ಕನ್ನಡಪ್ರಭ ವಾರ್ತೆ ಬೇತಮಂಗಲಅನೇಕ ದಶಕದಿಂದ ಸೂಕ್ತ ಸೇತುವೆ ಇಲ್ಲದೆ ಪರಿತಪಿಸುತ್ತಿದ್ದ ಈ ಭಾಗದ ರೈತರು, ವಿದ್ಯಾರ್ಥಿಗಳು, ವಾಹನ ಸವಾರರಿಗೆ ಸುಸಜ್ಜಿತ ಸೇತುವೆ ನಿರ್ಮಾಣ ಮಾಡುವ ಕನಸು ಇದೀಗ ನನಸಾಗಿದೆ ಎಂದು ಶಾಸಕಿ ಎಂ.ರೂಪಕಲಾ ಹೇಳಿದರು.ವೇಗಸಂದ್ರ ಗ್ರಾಪಂ ವ್ಯಾಪ್ತಿಯ ಸೀತಂಪಲ್ಲಿ-ಮಲ್ಲಂಪಲ್ಲಿ ಮಾರ್ಗ ಮಧ್ಯದಲ್ಲಿ ಸುಮಾರು ೫ ಕೋಟಿ ರು.ಗಳ ವೆಚ್ಚದಲ್ಲಿ ಸಣ್ಣ ನೀರಾವರಿ ಇಲಾಖೆ ಮೂಲಕ ನಿರ್ಮಿಸಿದ್ದು ಬಹುತೇಕ ಪೂರ್ಣಗೊಂಡಿದ್ದು, ಅತಿ ಶೀಘ್ರದಲ್ಲೇ ಸಚಿವದಿಂದ ಲೋಕಾರ್ಪಣೆಗೊಳಿಸುವುದಾಗಿ ಹೇಳಿದರು.ಸೇತುವೆಗೆ ₹5 ಕೋಟಿ ವೆಚ್ಚ
ರೈತರಿಗೆ ತೊಂದರೆ ಆಗದಂತೆ ಕ್ರಮ
ರೈತರಿಗೆ ಸ್ಪಂದಿಸುವ ಹಾಗೂ ಉತ್ತಮ ದೂರ ದೃಷ್ಟಿ ಹೊಂದಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿದೆ. ನಾವು ಈ ಭಾಗದಲ್ಲಿ ಸೇತುವೆ ನಿರ್ಮಾಣಕ್ಕಾಗಿ ಮೊದಲು ೩ ಕೋಟಿ ಬಿಡುಗಡೆಗೊಳಿಸಿದ್ದೇವು ಪುನಃ ಎರಡು ಕೋಟಿ ಬಿಡುಗಡೆಗೊಳಿಸಿ ಉತ್ತಮವಾಗಿ ಗುಣಮಟ್ಟದಿಂದ ಸೇತುವೆ ಜೊತೆಗೆ ಸುತ್ತಲೂ ಪಾಲಾರ್ ನದಿಗೆ ರಿವಿಟ್ಮೆಂಟ್ ನಿರ್ಮಿಸಿ ಅಕ್ಕಪಕ್ಕದ ರೈತರಿಗೆ ತೊಂದರೆ ಆಗದಂತೆ ಕ್ರಮವಹಿಸಲಾಗಿದೆ. ಕೆಜಿಎಫ್ ತಾಲೂಕಿಗೆ ಸಣ್ಣ ಇಲಾಖೆಯಿಂದ ಸಚಿವ ಬೋಸ್ರಾಜ್ ೧೦ ಕೋಟಿ ಅನುದಾನ ನೀಡಿದ್ದಾರೆ.ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಸುನಿತಾ ಚಂದ್ರಶೇಖರ್, ಜಿಪಂ ಮಾಜಿ ಸದಸ್ಯ ನಾರಾಯಣ್, ನಾರಾಯಣಸ್ವಾಮಿ, ಇನಾಯತ್ ಉಲ್ಲಾ, ಗ್ಯಾರೆಂಟಿ ಸಮಿತಿಯ ಅಧ್ಯಕ್ಷ ಕೃಷ್ಣಾರೆಡ್ಡಿ, ಕದರಿಪುರ ಸೊಸೈಟಿ ಅಧ್ಯಕ್ಷ ವಕೀಲ ಪದ್ಮನಾಭ ರೆಡ್ಡಿ, ಎಪಿಎಂಸಿ ಅಧ್ಯಕ್ಷ ವಿಜಯ್ ರಾಘವ ರೆಡ್ಡಿ, ಮಾಜಿ ಉಪಾಧ್ಯಕ್ಷ ದಶರಥ ರೆಡ್ಡಿ, ಮುಖಂಡರಾದ ಗೆನ್ನೇರಳ್ಳಿ ವೆಂಕಟರಾಮಪ್ಪ ಮತ್ತಿತರರು ಇದ್ದರು.