ಕಲ್ಪಿಸಲಾಗುವುದು. ಸೆ.20 ರಂದು ಎಂಇಎಸ್ ನಲ್ಲಿ ಜಿಲ್ಲಾಮಟ್ಟದ ನಾಟಕ ಪ್ರದರ್ಶನ ನಡೆಯಲಿದೆ ಎಂದರು.

ತಾಲೂಕು ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದವರು ಜಿಲ್ಲಾ ಮಟ್ಟದ ನಾಟಕ ಪ್ರದರ್ಶನದಲ್ಲಿ ಭಾಗವಹಿಸಬಹುದು. ಒಂದು ಪ್ರದರ್ಶನಕ್ಕೆ 8 ಜನ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುವುದು. 6 ಜಿಲ್ಲೆಗಳನ್ನು ಸೇರಿಸಿ ವಿಭಾಗ ಮಟ್ಟ ಮಾಡಿದ್ದು, ಜಿಲ್ಲಾಮಟ್ಟದಲ್ಲಿ ಗೆದ್ದವರು ಭಾಗವಹಿಸಲು ಅವಕಾಶ ನೀಡಲಾಗಿದೆ. ವಿಭಾಗ ಮಟ್ಟದಲ್ಲಿ ವಿಜೇತರಾದವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಲಿದ್ದಾರೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಎಚ್.ಎಂ. ಓಂಕಾರಪ್ಪ, ನೀಲಕಂಠಪ್ಪ, ಎ.ಎಂ. ನಾಗರಾಜ್, ಬಿ.ವಿ. ಗಂಗಾಧರ್, ಕೆ.ಎಂ. ಮಂಜುನಾಥ್, ಪಿ. ಪ್ರಕಾಶ್, ತೀರ್ಪುಗಾರರಾಗಿ ಕೆ.ಆರ್‌. ಪ್ರಭಾಕರ್ ಭಾಗವಹಿಸಿದ್ದರು. ಶಿಕ್ಷಣ ಸಂಯೋಜಕ ಜಿ.ಎಂ. ಜಗದೀಶ್ ಸ್ವಾಗತಿಸಿ, ಎಸ್‌.ಬಿ. ಮಧು ವಂದಿಸಿದರು.

2 ಕೆಸಿಕೆಎಂ 2

ಚಿಕ್ಕಮಗಳೂರಿನ ಜೂನಿಯರ್ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿ, ವಿಜ್ಞಾನ ನಾಟಕ ಮತ್ತು ವಿಜ್ಞಾನ ವಸ್ತು ಪ್ರದರ್ಶನವನ್ನು ಡಯಟ್ ಉಪನ್ಯಾಸಕ ಕೆ.ಜಿ. ನೀಲಕಂಠಪ್ಪ ಉದ್ಘಾಟಿಸಿದರು. ಬಿಇಓ ರವೀಶ್‌, ಓಂಕಾರಪ್ಪ ಇದ್ದರು.

-------------------------------

PREV

Recommended Stories

‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ