ಯತ್ನಾಳ ಬಣದಿಂದ ಬೆಳೆಗಾವಿಯಲ್ಲಿ ರಹಸ್ಯಸಭೆ

KannadaprabhaNewsNetwork |  
Published : Dec 02, 2024, 01:16 AM IST
ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣದಿಂದ ಬೆಳಗಾವಿಯಲ್ಲಿ ರಹಸ್ಯಸಭೆ ನಡೆಯಿತು | Kannada Prabha

ಸಾರಾಂಶ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ನಗರದ ಖಾಸಗಿ ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆಗೆ ಯಾವ ವಿಷಯ ಚರ್ಚೆ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಬಿಜೆಪಿ ಬಣ ನಗರದ ಖಾಸಗಿ ಹೋಟೆಲ್‌ನಲ್ಲಿ ರಹಸ್ಯ ಸಭೆ ನಡೆಸಿದೆ. ಸಭೆಯಲ್ಲಿ ದೆಹಲಿಯಲ್ಲಿ ಪಕ್ಷದ ವರಿಷ್ಠರ ಜೊತೆಗೆ ಯಾವ ವಿಷಯ ಚರ್ಚೆ ಮಾಡಬೇಕು ಎನ್ನುವುದರ ಕುರಿತು ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ವಕ್ಫ್ ಸೇರಿ ರಾಜಕೀಯ ಬೆಳವಣಿಗೆ ಕುರಿತು ಗಮನ ಸೆಳೆಯುವುದು, ವಕ್ಫ್​​​ ವಿರುದ್ಧದ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಸೇರಿದಂತೆ ಹಲವರು ವಿರೋಧಿಸುತ್ತಿರುವ ಬಗ್ಗೆ ಗಮನಕ್ಕೆ ತರುವ ಬಗ್ಗೆ ಚರ್ಚೆಯಾಗಿದ್ದು, ಈ ಎಲ್ಲಾ ಅಂಶಗಳನ್ನು ಹೈಕಮಾಂಡ್ ಗಮನಕ್ಕೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮಾಜಿ ಸಚಿವ ಕುಮಾರ ಬಂಗಾರಪ್ಪ, ಅರವಿಂದ ಲಿಂಬಾವಳಿ, ಮಹೇಶ ಕುಮಟಳ್ಳಿ ಸೇರಿದಂತೆ ಹಲವು ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!