ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

KannadaprabhaNewsNetwork |  
Published : Aug 26, 2024, 01:37 AM IST
೨೫ಎಸ್.ಎನ್.ಡಿ೦೨ | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೪-೨೦೨೯ರ ಅವಧಿಗೆ ಹಮ್ಮಿಕೊಂಡ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ತಾಲೂಕು ಘಟಕ ಸಂಘದ ಗೌರವಾಧ್ಯಕ್ಷರಾಗಿ ಚಂದ್ರಶೇಖರ ಚೌಧರಿ, ಅಧ್ಯಕ್ಷರಾಗಿ ಬುಳ್ಳಪ್ಪ.ಡಿ, ಉಪಾಧ್ಯಕ್ಷರಾಗಿ ಶಿವಲಿಂಗ ಉಮ್ಮರಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮೀಪುತ್ರ ಕಿರನಳ್ಳಿ, ಕೋಶಾಧ್ಯಕ್ಷರಾಗಿ ಮಹೇಶ ಎನ್, ಖಜಾಂಚಿಗಳಾಗಿ ಬಸವರಾಜ ರಾಠೋಡ, ಸಂಘಟನಾ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಅಶೋಕ ರಾಠೋಡ, ಪ್ರೇಮಾ ನಾಯಕ, ಬಂಗಾರಿ ಕುಲಕರ್ಣಿ, ಕವಿತಾ ಪಶುಪತಿಮಠ, ಮೇಘು ನಾಯಕ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರಬರ ಹೇಳಿದರು.

ಕನ್ನಡಪ್ರಭ ವಾರ್ತೆ ಸಿಂದಗಿ

ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೪-೨೦೨೯ರ ಅವಧಿಗೆ ಹಮ್ಮಿಕೊಂಡ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ನೂತನ ತಾಲೂಕು ಘಟಕ ಸಂಘದ ಗೌರವಾಧ್ಯಕ್ಷರಾಗಿ ಚಂದ್ರಶೇಖರ ಚೌಧರಿ, ಅಧ್ಯಕ್ಷರಾಗಿ ಬುಳ್ಳಪ್ಪ.ಡಿ, ಉಪಾಧ್ಯಕ್ಷರಾಗಿ ಶಿವಲಿಂಗ ಉಮ್ಮರಗಿ, ಪ್ರಧಾನ ಕಾರ್ಯದರ್ಶಿಗಳಾಗಿ ಲಕ್ಷ್ಮೀಪುತ್ರ ಕಿರನಳ್ಳಿ, ಕೋಶಾಧ್ಯಕ್ಷರಾಗಿ ಮಹೇಶ ಎನ್, ಖಜಾಂಚಿಗಳಾಗಿ ಬಸವರಾಜ ರಾಠೋಡ, ಸಂಘಟನಾ ಹಾಗೂ ಸಹ ಸಂಘಟನಾ ಕಾರ್ಯದರ್ಶಿಗಳಾಗಿ ಅಶೋಕ ರಾಠೋಡ, ಪ್ರೇಮಾ ನಾಯಕ, ಬಂಗಾರಿ ಕುಲಕರ್ಣಿ, ಕವಿತಾ ಪಶುಪತಿಮಠ, ಮೇಘು ನಾಯಕ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಹಿರೇಕುರಬರ ಹೇಳಿದರು.

ಪಟ್ಟಣದ ಹೀರಾಮಾತಾ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ೨೦೨೪-೨೦೨೯ರ ಅವಧಿಗೆ ಹಮ್ಮಿಕೊಂಡ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆಯಲ್ಲಿ ಪದಗೃಹಣ ಸ್ವೀಕರಿಸಿದ ಬುಳ್ಳಪ್ಪ.ಡಿ ಮಾತನಾಡಿ, ಮುಂಬರುವ ದಿನಗಳಲ್ಲಿ ಅನುದಾನಿತ ಶಾಲೆಗಳ ಹಾಗೂ ಶಿಕ್ಷಕರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಕಾರ್ಯ ಮಾಡುತ್ತೇನೆ. ಸಂಘದಿಂದ ಮಾನ್ಯತಾ ನವೀಕರಣವನ್ನು ಸರಳಿಕರಣಗೊಳಿಸುವ ಪ್ರಯತ್ನ ಮಾಡುವೆ. ಮಕ್ಕಳಿಗೆ ಸಿಗಬೇಕಾದ ವಿವಿಧ ಸೌಲಭ್ಯಗಳನ್ನು ದೊರಕಿಸಿಕೊಡುವುದು. ಹಲವಾರು ದಿನಗಳಿಂದ ನೆನೆಗುದಿಗೆ ಬಿದ್ದಿರುವ ಶಿಕ್ಷಕರ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹರಿಸುವುದಕ್ಕೆ ಮೊದಲ ಆದ್ಯತೆ ನೀಡುವೆ ಎಂದರು.

ಈ ವೇಳೆ ಜಿಲ್ಲಾ ಸಂಘದ ಗೌರವಾಧ್ಯಕ್ಷ, ಎಸ್.ಎಂ.ಬಿರಾದಾರ, ಜಿಲ್ಲಾದ್ಯಕ್ಷ ಶಿವಾನಂದ ಹಿರೇಕುರಬರ, ಪ್ರಧಾನ ಕಾರ್ಯದರ್ಶಿ ಗಿರೀಶ ಬಿರಾದಾರ, ಸಹ ಕಾರ್ಯದರ್ಶಿ ಸುಭಾಸ ಪಾಟೀಲ, ಸಂಘಟನಾ ಕಾರ್ಯದರ್ಶಿ ಎಚ್.ಎ.ಕುಂದರಗಿ, ಮಾಳು ಹೊಸೂರ, ನಿವೃತ್ತ ಶಿಕ್ಷಕ ಎಸ್.ಎಂ.ಕುಂಬಾರ ಸೇರಿದಂತೆ ತಾಲೂಕಿನ ವಿವಿಧ ಶಾಲೆಗಳ ಸಹ ಶಿಕ್ಷಕರು ಉಪಸ್ಥಿತರಿದ್ದರು.

PREV

Recommended Stories

''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ