ಕನ್ನಡಪ್ರಭ ವಾರ್ತೆ ಬೀದರ್
ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ್ನ ಪ್ರಾಣಿ ಆಹಾರ ವಿಜ್ಞಾನ ವಿಭಾಗದಿಂದ ಹೈನು ರಾಸುಗಳ ಉತ್ತಮ ಆರೋಗ್ಯ ಮತ್ತು ಉತ್ಪಾದನೆಗಾಗಿ ವೈಜ್ಞಾನಿಕ ಆಹಾರ ಪದ್ಧತಿಗಳು ಎಂಬ ಶಿರ್ಷಿಕೆಯಲ್ಲಿ ನಡೆದ ಎರಡು ದಿನಗಳ ತರಬೇತಿ ಶಿಬಿರದಲ್ಲಿ ಮಾತನಾಡಿ, ಹೈನುಗಾರಿಕೆಯಲ್ಲಿ ತೊಡಗಿರುವ ರೈತರು ಹೆಚ್ಚಿನ ಮಟ್ಟದಲ್ಲಿ ವೈಜ್ಞಾನಿಕ ಮಾಹಿತಿ ಪಡೆದರೆ ಉತ್ತಮ ಜೀವನ ನಿರ್ವಹಿಸಲು ಸಾಧ್ಯ ಎಂದು ಹೇಳಿದರು.
ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಅವರು ವೈಜ್ಞಾನಿಕ ಮತ್ತು ಸಾಂಪ್ರದಾಯಿಕ ಪದ್ಧತಿಗಳ ಮೂಲಕ ಸಮಗ್ರ ಕೃಷಿ ಮತ್ತು ಸುಸ್ಥಿರ ಹೈನುಗಾರಿಕೆಯಿಂದ ರೈತರು ನೆಮ್ಮದಿ ಜೀವನ ನಡೆಸಲು ಸಾಧ್ಯ ಎಂದರು. ಪಶುವೈದ್ಯಕೀಯ ಮಹಾವಿದ್ಯಾಲಯದ ಡಿನ್ ಡಾ.ಎಂ.ಕೆ.ತಾಂದಳೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ರೀತಿ ತರಬೇತಿ ಕಾರ್ಯಕ್ರಮಗಳು ಮಹಾವಿದ್ಯಾಲಯದ ಆವರಣದಲ್ಲಿ ನಡೆಸಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಪಿ ಭತಮೂರ್ಗೆ ಚಾಲನೆ ನೀಡಿ, ರೈತರು ತರಬೇತಿ ಪ್ರಯೋಜನ ಪಡೆದು ಹೈನುಗಾರಿಕೆಯಲ್ಲಿ ವೃದ್ಧಿಗೊಳಿಸಿ, ಬೀದರ್ನಲ್ಲಿ ಹಾಲಿನ ಕ್ಷೀರ ಕ್ರಾಂತಿಯಾಗಲಿ ಎಂದರು. ತರಬೇತಿಯಲ್ಲಿ ಬೀದರ್ ಜಿಲ್ಲೆಯ ಸುಮಾರು 45 ರೈತರು ಭಾಗವಹಿಸಿ, ಹೈನುಗಾರಿಕೆಯಲ್ಲಿನ ಇತ್ತೀಚಿನ ತಂತ್ರಜ್ಞಾನಗಳು, ರಸಮೇವು ತಯಾರಿಕೆ, ಪಶು ಆಹಾರ ತಯಾರಿಕೆ, ಪಶು ಆಹಾರದ ಗುಣಮಟ್ಟ ಪರೀಕ್ಷೆ ಮತ್ತು ಇನ್ನಿತರ ವೈಜ್ಞಾನಿಕ ಮಾಹಿತಿ ಮತ್ತು ಪ್ರಾತ್ಯಕ್ಷಿತೆಯನ್ನು ನುರಿತ ತಜ್ಞರಿಂದ ಪಡೆದುಕೊಂಡರು.