ಜೀವನದ ಗುಣಮಟ್ಟ ಸುಧಾರಿಸಲು ವಿಜ್ಞಾನ ಅವಶ್ಯಕ: ಡಾ.ಅರುಣ ಕುಮಾರ್

KannadaprabhaNewsNetwork |  
Published : Mar 14, 2026, 01:45 AM IST
13 HRR. 01ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಹಾಗೂ ರಸಾಯನಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಥರ್ಮೋಡೈನಮಿಕ್ಸ್’ (ಉಷ್ಣಬಲ ವಿಜ್ಞಾನ) ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೈನಂದಿನ ಜೀವನ ಸುಧಾರಿಸಲು ಮತ್ತು ನಾವೀನ್ಯತೆ ಹೆಚ್ಚಿಸಲು ವಿಜ್ಞಾನ ಅವಶ್ಯಕವಾಗಿದೆ. ಜನಜೀವನದ ಗುಣಮಟ್ಟವನ್ನು ಸುಧಾರಿಸಲು ವಿಜ್ಞಾನ ಸಹಕಾರಿಯಾಗಿದೆ ಎಂದು ಎಸ್.ಜೆ.ವಿ.ಪಿ. ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅರುಣ ಕುಮಾರ್ ಟಿ. ಬುದ್ಧನವರ್ ಹೇಳಿದ್ದಾರೆ.

- ಹರಿಹರ ಸರ್ಕಾರಿ ಕಾಲೇಜಿನಲ್ಲಿ ‘ಥರ್ಮೋಡೈನಮಿಕ್ಸ್’ ವಿಶೇಷ ಉಪನ್ಯಾಸ

- - -

ಕನ್ನಡಪ್ರಭ ವಾರ್ತೆ ಹರಿಹರ

ದೈನಂದಿನ ಜೀವನ ಸುಧಾರಿಸಲು ಮತ್ತು ನಾವೀನ್ಯತೆ ಹೆಚ್ಚಿಸಲು ವಿಜ್ಞಾನ ಅವಶ್ಯಕವಾಗಿದೆ. ಜನಜೀವನದ ಗುಣಮಟ್ಟವನ್ನು ಸುಧಾರಿಸಲು ವಿಜ್ಞಾನ ಸಹಕಾರಿಯಾಗಿದೆ ಎಂದು ಎಸ್.ಜೆ.ವಿ.ಪಿ. ಪದವಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಅರುಣ ಕುಮಾರ್ ಟಿ. ಬುದ್ಧನವರ್ ಹೇಳಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ. ಹಾಗೂ ರಸಾಯನ ಶಾಸ್ತ್ರ ವಿಭಾಗದ ಸಹಯೋಗದಲ್ಲಿ ಗುರುವಾರ ಆಯೋಜಿಸಲಾಗಿದ್ದ ‘ಥರ್ಮೋಡೈನಮಿಕ್ಸ್’ (ಉಷ್ಣಬಲ ವಿಜ್ಞಾನ) ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರಸಾಯನ ಶಾಸ್ತ್ರವು ಭೌತಿಕ ವಿಜ್ಞಾನದ, ಜೀವ ವಿಜ್ಞಾನದ ಮತ್ತು ಪರಿಸರ ವಿಜ್ಞಾನದ ನಡುವಿನ ಸೇತುವೆಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ವಿವರಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಎಂ.ಎನ್. ರಮೇಶ್ ಮಾತನಾಡಿ, ಭವಿಷ್ಯಕ್ಕೆ ಅನುಕೂಲವಾಗುವ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಹಾಯವಾಗುವಂತಹ ಸೌಲಭ್ಯಗಳನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಒದಗಿಸಲಾಗುತ್ತಿದೆ. ವಿಜ್ಞಾನ ಅಧ್ಯಯನದ ವಿದ್ಯಾರ್ಥಿಗಳು ಆಸಕ್ತಿಯಿಂದ ಜ್ಞಾನವನ್ನು ಪಡೆದು, ಶಿಕ್ಷಣ ಪಡೆದ ಸಂಸ್ಥೆಗೂ ಪೋಷಕರಿಗೂ ಕೀರ್ತಿ ತರುವಂತೆ ತಿಳಿಸಿದರು.

ಐ.ಕ್ಯೂ.ಎಸ್.ಸಿ. ಸಹ ಸಂಯೋಜಕ ಅಬ್ದುಲ್ ಬಷೀರ್ ಮಾತನಾಡಿ, ವಿದ್ಯಾರ್ಥಿಗಳು ಕುತೂಹಲದ ಗುಣ ಬೆಳೆಸಿಕೊಂಡರೆ, ಪ್ರಶ್ನೆ ಮಾಡುವ ಪ್ರವೃತ್ತಿ ವೃದ್ಧಿಯಾಗುತ್ತದೆ. ಅದರಿಂದ ಹೊಸ ವಿಷಯಗಳನ್ನು ಆವರಿಸಲು ಸಹಾಯಕವಾಗುತ್ತದೆ. ಸಾಮಾಜಿಕ ವ್ಯವಸ್ಥೆಯಲ್ಲಿ ಇರುವ ಸಮಸ್ಯೆಗಳನ್ನು ಗುರುತಿಸಿ, ಅದಕ್ಕೆ ಆವಿಷ್ಕಾರ ಅಥವಾ ಸಂಶೋಧನೆಗಳ ಮೂಲಕ ಪರಿಹಾರ ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಪ್ರೇರೇಪಿಸಿದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಮನೋಹರ ಬಿ.ಎಂ. ಮಾತನಾಡಿದರು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ಶಮಾ ತುಮ್ಮಿನಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಅತಿಥಿಗಳ ಪರಿಚಯಿಸಿ, ಸ್ವಾಗತಿಸಿದರು. ಪ್ರಥಮ ಬಿ.ಎಸ್ಸಿ ವಿದ್ಯಾರ್ಥಿ ಹರೀಶ್ ಪ್ರಾರ್ಥಿಸಿದರು. ವಿಭಾಗದ ಉಪನ್ಯಾಸಕ ಡಾ.ವಿಷ್ಣು ಜಿ. ವಂದಿಸಿದರು.

- - -

-13 HRR. 01:

ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ. ಹಾಗೂ ರಸಾಯನ ಶಾಸ್ತ್ರ ವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ಥರ್ಮೋಡೈನಮಿಕ್ಸ್’ (ಉಷ್ಣಬಲ ವಿಜ್ಞಾನ) ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಡಾ.ಅರುಣ ಕುಮಾರ್ ಟಿ. ಬುದ್ಧನವರ್ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರಹೊಸಹಳ್ಳಿ ಭದ್ರಕಾಳಮ್ಮ ವೀರಭದ್ರಸ್ವಾಮಿ ಬ್ರಹ್ಮರಥೋತ್ಸವ
ಜಿಲ್ಲೆಗೂ ವ್ಯಾಪಿಸಿದ ಗ್ಯಾಸ್‌ ಟ್ರಬಲ್‌: ಹೋಟೆಲ್‌ಗಳು ಅತಂತ್ರ