ಎಸ್‌ಡಿಎಂ ಐಟಿ ಕಾಲೇಜು ವಾರ್ಷಿಕ ಕ್ರೀಡಾಕೂಟ

KannadaprabhaNewsNetwork |  
Published : Nov 24, 2025, 03:30 AM IST
ಕ್ರಿಡೆ | Kannada Prabha

ಸಾರಾಂಶ

ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ನೆರವೇರಿತು.

ಬೆಳ್ತಂಗಡಿ: ಆರೋಗ್ಯದೆಡಗಿನ ಕಾಳಜಿ ನಮ್ಮ ಮೊದಲ ಆದ್ಯತೆಯಾಗಬೇಕು. ಕ್ರೀಡಾ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಆರೋಗ್ಯದ ಫಿಟ್ನೆಸ್ ನಮ್ಮ ಮಾನಸಿಕ ಮತ್ತು ದೈಹಿಕ ಚೈತನ್ಯವನ್ನು ಸದಾ ಹೆಚ್ಚಿಸುತ್ತದೆ ಎಂದು ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕಾಲೇಜಿನ ದೈಹಿಕ ನಿರ್ದೇಶಕ ಡಾ. ಪ್ರಕಾಶ್ ಡಿಸೋಜ ಅಭಿಪ್ರಾಯಪಟ್ಟರು.

ಅವರು ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.ಕೋರೋನಾದಂತ ಸಂದರ್ಭದಲ್ಲಿ ಸದೃಢ ಆರೋಗ್ಯ ಎಷ್ಟು ಮುಖ್ಯ ಎಂಬುದು ಎಲ್ಲರಿಗೂ ಅರಿವಾಗಿದೆ. ಎಸ್‌ಡಿಎಂ ಸಂಸ್ಥೆ ಕ್ರೀಡೆಗೆ ಸರ್ವ ರೀತಿಯ ಸಹಕಾರ ಮತ್ತು ಪ್ರೋತ್ಸಾವನ್ನು ನೀಡುತ್ತಾ ಬಂದಿದೆ. ವಿಶಾಲವಾದ ಕ್ರೀಡಾಂಗಣ, ಈಜುಕೊಳ, ಜಿಮ್ ನಂತಹ ಅತ್ಯಾಧುನಿಕ ಸೌಲಭ್ಯಗಳು ಲಭ್ಯವಿದೆ. ಕನಿಷ್ಠ 30 ನಿಮಿಷ ಸಮಯವನ್ನಾದಾರು ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ, ಅದು ನಿಮ್ಮ ಸುಸ್ಥಿರ ಆರೋಗ್ಯವನ್ನು ಕಾಪಾಡುತ್ತದೆ ಎಂದರು.

ಎಸ್‌ಡಿಎಂ ಐಟಿ ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಕ್ರೀಡಾ ಪಥಸಂಚಲನ ಮತ್ತು ಕ್ರೀಡಾ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಎಸ್‌ಡಿಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್, ಎಸ್‌ಡಿಎಂ ಐಟಿ ವಿಭಾಗದ ದೈಹಿಕ ಶಿಕ್ಷಣ ಉಪನ್ಯಾಸ ಪ್ರಭಾಕರ್ ಸೇರಿದಂತೆ ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಕ್ರೀಡಾಪಟುಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಅನರ್ಘ್ಯ ಮತ್ತು ಅಪೇಕ್ಷ ನಿರೂಪಿಸಿದರು. ದ್ಯಾರ್ಥಿನಿ ವನಿಶ್ರೀ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ