ಮಂಡ್ಯ ಜಿಲ್ಲಾದ್ಯಂತ ಶಿವಾಲಯಗಳಲ್ಲಿ ಭಕ್ತಸಾಗರ

KannadaprabhaNewsNetwork |  
Published : Nov 18, 2025, 12:15 AM IST
೧೭ಕೆಎಂಎನ್‌ಡಿ-೪ಮಂಡ್ಯದ ಗುತ್ತಲು ಬಡಾವಣೆಯ ಶ್ರೀ ಅರಕೇಶ್ವರಸ್ವಾಮಿ ದೇವಾಲಯದಲ್ಲಿ ದೇವರ ದರ್ಶನಕ್ಕೆ ಆಗಮಿಸಿರುವ ಭಕ್ತ ಸಮೂಹ. | Kannada Prabha

ಸಾರಾಂಶ

ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಬಳಿಕ ಹಲವಾರು ಮಂದಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನಪ್ರಸಾದ ವಿತರಿಸಿದರು. ಹಲವಾರು ಭಕ್ತ ಮಂಡಳಿಗಳು ಭಜನೆ, ದೇವರ ಕೀರ್ತನೆಗಳನ್ನು ಹಾಡುತ್ತಿದ್ದುದು ಕಂಡುಬಂತು.

ಕನ್ನಡಪ್ರಭ ವಾರ್ತೆ ಮಂಡ್ಯ

ಕಡೇ ಕಾರ್ತಿಕ ಸೋಮವಾರದ ಅಂಗವಾಗಿ ಜಿಲ್ಲೆಯ ಎಲ್ಲ ಶಿವಾಲಯಗಳಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

ನಗರದ ಅದಿದೇವತೆ ಶ್ರೀಅರ್ಕೇಶ್ವರಸ್ವಾಮಿ ದೇವಾಲಯದಲ್ಲಿ ನಿನ್ನೆ ಮಧ್ಯರಾತ್ರಿಯಿಂದಲೇ ವಿಶೇಷ ಪೂಜಾ ವಿಧಿ ವಿಧಾನಗಳು ಆರಂಭವಾದರು. ರಾತ್ರಿ ೨ ಗಂಟೆಗೆ ಅಭಿಷೇಕ, ರುದ್ರಾಭಿಷೇಕ ಸೇರಿದಂತೆ ವಿವಿಧ ಹೋಮ-ಹವನಗಳನ್ನು ನಡೆಸಲಾಯಿತು. ನಂತರ ದೇವರಿಗೆ ವಿಶೇಷ ಅಲಂಕಾರ ಮಾಡಲಾಯಿತು. ಮುಂಜಾನೆ ೫ರ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.

ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದು ಪುನೀತರಾದರು. ಬಳಿಕ ಹಲವಾರು ಮಂದಿ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರಿಗೆ ಅನ್ನಪ್ರಸಾದ ವಿತರಿಸಿದರು. ಹಲವಾರು ಭಕ್ತ ಮಂಡಳಿಗಳು ಭಜನೆ, ದೇವರ ಕೀರ್ತನೆಗಳನ್ನು ಹಾಡುತ್ತಿದ್ದುದು ಕಂಡುಬಂತು.

ಇಲ್ಲಿನ ಶಂಕರನಗರ ಬಡಾವಣೆಯಲ್ಲಿರುವ ಶ್ರೀಮಹದೇಶ್ವರ ದೇವಾಲಯದಲ್ಲೂ ವಿಶೇಷ ಪೂಜೆ ನಡೆಯಿತು. ಸಂಜೆ ಪುರಿ ಪರಸೆ ಏರ್ಪಡಿಸಿ ದೇವಳಕ್ಕೆ ಭೇಟಿ ನೀಡಿದ್ದ ಭಕ್ತರಿಗೆ ಪ್ರಸಾದ ರೂಪವಾಗಿ ಪುರಿ ವಿತರಿಸಲಾಯಿತು. ನಾಳೆ ಮಂಗಳವಾರ ಬೆಳಗಿನಿಂದ ಸಂಜೆಯವರೆಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಚಾಮುಂಡೇಶ್ವರಿ ಬಡಾವಣೆಯ ಬನ್ನೂರು ರಸ್ತೆಯಲ್ಲಿರುವ ಶ್ರೀಶನೇಶ್ಚರ ದೇವಾಲಯ, ಸ್ವರ್ಣಸಂದ್ರದಲ್ಲಿರುವ ಶ್ರೀ ಶನೈಶ್ವರ ಸ್ವಾಮಿ ದೇಗುಲದಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಬೆಳಗಿನಿಂದಲೇ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಸಲಾಯಿತು.

ಶಂಕರಪುರ ಬಡಾವಣೆಯ ಶ್ರೀಗಂಗಾಧರೇಶ್ವರ, ಗಾಂಧಿನಗರದ ಶ್ರೀ ಮಹದೇಶ್ವರ, ಹಾಲಹಳ್ಳಿಯ ಶ್ರೀ ಮಹದೇಶ್ವರ, ಕೆರೆಬೀದಿಯ ಶ್ರೀಸಕಲೇಶ್ವರಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ಸಾಂಗೋಪಸಾಂಗವಾಗಿ ನಡೆಯಿತು.

ಮದ್ದೂರಿನ ಶ್ರೀವೈಧ್ಯನಾಥೇಶ್ವರ, ಹನಮಂತನಗರದ ಶ್ರೀ ಆತ್ಮಲಿಂಗೇಶ್ವರ ಸೇರಿದಂತೆ ವಿವಿಧ ದೇವಳಗಳಲ್ಲಿ ವಿಶೇಷ ಪೂಜೆ ನಡೆಯಿತು.

ಶ್ರೀರಂಗಪಟ್ಟಣದ ಗಂಜಾಂನಲ್ಲಿರುವ ಶ್ರೀ ಮೌಕ್ತಿಕೇಶ್ವರ-ನಿಮಿಷಾಂಭ, ಕಾಶಿ ವಿಶ್ವನಾಥೇಶ್ವರ, ಚಂದ್ರವನ ಆಶ್ರಮದಲ್ಲಿರುವ ಚಂದ್ರಮೌಳೇಶ್ವರ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು. ಕೆ.ಆರ್.ಪೇಟೆಯ ಸಾಸಲು ಶಿವನ ದೇವಾಲಯ, ಗೋವಿಂದನಹಳ್ಳಿಯ ಪಂಚಲಿಂಗೇಶ್ವರ ಸೇರಿದಂತೆ ವಿವಿಧ ಶಿವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು.

ನಾಗಮಂಗಲದ ಶ್ರೀಆದಿಚುಂಚನಗಿರಿ ಶ್ರೀಕ್ಷೇತ್ರದ ಗಂಗಾಧರೇಶ್ವರಸ್ವಾಮಿ, ಆಲತಿ ಮಲ್ಲಿಕಾರ್ಜುನಸ್ವಾಮಿ ಹಾಗೂ ಪಾಂಡವಪುರದ ಪಟ್ಟಸೋಮನಹಳ್ಳಿಯ ಶಿವನ ದೇವಾಲಯ ಹಾಗೂ ಮಳವಳ್ಳಿ ತಾಲೂಕಿನ ಮತ್ತಿತಾಳೇಶ್ವರ ವಿವಿಧ ಶಿವಾಲಯಗಳಲ್ಲಿ ವಿಶೇಷ ಪೂಜೆ, ಪ್ರಸಾದ ವಿತರಣೆ ನಡೆಯಿತು. ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ