ವಿಜ್ಞಾನ ಮಾನವನ ಏಳಿಗೆಯ ರಹದಾರಿ: ಎಸ್‌ಪಿ ಶೇಖರ್

KannadaprabhaNewsNetwork |  
Published : Mar 04, 2026, 02:00 AM IST
01 HRR. 01 & 01 Aಹರಿಹರ ತಾಲೂಕಿನ ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೆಚ್. ಟಿ. ಶೇಖರ್ ಉದ್ಘಾಟಿಸಿ, ವೀಕ್ಷಿಸಿ ಮಾತನಾಡಿದರು. | Kannada Prabha

ಸಾರಾಂಶ

ವಿಜ್ಞಾನ ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಲ್ಲ. ಇಂದಿನ ಈ ಜ್ಞಾನ ನಾಳಿನ ತಂತ್ರಜ್ಞಾನದ ಬೆಳವಣಿಗೆಗೆ ಪೂರಕವಾಗಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಹೇಳಿದ್ದಾರೆ.

- ಹರಿಹರ ತಾ. ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ಸ್ಕೂಲ್‌ನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

- - -

ಕನ್ನಡಪ್ರಭ ವಾರ್ತೆ ಹರಿಹರ

ವಿಜ್ಞಾನ ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಲ್ಲ. ಇಂದಿನ ಈ ಜ್ಞಾನ ನಾಳಿನ ತಂತ್ರಜ್ಞಾನದ ಬೆಳವಣಿಗೆಗೆ ಪೂರಕವಾಗಬೇಕು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಟಿ. ಶೇಖರ್ ಹೇಳಿದರು.

ತಾಲೂಕಿನ ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ವಿಜ್ಞಾನವನ್ನು ಕೇವಲ ಪರೀಕ್ಷೆಗೆ ಮಾತ್ರ ಓದದೇ, ಪ್ರಶ್ನಿಸುವ ಮನೋಭಾವ ಮತ್ತು ಸಂಶೋಧನಾ ಚಿಂತನೆ ಬೆಳೆಸಿಕೊಳ್ಳಲು ಬಳಸಿಕೊಳ್ಳಬೇಕು. ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ. ಮಕ್ಕಳಲ್ಲಿ ಕುತೂಹಲ, ಪರಿಶ್ರಮ, ಸತ್ಯನಿಷ್ಠೆ ಹಾಗೂ ಪೋಷಕರನ್ನು ಗೌರವಿಸುವ ಮನೋಭಾವ ಇರಬೇಕು ಎಂದರು.

ಜೀವನದಲ್ಲಿ ಬರುವಂತಹ ಕಷ್ಟಗಳನ್ನು ಮೆಟ್ಟಿ ನಿಲ್ಲುವ ಮನೋಸ್ಥೈರ್ಯ ಬೆಳೆಸಿಕೊಳ್ಳಬೇಕು. ವಿಜ್ಞಾನವು ಸಮಾಜದ ಅಭಿವೃದ್ಧಿಗೆ ದಾರಿ ತೋರಿಸುವ ಬೆಳಕು. ಅದನ್ನು ಸದುಪಯೋಗ ಮಾಡಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖ್ಯ ಅತಿಥಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿವೃತ್ತ ಜಂಟಿ ನಿರ್ದೇಶಕ ಲಿಂಗರಾಜ್ ಮಾತನಾಡಿ, ಇಂದು ನಾವು ಆಚರಿಸುತ್ತಿರುವ ವಿಜ್ಞಾನ ದಿನಾಚರಣೆ ಕೇವಲ ಒಂದು ದಿನಾಚರಣೆ ಅಲ್ಲ. ಭಾರತದ ಮಹಾನ್ ಭೌತಶಾಸ್ತ್ರಜ್ಞ, ಜಗತ್ ಪ್ರಸಿದ್ಧ ಸರ್ ಸಿ.ವಿ.ರಾಮನ್ ಅವರು ಫೆ.28ರಂದು ಅವರ ರಾಮನ್ ಪರಿಣಾಮ ಕಂಡುಹಿಡಿದ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸಲಾಗುತ್ತದೆ. ಇದು ಅವರ ಜ್ಞಾನಕ್ಕೆ, ಸಂಶೋಧನೆಗೆ ಹಾಗೂ ಚಿಂತನೆಗೆ ನೀಡುವ ಗೌರವವಾಗಿದೆ ಎಂದರು.

ಹಾಗಾಗಿ ಈ ಎಲ್ಲ ಮನೋಭಾವಗಳು ನಮ್ಮಲ್ಲಿ ಬೆಳೆಯಬೇಕಾದರೆ, ನಮಗೆ ವ್ಯವಸ್ಥಿತವಾದ ಜ್ಞಾನ ಬೇಕು. ಆದ್ದರಿಂದ ವಿದ್ಯಾರ್ಥಿಗಳು ಏಕೆ? ಹೇಗೆ? ಎಂಬ ಪ್ರಶ್ನೆಗಳನ್ನು ಕೇಳುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪ್ರಶ್ನೆಯೇ ಸಂಶೋಧನೆಯ ಮೊದಲ ಹೆಜ್ಜೆ. ಉತ್ತಮ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕುತೂಹಲ ಹುಟ್ಟಿಸುತ್ತ ಗುರಿಯೆಡೆಗೆ ದಾರಿ ತೋರಿಸಬೇಕು. ವಿದ್ಯಾರ್ಥಿಗಳು ತಮ್ಮ ಕನಸುಗಳನ್ನು ದೊಡ್ಡದಾಗಿಸಿಕೊಂಡು ತಮ್ಮ ಗುರಿಯೆಡೆಗೆ ಸಾಗಬೇಕು. ಗುರಿ ಇಲ್ಲದ ಜೀವನ ಚುಕ್ಕಾಣಿ ಇಲ್ಲದ ಹಡಗಿನಂತೆ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಮಕ್ಕಳು ಪ್ರದರ್ಶಿಸಿದ ವಿವಿಧ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಪ್ರಶಂಸೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ದಾವಣಗೆರೆ ಡಿಎಆರ್ ಪೊಲೀಸ್ ಉಪಾಧೀಕ್ಷ ಪ್ರಕಾಶ್ ಪಿ.ಬಿ., ಪ್ರಾಂಶುಪಾಲೆ ಚಂಪಾ ಸತೀಶ್, ಬೋಧಕ- ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಪಾಲ್ಗೊಂಡಿದ್ದರು.

- - -

-01HRR.01 & 01 A:

ಹರಿಹರ ತಾಲೂಕಿನ ಕೊಂಡಜ್ಜಿಯ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ವಿಜ್ಞಾನ ದಿನ ಕಾರ್ಯಕ್ರಮವನ್ನು ಜಿಲ್ಲಾ ಎಸ್‌ಪಿ ಎಚ್.ಟಿ. ಶೇಖರ್ ಉದ್ಘಾಟಿಸಿ, ವೀಕ್ಷಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್‌ಸಿ, ಎಸ್‌ಟಿಗೆ ವರ್ಗಕ್ಕೆ ಸರ್ಕಾರ ಘೋರ ಅನ್ಯಾಯ
ಕೋಲಾರ ಜಿಲ್ಲೆಗೆ ಕೃಷ್ಣಾನದಿ ನೀರು ಕೊಡಿ: ರೈತ ಸಂಘ