ಕನ್ನಡಪ್ರಭ ವಾರ್ತೆ ಸಕಲೇಶಪುರ
ರಾಷ್ಟ್ರೀಯ ಹೆದ್ದಾರಿ ೭೫ ತಾಲೂಕಿನ ಆನೇಮಹಲ್ ಸಮೀಪ ಲಾರಿಯಲ್ಲಿ ಅಕ್ರಮವಾಗಿ ಸಾಗಾಟವಾಗುತ್ತಿದ್ದ ಕಾಡು ಜಾತಿಯ ಒಂದು ಲೋಡ್ ಮರವನ್ನು ವಶಪಡಿಸಿಕೊಳ್ಳಲಾಗಿದೆ. ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್, ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್ ಮತ್ತು ಗಸ್ತು ಅರಣ್ಯ ಪಾಲಕರಾದ ಉಮೇಶ್, ಲೋಕೇಶ್ ,ಜಯಸ್ವಾಮಿ ಹಾಗೂ ಅರಣ್ಯ ವೀಕ್ಷಕ ಲೋಕೇಶ್ ಮತ್ತು ಡ್ರೈವರ್ ಆಶ್ರಯ ದಾಳಿ ನಡೆಸಿ ವಾಹನವನ್ನು ವಶಪಡಿಸಿಕೊಂಡು ಅರಣ್ಯ ಮೊಕದಮ್ಮೆ - ೩೯/೨೦೨೫-೨೬ ದಾಖಲಿಸಿದ್ದಾರೆ. ತಾಲೂಕಿನಲ್ಲಿ ಅರಣ್ಯ ಇಲಾಖೆ ವತಿಯಿಂದ ನಿರಂತರವಾಗಿ ಅಕ್ರಮವಾಗಿ ಸಾಗಾಟ ಮಾಡಲಾಗುವ ದಿಮ್ಮಿಗಳನ್ನು ಅರಣ್ಯ ಇಲಾಖೆ ವತಿಯಿಂದ ವಶಪಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಅಕ್ರಮವಾಗಿ ಬಿಲೇಟ್ಸ್ ಸಾಗಿಸುವರ ಸಂಖ್ಯೆ ಬಹಳ ಕಡಿಮೆಯಾಗಿದೆ.