ಎಸ್‌ಡಿಪಿಐ ಕಾಪು ಕ್ಷೇತ್ರ ಸಮಿತಿ ರಕ್ತದಾನ ಶಿಬಿರ

KannadaprabhaNewsNetwork |  
Published : Jun 07, 2025, 03:11 AM IST
6ರಕ್ತದಾನ | Kannada Prabha

ಸಾರಾಂಶ

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಸಹಯೋಗದೊಂದಿಗೆ ಮಜೂರು ಪಂಚಾಯಿತಿ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಕನ್ನಡಪ್ರಭ ವಾರ್ತೆ ಕಾಪು

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ವತಿಯಿಂದ ಜಿಲ್ಲಾ ಆಸ್ಪತ್ರೆ ರಕ್ತ ನಿಧಿ ಸಹಯೋಗದೊಂದಿಗೆ ಮಜೂರು ಪಂಚಾಯಿತಿ ಸಭಾಂಗಣದಲ್ಲಿ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.ಇದೇ ಸಂದರ್ಭ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಸಾಧಿಕ್ ಕೆ. ಪಿ. ಅವರು ವಹಿಸಿದ್ದರು. ಮುಖ್ಯ ಅತಿಥಿಯಾಗಿ ಜಿಲ್ಲಾಸ್ಪತ್ರೆ ರಕ್ತ ನಿಧಿ ವೈದ್ಯಾಧಿಕಾರಿ ಡಾ.ವೀಣಾ ಕುಮಾರಿ ಆಗಮಿಸಿ, ಉಡುಪಿ ಜಿಲ್ಲೆಯಲ್ಲಿ ರಕ್ತದ ತೀವ್ರ ಕೊರತೆ ಇದ್ದು ಸಂಘ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ಮೂಲಕ ರಕ್ತದ ಕೊರತೆ ನೀಗಿಸಲು ಶ್ರಮಿಸಬೇಕು ಎಂದು ಮನವಿ ಮಾಡಿದರು. ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಂಶುದ್ದೀನ್, ಟಿಐವೈಎ ಮಲ್ಲಾರ್ ಇದರ ಉಪಾಧ್ಯಕ್ಷ ಅಬ್ದುಲ್ ರಝಾಕ್, ಉದ್ಯಮಿ ರವಿ ಕರಂದಾಡಿ, ಸಮಾಜ ಸೇವಕ ಮುನೀರ್ ಕಲ್ಮಾಡಿ, ಕಾಪು ಪುರಸಭೆ ಸದಸ್ಯ ನೂರುದ್ದೀನ್, ಎಸ್. ಡಿ. ಪಿ. ಐ ಮುಖಂಡ ಅಬೂಬಕ್ಕರ್ ಪಾದೂರ್ ಮತ್ತು ಎಸ್. ಡಿ. ಪಿ. ಐ. ಮಜೂರ್ ಪಂಚಾಯತ್ ಸಮಿತಿ ಅಧ್ಯಕ್ಷರಾದ ಶಂಶುದ್ದೀನ್ ಕರಂದಾಡಿ ಆಗಮಿಸಿದ್ದರು. ಈ ಶಿಬಿರದಲ್ಲಿ ಸುಮಾರು 94 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು