ಸೆಸ್ಕ್ ನಿಗಮ ಮಟ್ಟದ ಕ್ರೀಡಾ ತಂಡಗಳ ಆಯ್ಕೆ ಪ್ರಕ್ರಿಯೆ

KannadaprabhaNewsNetwork |  
Published : Dec 19, 2025, 01:15 AM IST
3 | Kannada Prabha

ಸಾರಾಂಶ

ಪ್ರತಿಯೊಬ್ಬರಲ್ಲೂ ಕ್ರೀಡಾ ಮನೋಭಾವ ಹಾಗೂ ಕ್ರೀಡಾ ಸ್ಫೂರ್ತಿ ಇರಬೇಕಿದ್ದು, ಈ ಮನೋಭಾವ ಕೇವಲ ಕ್ರೀಡೆಯಲ್ಲಿ ಮಾತ್ರವಲ್ಲದೇ, ವೃತ್ತಿಯಲ್ಲೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಮುನ್ನಡೆಯಬೇಕು.

ಕನ್ನಡಪ್ರಭ ವಾರ್ತೆ ಮೈಸೂರು

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಹಾಗೂ ಕೆಪಿಟಿಸಿಎಲ್ ಮೈಸೂರು ವತಿಯಿಂದ 2025-26ನೇ ಸಾಲಿನ ಸೆಸ್ಕ್ ನಿಗಮ ಮಟ್ಟದ ಕ್ರೀಡಾ ತಂಡಗಳ ಆಯ್ಕೆ ಪ್ರಕ್ರಿಯೆ ಗುರುವಾರ ನಡೆಯಿತು.

ನಗರದ ನಜರಬಾದ್‌ ನಲ್ಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸೆಸ್ಕ್‌ವಿಭಾಗ ವ್ಯಾಪ್ತಿಗೆ ಒಳಪಡುವ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಕೊಡಗು ವಿಭಾಗದಿಂದ ಒಟ್ಟು 729 ಕ್ರೀಡಾಪಟುಗಳು ಭಾಗವಹಿಸಿದ್ದು, ಇವರಲ್ಲಿ 611 ಪುರುಷರು ಹಾಗೂ 118 ಮಹಿಳಾ ಕ್ರೀಡಾಪಟುಗಳು ಭಾಗವಹಿಸಿದ್ದರು.

ಕ್ರೀಡಾ ತಂಡಗಳ ಆಯ್ಕೆ ಪ್ರಕ್ರಿಯೆಯಲ್ಲಿ ಕೇರಂ, ಬ್ಯಾಸ್ಕೆಟ್ ಬಾಲ್, ಈಜು, ವಾಲಿಬಾಲ್, ಚೆಸ್, ಟೆಬಲ್ ಟೆನ್ನಿಸ್, ಷಟಲ್ ಬ್ಯಾಡ್ಮಿಂಟನ್, ಕ್ರಿಕೆಟ್, ಸ್ನೂಕರ್‌, ಯೋಗ, ಹಾಕಿ, ಟೆಬಲ್ ಟೆನ್ನಿಸ್, ಫುಟ್‌ ಬಾಲ್‌, ಕಬಡ್ಡಿ, ಲಾನ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್, ದೇಹದಾರ್ಡ್ಯ ಹಾಗೂ ಅಥ್ಲೆಟಿಕ್ಸ್ ಸ್ಪರ್ಧೆಗಳಿಗೆ ಆಟಗಾರರನ್ನು ಆಯ್ಕೆ ಮಾಡಲಾಯಿತು. ಈ ಎಲ್ಲಾ ಕ್ರೀಡೆಗಳು ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ನಡೆಯಿತು.

ಇದಕ್ಕೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಸೆಸ್ಕ್ ಮುಖ್ಯ ಎಂಜಿನಿಯರ್ ಹಾಗೂ ಕ್ರೀಡಾ ಸಮಿತಿ ಅಧ್ಯಕ್ಷ ಮೃತ್ಯುಂಜಯ ಹಾಗೂ ಸೆಸ್ಕ್ ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ ಅವರು, ನಿಗಮ ಮಟ್ಟದ ಕ್ರೀಡಾ ತಂಡಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದರು.

ನಂತರ ಮೃತ್ಯುಂಜಯ ಮಾತನಾಡಿ, ಪ್ರತಿಯೊಬ್ಬರಲ್ಲೂ ಕ್ರೀಡಾ ಮನೋಭಾವ ಹಾಗೂ ಕ್ರೀಡಾ ಸ್ಫೂರ್ತಿ ಇರಬೇಕಿದ್ದು, ಈ ಮನೋಭಾವ ಕೇವಲ ಕ್ರೀಡೆಯಲ್ಲಿ ಮಾತ್ರವಲ್ಲದೇ, ವೃತ್ತಿಯಲ್ಲೂ ಕ್ರೀಡಾ ಮನೋಭಾವ ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು.

ಸೆಸ್ಕ್ ಕ್ರೀಡಾ ಸಮಿತಿ ಕೋಶಾಧ್ಯಕ್ಷ ಪರಮೇಶ್ವರ್, ನೌಕರರ ಸಂಘದ ಉಪಾಧ್ಯಕ್ಷರಾದ ಸಂದೀಪ್, ಮಹೇಶ್, ಡಿಪ್ಲೊಮಾ ಎಂಜಿನಿಯರ್ಸ್ ಸಂಘದ ಉಪಾಧ್ಯಕ್ಷ ರವಿಲಿಂಗಪ್ಪ, ಕವಿಮಂ ಪಜಾ/ ಪವ ವರ್ಗಗಳ ರಾಜ್ಯ ಉಪಾಧ್ಯಕ್ಷ ಮಂಜುನಾಥ್‌, ನಿಗಮ ಕ್ರೀಡಾ ಕಾರ್ಯದರ್ಶಿ ಎಂ.ಎ. ಮಂಜುನಾಥ್, ನೌಕರರ ಸಂಘ(659), ಕೆಪಿಟಿಸಿಎಲ್‌ಲೆಕ್ಕಾಧಿಕಾರಿಗಳ ಸಂಘದ ಕಲ್ಯಾಣ ಸಂಸ್ಥೆಯ ಸಂಘಟನಾ ಕಾರ್ಯದರ್ಶಿ, ಸ್ಥಳೀಯ ಸಮಿತಿ ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು