ಅಧಿಕ ಇಳುವರಿಗೆ ಬೀಜೋಪಚಾರ ಅಗತ್ಯ: ಶಿವಮೂರ್ತಿ ರಾಥೋಡ

KannadaprabhaNewsNetwork |  
Published : Jun 23, 2024, 02:01 AM IST
ಫೋಟೋವಿವರ- (21ಎಂಎಂಎಚ್‌2) ಮರಿಯಮ್ಮನಹಳ್ಳಿ ಸಮೀಪದ ಅಯ್ಯನಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಡಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸ್ಥಳೀಯ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಶಿವಮೂರ್ತಿ ರಾಥೋಡ ಮಾತನಾಡಿದರು.  | Kannada Prabha

ಸಾರಾಂಶ

ಬೀಜಗಳು ಮೊಳಕೆಯೊಡೆಯುವಾಗ ಸಸಿಗಳು ಬೆಳೆಯುವಾಗ ಜತೆಯಲ್ಲಿ ಬೆಳೆಯ ವಿವಿಧ ಬೆಳವಣಿಗೆಯ ಹಂತಗಳ‌ಲ್ಲಿ ರೋಗವು ಉಲ್ಬಣಿಸಿ ಇಳುವರಿ ಹಾನಿಗೆ ಕಾರಣವಾಗುತ್ತದೆ.

ಮರಿಯಮ್ಮನಹಳ್ಳಿ: ಮುಂಗಾರು ಬೇಸಾಯದಲ್ಲಿ ರೈತರಿಗೆ ಬಹು ಕಾಡುವ ಸಮಸ್ಯೆಗಳಲ್ಲಿ ರೋಗಬಾಧೆ ಮತ್ತು ಇಳುವರಿ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಬೇಸಾಯ ಮಾಡುವಾಗ ಕೆಲ ಜಾಗೃತಿ ವಹಿಸಬೇಕು ಎಂದು ಪಟ್ಟಣದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಶಿವಮೂರ್ತಿ ರಾಥೋಡ ಸಲಹೆ ನೀಡಿದರು.

ಇಲ್ಲಿಗೆ ಸಮೀಪದ ಅಯ್ಯನಹಳ್ಳಿ ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವ್ಯವಸಾಯದಲ್ಲಿ ಮಣ್ಣಿನ ಫಲವತ್ತತೆ ಪ್ರಮುಖವಾದದ್ದು, ಬೀಜದಿಂದ ಅನೇಕ ಹಾನಿಕಾರಕ ರೋಗಾಣುಗಳಾದ ಶಿಲೀಂಧ್ರ, ದುಂಡಾಣು ಮತ್ತು ನಂಜಾಣು ಸೂಕ್ಷ್ಮ ಜೀವಿಗಳು ಬೀಜಗಳ ಹೊರಮೈ ಹಾಗೂ ಒಳಮೈ ಆವರಿಸಿ ಬೀಜಗಳು ಮೊಳಕೆಯೊಡೆಯುವಾಗ ಸಸಿಗಳು ಬೆಳೆಯುವಾಗ ಜತೆಯಲ್ಲಿ ಬೆಳೆಯ ವಿವಿಧ ಬೆಳವಣಿಗೆಯ ಹಂತಗಳ‌ಲ್ಲಿ ರೋಗವು ಉಲ್ಬಣಿಸಿ ಇಳುವರಿ ಹಾನಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಸಾಯನಿಕ ಬೀಜೋಪಚಾರ ಅಥವಾ ಸಾವಯವದ ಬೀಜಾಮೃತ ವಿಧಾನಗಳನ್ನು ಬಳಸಿ ಅಧಿಕ ಇಳುವರಿ ಹಾಗೂ ರೋಗಗಳಿಂದ ಮುಕ್ತಿ ಪಡೆಯಬಹುದು ಎಂದು ಅವರು ಹೇಳಿದರು.

ಬೀಜ ಮೊಳಕೆಯೊಡೆಯುವಿಕೆ ಹಾಗೂ ಸಸಿಗಳ ಬೆಳವಣಿಗೆ ಉತ್ತಮಗೊಳ್ಳಲು ಬೀಜಾಮೃತ ವಿಧಾನ ಅತ್ಯಂತ ಸಹಕಾರಿಯಾಗುತ್ತದೆ. ಮಳೆಯಾಶ್ರಿತ ರೈತರು ಕಡ್ಡಾಯವಾಗಿ ಬೆಳೆವಿಮೆ ಮಾಡಿಸಬೇಕು. ಅತಿವೃಷ್ಟಿ, ಅನಾವೃಷ್ಟಿಯ ವೇಳೆಯಲ್ಲಿ ರೈತರಿಗೆ ಆಗುವ ಆರ್ಥಿಕ ನಷ್ಟ ಸರಿದೂಗಿಸಲು ಬೆಳೆವಿಮೆ ಸಹಾಯಾವಾಗುತ್ತದೆ ಎಂದು ಅವರು ಹೇಳಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ತಾಲೂಕು ಯೋಜನಾಧಿಕಾರಿ ಮಾರುತಿ, ಜಿಲ್ಲಾ ನೋಡಲ್ ಅಧಿಕಾರಿ ಶಿವು ಮರಡಿ ಸೇರಿದಂತೆ ರೈತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ