ರಾಮನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಎಸ್ಸಿಪಿ - ಟಿಎಸ್ಪಿ ಹಣ ದುರ್ಬಳಕೆ ಮಾಡಿಕೊಂಡಿಲ್ಲ. ವಿಪಕ್ಷಗಳು ಸುಮ್ಮನೆ ಸುಳ್ಳು ಆರೋಪ ಮಾಡುತ್ತಿವೆ ಎಂದು ವಿಧಾನ ಪರಿಷತ್ ಸದಸ್ಯ ಧರ್ಮಸೇನ ತಿಳಿಸಿದರು.
ಕಾಂಗ್ರೆಸ್ ಪಕ್ಷ ಡಾ.ಅಂಬೇಡ್ಕರ್ ಅವರ ಆಶಯವನ್ನು ಈಡೇರಿಸುತ್ತಿದೆ. 95 ಜಾತಿಗಳನ್ನು ಪರಿಶಿಷ್ಟ ಜಾತಿಗೆ ಸೇರಿಸಿ ಎಲ್ಲಾಜಾತಿಗಳ ಅಭಿವೃದ್ಧಿಗೆ ಕೆಲಸ ಮಾಡುತ್ತಿದೆ. ಪರಿಶಿಷ್ಟ ಗುತ್ತಿಗೆದಾರರ ಮಿತಿಯನ್ನು 50 ಲಕ್ಷದಿಂದ 1 ಕೋಟಿ ರು. ಹೆಚ್ಚಿಸಿದ್ದೇವೆ. ಒಳಮೀಸಲಾತಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಸರ್ಕಾರ ರಚನೆಯಾಗಿ ಎರಡೂವರೆ ವರ್ಷ ಕಳೆದಿದೆ. ನಿಗಮ ಮಂಡಳಿಗಳ ಅಧ್ಯಕ್ಷ ಮತ್ತು ನಿರ್ದೇಶಕರ ಆಯ್ಕೆ ವಿಳಂಬವಾಗಿರುವುದಕ್ಕೆ ಕಾರ್ಯಕರ್ತರಿಗೆ ಬೇಸರವಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸುವ ಕೆಲಸ ಮಾಡಲಾಗುವುದು ಎಂದು ಹೇಳಿದರು.ಒಂದು ವರ್ಷದ ಹಿಂದೆಯೇ ನಿಗಮಮಂಡಳಿ ಪಟ್ಟಿಸಿದ್ದವಾಗಿತ್ತು ಕೆಲ ದೋಷದಿಂದಾಗಿ ಇನ್ನೂ ಪೂರ್ಣವಾಗಿಲ್ಲ. ಕೆಲ ಕಾಂಗ್ರೆಸ್ ಸದಸ್ಯರಲ್ಲದವರಿಗೂ ಅವಕಾಶ ಮಾಡಿಕೊಡಲಾಗಿದೆ ಎಂಬ ಆರೋಪವಿತ್ತು. ಇದನ್ನು ಸರಿಪಡಿಸಿ ಪಕ್ಷದ ಕಾರ್ಯಕರ್ತರಿಗೆ ಅಧಿಕಾರ ಕೊಡುವ ಕೆಲಸ ಮಾಡುತ್ತೇವೆ ಎಂದರು.
ದಲಿತ ಸಿಎಂವಾಗಲು ಕಾಯಬೇಕು:
ದಲಿತ ಸಿಎಂ ವಿಚಾರದಲ್ಲಿ ಸಮುದಾಯದ ನಾಯಕರಿಗೆ ಅವಕಾಶ ಸಿಕ್ಕಿಲ್ಲ. ಬಿ.ರಾಚಯ್ಯ ಅವರು ಹೆಗಡೆ ಸರ್ಕಾರದಲ್ಲಿ ಅನಾರೋಗ್ಯಕ್ಕೆ ಒಳಗಾದಾಗ 3 ತಿಂಗಳು ಸಿಎಂ ಹುದ್ದೆ ನಿಭಾಯಿಸಿದ್ದರು. ಬಸವಲಿಂಗಪ್ಪ ಅವರು ಅರಸು ಕಾಂಗ್ರೆಸ್ ಗೆ ಹೋಗದೆ ಇಂದಿರಾಗಾಂಧಿ ಕಾಂಗ್ರೆಸ್ನಲ್ಲಿ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು. ಸಮಯ ಬಂದಾಗ ದಲಿತರು ಮುಖ್ಯಮಂತ್ರಿ ಆಗುತ್ತಾರೆ ಎಂದು ಧರ್ಮಸೇನ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಎಸ್ಸಿ-ಎಸ್ಟಿ ಅಧ್ಯಕ್ಷ ನರಸಿಂಹಯ್ಯ, ಕೆಪಿಸಿಸಿ ಹಿರಿಯ ಸಂಚಾಲಕ ಬಾಳಯ್ಯ, ಮುಖಂಡರಾದ ರಾಮಲಿಂಗಮ್, ಶಿವಶಂಕರ್ , ಪದ್ಮಾ ಮತ್ತಿತರರು ಹಾಜರಿದ್ದರು.5ಕೆಆರ್ ಎಂಎನ್ 1.ಜೆಪಿಜಿ