ಸ್ಕೌಟ್- ಗೈಡ್ಸ್ ಸ್ವಯಂ ಪ್ರೇರಿತ ಶಿಸ್ತಿನ ಜೀವನ ಆಯ್ಕೆ: ಬಿ.ಎಲ್. ಶಂಕರ್

KannadaprabhaNewsNetwork |  
Published : Oct 10, 2024, 02:29 AM IST
ಚಿಕ್ಕಮಗಳೂರಿನ ಬಿಜಿಎಸ್‌ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಬ್ ಮತ್ತು ಬುಲ್‌ಬುಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಡಾ.ಬಿ.ಎಲ್. ಶಂಕರ್ ಅವರು ಮಾತನಾಡಿದರು. ಶಾಸಕ ತಮ್ಮಯ್ಯ, ಎ.ಎನ್‌. ಮಹೇಶ್‌, ಡಾ. ಅಂಶುಮಂತ್‌, ಎಂ.ಎನ್‌. ಷಡಕ್ಷರಿ ಹಾಗೂ ಇತರರು ಇದ್ದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಇತ್ತೀಚಿನ ದಿನಗಳಲ್ಲಿ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಸ್ಕೌಟಿಂಗ್ ಪ್ರಚಲಿತದಲ್ಲಿರುವುದನ್ನು ಕಾಣಬಹುದು. ಸ್ವಯಂಪ್ರೇರಿತ ಶಿಸ್ತಿನ ಜೀವನದ ಆಯ್ಕೆ ಇಂತಹ ಸಂಸ್ಥೆಗಳಿಂದ ಸಾಧ್ಯ ಎಂದು ಕರ್ನಾಟಕ ರಾಜ್ಯ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಹಾಗೂ ವಿಧಾನಸಭೆ ಮಾಜಿ ಅಧ್ಯಕ್ಷ ಡಾ. ಬಿ.ಎಲ್. ಶಂಕರ್‌ ಹೇಳಿದರು.

ರಾಜ್ಯಮಟ್ಟದ ಐದು ದಿನಗಳ ಕಬ್ ಮತ್ತು ಬುಲ್‌ಬುಲ್ ಉತ್ಸವಕ್ಕೆ ತೆರ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಇತ್ತೀಚಿನ ದಿನಗಳಲ್ಲಿ ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಸ್ಕೌಟಿಂಗ್ ಪ್ರಚಲಿತದಲ್ಲಿರುವುದನ್ನು ಕಾಣಬಹುದು. ಸ್ವಯಂಪ್ರೇರಿತ ಶಿಸ್ತಿನ ಜೀವನದ ಆಯ್ಕೆ ಇಂತಹ ಸಂಸ್ಥೆಗಳಿಂದ ಸಾಧ್ಯ ಎಂದು ಕರ್ನಾಟಕ ರಾಜ್ಯ ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಹಾಗೂ ವಿಧಾನಸಭೆ ಮಾಜಿ ಅಧ್ಯಕ್ಷ ಡಾ. ಬಿ.ಎಲ್. ಶಂಕರ್‌ ಹೇಳಿದರು.ಭಾರತ್ ಸ್ಕೌಟ್ ಮತ್ತು ಗೈಡ್ ಜಿಲ್ಲಾ ಸಂಸ್ಥೆಯಿಂದ ಹೌಸಿಂಗ್ ಬೋರ್ಡ್‌ನ ಬಿಜಿಎಸ್ ಶಾಲಾ ಆವರಣದಲ್ಲಿ ಆಯೋಜಿಸಿದ್ದ 5 ದಿನಗಳ ಕಬ್ ಮತ್ತು ಬುಲ್‌ಬುಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಯಾವುದೇ ಅಪೇಕ್ಷೆ ಇಲ್ಲದೆ ನಿಸ್ವಾರ್ಥ ಸೇವೆಯನ್ನು ನಾವು ಸ್ಕೌಟಿಂಗ್‌ನಲ್ಲಿ ನೋಡಲು ಸಾಧ್ಯ, ಈ ರೀತಿ ಸಂಸ್ಥೆಗಳು ಮಕ್ಕಳನ್ನು ವಿಶ್ವಮಾನವನ್ನಾಗಿ ಮಾಡಲು ಸಹಕಾರಿಯಾಗಿವೆ ಎಂದರು.

ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ಎನ್ನುವ ನಾಣ್ಣುಡಿಯಂತೆ ಶಿಸ್ತು, ಸಮಯಪ್ರಜ್ಞೆ, ವಿಧೇಯತೆ, ರಾಷ್ಟ್ರಪ್ರೇಮ, ಸೇವೆ ಇಂತಹ ಒಳ್ಳೆಯ ನಡತೆಗಳನ್ನು ಮಕ್ಕಳಿಗೆ ಕಲಿಸುವಲ್ಲಿ ಈ ಸ್ಕೌಟ್ ಚಳುವಳಿ ಮಹತ್ತರ ಪಾತ್ರ ವಹಿಸಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಮಕ್ಕಳು ಸಹಬಾಳ್ವೆ ಮೂಲಕ ಬ್ರಾತೃತ್ವ ಬೆಳೆಸಿಕೊಳ್ಳುತ್ತಾರೆ ಎಂದು ಹೇಳಿದರು.

ಉತ್ಸವದ ಅಂಗವಾಗಿ ಹೊರತರಲಾದ ದಿಕ್ಸೂಚಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದ ಭದ್ರ ಕಾಡಾ ಅಧ್ಯಕ್ಷ ಡಾ. ಅಂಶುಮಂತ್ ಪುಟ್ಟ ಮಕ್ಕಳು ಇಂತಹ ಸಂಸ್ಥೆಗಳ ಸದಸ್ಯರಾಗಿ ದೇಶಕ್ಕೆ ಕೀರ್ತಿ ತಂದು ದೇಶದ ಉತ್ತಮ ಭವಿಷ್ಯ ರೂಪಿಸಬೇಕು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್‌.ಡಿ. ತಮ್ಮಯ್ಯ ಮಾತನಾಡಿ, ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ವಿದ್ಯಾರ್ಥಿಗಳಲ್ಲಿ ಕೌಶಲ್ಯಗಳು, ಸಾಹಿತ್ಯ, ಸಾಂಸ್ಕೃತಿಕ ಅಭಿರುಚಿಗಳ ಜೊತೆಗೆ ಉತ್ತಮ ನಾಯಕತ್ವ ಗುಣ ಬೆಳೆಸಲು ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ಸಹಕಾರಿಯಾಗಿದೆ. ಈಗಾಗಲೇ ಈ ಸಂಸ್ಥೆ ಸುಮಾರು 200 ಕ್ಕೂ ಹೆಚ್ಚು ದೇಶಗಳಲ್ಲಿ ಬೆಳೆಯುತ್ತಿರುವುದು ಸಂತಸದ ಸಂಗತಿ. ನಮ್ಮ ದೇಶದ ಉತ್ತರ ಮತ್ತು ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಈ ಸಂಸ್ಥೆಗಳು ಈ ರೀತಿಯ ಚಟುವಟಿಕೆಗಳನ್ನು ನಿಸ್ವಾರ್ಥ ವಾಗಿ ನಡೆಸಬೇಕು ಎಂದು ಹೇಳಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್‌ ಮಾತನಾಡಿ, ಮಕ್ಕಳಲ್ಲಿ ಧೈರ್ಯ, ಉತ್ಸಾಹ ಹೆಚ್ಚಾಗುತ್ತದೆ. ವಿದ್ಯಾರ್ಥಿಗಳೆಲ್ಲಾ ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಉತ್ತಮವಾಗಿ ಬೆಳೆಯಬೇಕು ಎಂದರು.ನಗರಸಭೆ ಸದಸ್ಯೆ ಕವಿತಾ ಶೇಖರ್ ಮತನಾಡಿ, ವಿದ್ಯಾರ್ಥಿಗಳು ಹಾಡಿದ ಉತ್ಸವ ಗೀತೆ ಸ್ಕೌಟಿಂಗ್‌ನಲ್ಲಿ ಕಲಿಯಬೇಕಾದ ಎಲ್ಲಾ ಅಂಶಗಳನ್ನು ಒಳಗೊಂಡಿವೆ. ಇಂತಹ ಕಾರ್ಯಕ್ರಮ ಮಕ್ಕಳಿಗೆ ಒಳ್ಳೆಯ ವೇದಿಕೆಯಾಗಿದ್ದು ಅವರಲ್ಲಿ ಆತ್ಮಾಭಿಮಾನ ಮತ್ತು ರಾಷ್ಟ್ರಪ್ರೇಮ ಬೆಳೆಸುತ್ತದೆ ಎಂದರು.ಶ್ರೀ ಮಂಜುನಾಥೇಶ್ವರ ವಿದ್ಯಾಸಂಸ್ಥೆ ಮುಖ್ಯ ಶಿಕ್ಷಕ ಚಂದ್ರಶೇಖರ್‌ ಮಾತನಾಡಿ, ಇಂತಹ ಕಾರ್ಯಕ್ರಮ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಗಳನ್ನು ಬೆಳೆಸುವ ಜತೆಗೆ ವ್ಯಕ್ತಿತ್ವ ಬೆಳವಣಿಗೆಗೆ ಅನುಕೂಲಕರವಾಗಿದೆ ಎಂದು ಹೇಳಿದರು.

ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್. ಷಡಕ್ಷರಿ ಮಾತನಾಡಿ, ಯಾವುದೇ ಸೋಂಕಿಲ್ಲದೆ ನಡೆಯುತ್ತಿರುವ ಸಂಸ್ಥೆ ಎಂದರೆ ಅದುವೇ ಸ್ಕೌಟ್ ಮತ್ತು ಗೈಡ್ಸ್. ಕ್ರಿಯಾಶೀಲಾ ಕಲಿಕೆಗೆ ಇಂತಹ ಚಟುವಟಿಕೆ ಸಾಕ್ಷಿಯಾಗಿವೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಹೊಸತನ ಹುಟ್ಟು ಹಾಕುತ್ತದೆ. ವಿದ್ಯಾರ್ಥಿಗಳೆಲ್ಲಾ ಹೋಗುತ್ತಾ ಸಿಹಿನೆನಪುಗಳನ್ನು ತೆಗೆದುಕೊಂಡು ಹೋಗಬೇಕು ಎಂದರು.ಕಾರ್ಯಕ್ರಮದಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ ರಾಜ್ಯ ಉಪಾಧ್ಯಕ್ಷ ಎ.ಎನ್. ಮಹೇಶ್ ಹಾಗೂ ಉತ್ಸವದ ನಾಯಕರು, ದಳನಾಯಕರು ಉಪಸ್ಥಿತರಿದ್ದರು. 9 ಕೆಸಿಕೆಎಂ 1ಚಿಕ್ಕಮಗಳೂರಿನ ಬಿಜಿಎಸ್‌ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ಕಬ್ ಮತ್ತು ಬುಲ್‌ಬುಲ್ ಉತ್ಸವದ ಸಮಾರೋಪ ಸಮಾರಂಭದಲ್ಲಿ ಡಾ.ಬಿ.ಎಲ್. ಶಂಕರ್ ಮಾತನಾಡಿದರು. ಶಾಸಕ ತಮ್ಮಯ್ಯ, ಎ.ಎನ್‌. ಮಹೇಶ್‌, ಡಾ. ಅಂಶುಮಂತ್‌, ಎಂ.ಎನ್‌. ಷಡಕ್ಷರಿ ಹಾಗೂ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಬ್ಬಳ್ಳಿ ವಿವಸ್ತ್ರ ಕೇಸ್‌ನಲ್ಲಿ ತಲೆದಂಡಕ್ಕೆ ಬಿಜೆಪಿ ಗಡುವು
ಶೀಘ್ರ ‘ಬಾಕಿ ಲಕ್ಷ್ಮಿ’ ಬಿಡುಗಡೆ - ಬಿಪಿಎಲ್‌ ರದ್ದಾದವರಿಗೆ ಇಲ್ಲ ಗೃಹಲಕ್ಷ್ಮಿ ಹಣ