ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆಕನ್ನಡಪ್ರಭ ವಾರ್ತೆ ಹೊಸಪೇಟೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಬುಧವಾರ ಮಾತನಾಡಿದ ಅವರು, ನಗರ, ಪಟ್ಟಣಗಳಲ್ಲಿ ವೇಗವಾಗಿ ವಾಹನಗಳನ್ನು ಚಲಾಯಿಸುತ್ತಿರುವ ಅನೇಕ ದೂರುಗಳು ಬಂದ ಹಿನ್ನೆಲೆ ವೇಗ ನಿಯಂತ್ರಣಕ್ಕೆ ಸಣ್ಣ ರಸ್ತೆ ತಡೆಗಳನ್ನು ಅಳವಡಿಸಬೇಕಾಗಿದೆ. ಶಾಲಾ, ಕಾಲೇಜುಗಳ ರಸ್ತೆ ಸೇರಿದಂತೆ ಹೆಚ್ಚು ವಾಹನಗಳು ಸಂಚರಿಸುವ ರಸ್ತೆ ಗುರುತಿಸಿ, ಅನೇಕ ಅಪಘಾತಗಳಲ್ಲಿ ಸಾವಿನ ಪ್ರಕರಣಗಳಿಲ್ಲದಿದ್ದರೂ, ಸವಾರರು ಗಂಭೀರ ಗಾಯಾಳುಗಳಾಗಿ ನಿರಂತರ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂಚಾರಕ್ಕೂ ತೊಂದರೆ ಆಗದಂತೆ ವಾಹನಗಳ ವೇಗ ನಿಯಂತ್ರಿಸುವ ನಿಟ್ಟಿನಲ್ಲಿ ಕೆಲ ಕ್ರಮಗಳನ್ನು ವಹಿಸಬೇಕಿದೆ ಎಂದರು.
ಎನ್ಎಚ್ಎಐ ಅಧಿಕಾರಿಗಳ ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಟ್ಟು 6 ಕಡೆ ಬ್ಲಾಕ್ ಸ್ಪಾಟ್ಗಳನ್ನು ಗುರುತಿಸಿ ಈಗಾಗಲೇ 5 ಬ್ಲಾಕ್ ಸ್ಪಾಟ್ಗಳನ್ನು ಸರಿಪಡಿಸಲಾಗಿದೆ. ಉಳಿದ 1 ಬ್ಲಾಕ್ ಸ್ಪಾಟ್ನ್ನು ಆದಷ್ಟು ಬೇಗ ಪೂರೈಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಹೊಸಪೇಟೆ ನಗರದಲ್ಲಿ ಮಳೆಯಿಂದಾಗಿ ರಸ್ತೆ ಮೇಲೆ ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿದೆ. ರಸ್ತೆಯ ಮೇಲಿನ ನೀರು ಸರಾಗವಾಗಿ ಚರಂಡಿಗಳಿಗೆ ಹರಿಯುವಂತೆ ಕ್ರಮವಹಿಸಬೇಕು. ರಾಷ್ಟ್ರೀಯ ಹೆದ್ದಾರಿ ಹೊಸಹಳ್ಳಿ ರಸ್ತೆಯ ಬಳಿ 300 ಮೀಟರ್ ಉದ್ದದ ಚರಂಡಿ ನಿರ್ಮಿಸುವಂತೆ ಹಾಗೂ ರಸ್ತೆಯ ಮೇಲಿನ ಕಸ ತೆರವುಗೊಳಿಸಬೇಕು ಎಂದು ಸೂಚಿಸಿದರು.ಅರಸೀಕೆರೆಯಿಂದ ಮತ್ತಿಹಳ್ಳಿಗೆ ಹೋಗುವ ರಸ್ತೆ ಮಾರ್ಗದಲ್ಲಿ ಎರಡು ಕಿಲೋಮೀಟರ್ನಷ್ಟು ವಾಹನಗಳು ಸಂಚರಿಸಲು ಸಂಪೂರ್ಣ ರಸ್ತೆ ಹದಗೆಟ್ಟಿದೆ. ಎನ್ಎಚ್ಎಐ ಮರಿಯಮ್ಮನಹಳ್ಳಿಯ ಹತ್ತಿರ ಡಣಾಯಕನಕೆರೆ, ದೇವಲಾಪುರ ಮತ್ತು ಗೊಲ್ಲರಹಳ್ಳಿ ಮೂರು ರೋಡ್ ಕ್ರಾಸ್ ಬಳಿ ಲೈಟ್ ಮತ್ತು ರಸ್ತೆತಡೆಗಳನ್ನು ಆಳವಡಿಸಬೇಕು. ನಿರಂತರ ಮಳೆಯಿಂದಾಗಿ ರಸ್ತೆಗಳಲ್ಲಿ ಗುಂಡಿಗಳಲ್ಲಿ ನೀರು ನಿಲ್ಲದಂತೆ ಮುಚ್ಚಲು ಕ್ರಮವಹಿಸಬೇಕು. ರಸ್ತೆಗಳಲ್ಲಿ ಅಪಘಾತ ಪ್ರಕರಣಗಳನ್ನು ತಗ್ಗಿಸುವಲ್ಲಿ ಪಿಡಬ್ಲ್ಯುಡಿ ಅಧಿಕಾರಿಗಳ ಪಾತ್ರ ಹೆಚ್ಚಾಗಿದೆ. ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳು ನಿರ್ಲಕ್ಷಿಸದೇ ಎಲ್ಲಾ ರಸ್ತೆಗಳ ಮೇಲೆ ನಿಗಾವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಸಾರಿಗೆ ಇಲಾಖೆ, ಪಿಡಬ್ಲ್ಯುಡಿ, ಎನ್ಎಚ್ಎಐ ಸೇರಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.