ಪ್ರಜ್ವಲ್ ರೇವಣ್ಣರನ್ನು ಬಂಧಿಸುವಂತೆ ಎಸ್‌ಡಿಪಿಐ ಪ್ರತಿಭಟನೆ

KannadaprabhaNewsNetwork |  
Published : May 10, 2024, 01:37 AM IST
ಎಸ್ ಡಿಪಿಐ9 | Kannada Prabha

ಸಾರಾಂಶ

ದಿನಬೆಳಗಾದರೆ ಲವ್ ಜಿಹಾದ್ ಎಂದು ಭಾಷಣ ಬಿಗಿಯುವ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಪ್ರಜ್ವಲ್ ರೇವಣ್ಣ ಸಾವಿರಕ್ಕಿಂತಲೂ ಹೆಚ್ಚು ಮಹಿಳೆಯರ ಮಾನ ಹರಾಜು ಮಾಡಿದಾಗ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ರಿಯಾಜ್ ಕಡಂಬು ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇ‍ವಣ್ಣರನ್ನು ಬಂಧಿಸಲು ಒತ್ತಾಯಿಸಿ ಮತ್ತು ಬಿಜೆಪಿಯ ಪಕ್ಷಪಾತ ಧೋರಣೆ ಖಂಡಿಸಿ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ನಗರದ ಅಜ್ಜರಕಾಡು ಹುತಾತ್ಮ ಯೋಧರ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು, ದಿನಬೆಳಗಾದರೆ ಲವ್ ಜಿಹಾದ್ ಎಂದು ಭಾಷಣ ಬಿಗಿಯುವ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಪ್ರಜ್ವಲ್ ರೇವಣ್ಣ ಸಾವಿರಕ್ಕಿಂತಲೂ ಹೆಚ್ಚು ಮಹಿಳೆಯರ ಮಾನ ಹರಾಜು ಮಾಡಿದಾಗ ಯಾಕೆ ತುಟಿ ಬಿಚ್ಚುತ್ತಿಲ್ಲ ಎಂದು ಪ್ರಶ್ನಿಸಿದರು.

ಉಡುಪಿಯ ಕಾಲೇಜು ಮಕ್ಕಳ ಪುಂಡಾಟವನ್ನು ದೊಡ್ಡ ವಿವಾದವಾಗಿ ಬಿಂಬಿಸಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಪ್ರಜ್ವಲ್ ರೇವಣ್ಣ ವಿಷಯದಲ್ಲಿ ಒಂದು ಮಾತೂ ಆಡದಿರುವುದು ಹಿಂದೂಗಳ ಮೇಲಿನ ಅವರ ಕಾಳಜಿ ಕೇವಲ ರಾಜಕೀಯ ಲಾಭಕ್ಕಾಗಿ ಮಾತ್ರ ಎಂಬುದನ್ನು ಬಿಂಬಿಸುತ್ತದೆ ಎಂದು ಆರೋಪಿಸಿದರು.

ಜಿಲ್ಲಾಧ್ಯಕ್ಷ ಶಾಹಿದ್ ಆಲಿ ಹಾಗೂ ಕಾಪು ಕ್ಷೇತ್ರ ಸಮಿತಿ ಅಧ್ಯಕ್ಷ ಹನೀಫ್ ಮೂಲೂರ್ ಮಾತನಾಡಿದರು.

ಪ್ರತಿಭಟನೆಯಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಉಡುಪಿ ಜಿಲ್ಲಾಧ್ಯಕ್ಷೆ ನಾಜಿಯಾ ನಸ್ರುಲ್ಲಾ, ಎಸ್‌ಡಿಪಿಐ ಉಡುಪಿ ಜಿಲ್ಲಾ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ