ಅಕ್ರಮವಾಗಿ ಸಾಗಿಸುತ್ತಿದ್ದ ದಿಮ್ಮಿಗಳ ವಶ

KannadaprabhaNewsNetwork |  
Published : Oct 17, 2025, 01:00 AM IST
16ಎಚ್ಎಸ್ಎನ್13 : ಸಕಲೇಶಪುರ ತಾಲೂಕಿನ ಆನೆಮಹಲ್ ಗ್ರಾಮದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಬಿಲೇಟ್ಸ್ ಹಾಗೂ ವಾಹನವನ್ನು ಅರಣ್ಯ ಇಲಾಖೆಯವರು ವಶಪಡಿಸಿಕೊಂಡಿರುವುದು. | Kannada Prabha

ಸಾರಾಂಶ

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಅರಣ್ಯ ಇಲಾಖೆಯವರು ವಾಹನ ಸಮೇತ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಅನೇಮಹಲ್ ನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ೭೫ ತಾಲೂಕಿನ ಆನೇಮಹಲ್ ಸಮೀಪ ಲಾರಿಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಕಾಡು ಜಾತಿಯ ಒಂದು ಲೋಡ್ ಮರವನ್ನು ವಶಪಡಿಸಿಕೊಳ್ಳಲಾಗಿದೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅಕ್ರಮವಾಗಿ ಸಾಗಾಟ ಮಾಡಲಾಗುವ ದಿಮ್ಮಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ವಾಹನವೊಂದನ್ನು ಅರಣ್ಯ ಇಲಾಖೆಯವರು ವಾಹನ ಸಮೇತ ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಅನೇಮಹಲ್ ನಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ ೭೫ ತಾಲೂಕಿನ ಆನೇಮಹಲ್ ಸಮೀಪ ಲಾರಿಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಕಾಡು ಜಾತಿಯ ಒಂದು ಲೋಡ್ ಮರವನ್ನು ವಶಪಡಿಸಿಕೊಳ್ಳಲಾಗಿದೆ. ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್ ಮತ್ತು ಗಸ್ತು ಅರಣ್ಯ ಪಾಲಕರಾದ ಉಮೇಶ್, ಲೋಕೇಶ್ ,ಜಯಸ್ವಾಮಿ ಹಾಗೂ ಅರಣ್ಯ ವೀಕ್ಷಕ ಲೋಕೇಶ್ ಮತ್ತು ಡ್ರೈವರ್ ಆಶ್ರಯ ದಾಳಿ ನಡೆಸಿ ವಾಹನವನ್ನು ವಶಪಡಿಸಿಕೊಂಡು ಅರಣ್ಯ ಮೊಕದಮ್ಮೆ - ೩೯/೨೦೨೫-೨೬ ದಾಖಲಿಸಿದ್ದಾರೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅಕ್ರಮವಾಗಿ ಸಾಗಾಟ ಮಾಡಲಾಗುವ ದಿಮ್ಮಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಅಕ್ರಮವಾಗಿ ಬಿಲೇಟ್ಸ್ ಸಾಗಿಸುವರ ಸಂಖ್ಯೆ ಬಹಳ ಕಡಿಮೆಯಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸ್ತೆಗೆ ಕಾಲಿಟ್ಟಿರೋ ಹುಷಾರ್‌, ಕಚ್ಲಿಕ್ಕೆ ಕಾಯ್ತಿವೆ ಬೀದಿ ನಾಯಿ
ನಗರದಲ್ಲಿ ಡ್ರಗ್ಸ್ ಮಾರಾಟಕ್ಕೆಯತ್ನಿಸಿದ ಮೂವರ ಬಂಧನ