ಬನ್ನಂಜೆ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಿತ್ರ ಪ್ರದರ್ಶನ

KannadaprabhaNewsNetwork |  
Published : Sep 14, 2026, 03:00 AM IST
ಬನ್ನಂಜೆ ಪ್ರತಿಷ್ಠಾನದ ವೀಣಾ ಬನ್ನಂಜೆ ಅವರನ್ನು ಸನ್ಮಾನಿಸಲಾಯಿತು | Kannada Prabha

ಸಾರಾಂಶ

ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ಮೂರು ಉಚಿತ ಪ್ರದರ್ಶನಗಳು ಗುರುವಾರ ಇಲ್ಲಿನ ಪುತ್ತಿಗೆ ಮಠದ ಗೀತಾ ಮಂದಿರದ ನೃಸಿಂಹ ಸಭಾಂಗಣದಲ್ಲಿ ಶ್ರೀಗಳಧ್ವಯರ ಆಶೀರ್ವಾದದೊಂದಿಗೆ ಯಶಸ್ವಿ ಪ್ರದರ್ಶನಗೊಂಡಿತು.

ಉಡುಪಿ : ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ ‘ಇಂದು ಎನಗೆ ಗೋವಿಂದ’ ಚಲನಚಿತ್ರದ ಮೂರು ಉಚಿತ ಪ್ರದರ್ಶನಗಳು ಗುರುವಾರ ಇಲ್ಲಿನ ಪುತ್ತಿಗೆ ಮಠದ ಗೀತಾ ಮಂದಿರದ ನೃಸಿಂಹ ಸಭಾಂಗಣದಲ್ಲಿ ಶ್ರೀಗಳಧ್ವಯರ ಆಶೀರ್ವಾದದೊಂದಿಗೆ ಯಶಸ್ವಿ ಪ್ರದರ್ಶನಗೊಂಡಿತು. ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನದ ಮುಖ್ಯಸ್ಥರಾದ ವೀಣಾ ಬನ್ನಂಜೆ ಅವರನ್ನು ಬನ್ನಂಜೆ ಅಭಿಮಾನಿ ಬಳಗ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ವತಿಯಿಂದ ಗೌರವಿಸಲಾಯಿತು. ಪ್ರಧಾನ ಪಾತ್ರದಲ್ಲಿ ನಟಿಸಿದ ಭಾಸ್ಕರ್ ರಾವ್ ಹಾಗೂ ಕೃಷ್ಣರಾಜ್ ಭಟ್ ಕುತ್ಪಾಡಿ ಅವರನ್ನು ಅಭಿನಂದಿಸಲಾಯಿತು.ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈ, ಬನ್ನಂಜೆ 90 ನಮನ ಕಾರ್ಯಕ್ರಮದ ಪ್ರಧಾನ ಕಾರ್ಯದರ್ಶಿ ಆಸ್ಟ್ರೋ ಮೋಹನ್, ಕಾರ್ಯದರ್ಶಿ ಜನಾರ್ದನ ಕೊಡವೂರು, ಕೋಶಾಧಿಕಾರಿ ಪ್ರೊ. ಸದಾಶಿವ ರಾವ್, ರಾಜೇಶ್ ಭಟ್ ಪಣಿಯಾಡಿ, ಪಂಚಮಿ ಟ್ರಸ್ಟಿನ ಮುಖ್ಯಸ್ಥ ಡಾ. ಎಂ. ಹರಿಶ್ಚಂದ್ರ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ., ಗೌರವ ಕಾರ್ಯದರ್ಶಿ ರಂಜಿನಿ ವಸಂತ್, ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಸಾಂಸ್ಕೃತಿಕ ಕಾರ್ಯದರ್ಶಿ ವಸಂತ್, ದೀಪಾ ಕರ್ಕಿ, ಚಂದ್ರಕಾಂತ್ ಮತ್ತಿತರರು ಇದ್ದರು. ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಮಹಿಳಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ನಿರೂಪಿಸಿ, ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಂಗಳೂರು ಸಚಿವ ಸಂಪುಟ ಸಭೆಗೆ ಬಿಜೆಪಿ ದ.ಕ.ದ 44 ಬೇಡಿಕೆಗಳ ಪಟ್ಟಿ ಸಲ್ಲಿಕೆ
ಜನತೆಗೆ ಪ್ರಜಾ ಸೇವೆಯಡಿ ನ್ಯಾಯ ದೊರೆಯಲು ಅವಕಾಶ: ಅಶೋಕ್ ರೈ