ಸಾಧನೆಗೆ ಆತ್ಮವಿಶ್ವಾಸವೇ ಶಿಖರ: ಮಂಗಳಾನಾಥನಂದಜೀ ಮಹಾರಾಜ್

KannadaprabhaNewsNetwork |  
Published : Aug 25, 2026, 03:15 AM IST
ಎಕ್ಸಲಂಟ್ ವಿಜ್ಞಾನ ಪ.ಪೂ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ | Kannada Prabha

ಸಾರಾಂಶ

ನನ್ನಲ್ಲಿ ಅನವರತ ಶಕ್ತಿ ಇದೆ, ನಾನು ಏನನ್ನಾದರೂ ಬೇಕಾದರೂ ಸಾಧಿಸಬಲ್ಲೆ ಎನ್ನುವ ಉಕ್ತಿಯು ವಿದ್ಯಾರ್ಥಿಗಳ ಆತ್ಮವಿಶ್ವಾಸದ ಮಂತ್ರವಾಗಿದ್ದು, ಅದನ್ನು ಸದಾ ಜಪಿಸುತ್ತಲಿರಬೇಕು. ಆಗಮಾತ್ರ ನಮ್ಮಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳ್ಳುವುದರ ಜೊತೆಗೆ ಸಾಧನೆಯ ಶಿಖರವೇರುವುದಕ್ಕೆ ಸಾಧ್ಯವೆಂದು ಬಳ್ಳಾರಿ ರಾಮಕೃಷ್ಣ ಮಿಶನ್ ಕಾರ್ಯದರ್ಶಿ ಪ.ಪೂ. ಮಂಗಳಾನಾಥನಂದಜೀ ಮಹಾರಾಜ್ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ನನ್ನಲ್ಲಿ ಅನವರತ ಶಕ್ತಿ ಇದೆ, ನಾನು ಏನನ್ನಾದರೂ ಬೇಕಾದರೂ ಸಾಧಿಸಬಲ್ಲೆ ಎನ್ನುವ ಉಕ್ತಿಯು ವಿದ್ಯಾರ್ಥಿಗಳ ಆತ್ಮವಿಶ್ವಾಸದ ಮಂತ್ರವಾಗಿದ್ದು, ಅದನ್ನು ಸದಾ ಜಪಿಸುತ್ತಲಿರಬೇಕು. ಆಗಮಾತ್ರ ನಮ್ಮಲ್ಲಿ ಆತ್ಮವಿಶ್ವಾಸ ದ್ವಿಗುಣಗೊಳ್ಳುವುದರ ಜೊತೆಗೆ ಸಾಧನೆಯ ಶಿಖರವೇರುವುದಕ್ಕೆ ಸಾಧ್ಯವೆಂದು ಬಳ್ಳಾರಿ ರಾಮಕೃಷ್ಣ ಮಿಶನ್ ಕಾರ್ಯದರ್ಶಿ ಪ.ಪೂ. ಮಂಗಳಾನಾಥನಂದಜೀ ಮಹಾರಾಜ್ ಹೇಳಿದರು.

ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆತ್ಮವಿಶ್ವಾಸ ವೃದ್ಧಿ ಹಾಗೂ ಮನೋನಿರ್ವಹಣೆ ಎಂಬ ವಿಷಯದ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕಿನಲ್ಲಿ ಬರೀ ಗೆಲವು ಕಂಡವನು ಎಂದೂ ಯಶಸ್ವಿಯಾಗಲಾರ. ಸೋತು ಗೆದ್ದವರು ಮಾತ್ರ ಯಶಸ್ವಿಯಾಗುತ್ತಾರೆ. ಆ ಸಾಧನೆಯ ಮಾರ್ಗದಲ್ಲಿ ಸಾಗುವಾಗ ನನ್ನಿಂದ ಎಲ್ಲವೂ ಸಾಧ್ಯ. ನಾನು ಅಂದುಕೊಂಡದ್ದನ್ನು ಮಾಡಿ ತೋರಿಸುತ್ತೇನೆ ಎನ್ನುವ ಛಲಮೂಡಿಸಿಕೊಳ್ಳಬೇಕು. ಸೋಲುತ್ತೇನೆಂಬ ಭಯವೂ ಇರಬಾರದು, ಸೋತೆನೆಂಬ ಹತಾಸೆಯು ಇರಬಾರದು. ಸೋತರು ಸರಿ ಮತ್ತೆ ಮತ್ತೆ ಯತ್ನಿಸಿ ಗೆಲ್ಲುತ್ತೇನೆಂಭ ಮನೋದಾರ್ಢ್ಯತೆ ಇರಬೇಕು. ಆಗ ಮಾತ್ರ ಯಶಸ್ಸು ಸಿಗುತ್ತದೆ. ಸ್ವಾಮಿ ವಿವೇಕಾನಂದರು ಹೇಳುವಂತೆ ನಕಾರಾತ್ಮ ವಿಚಾರಗಳನ್ನು ಸಕಾರಾತ್ಮಕ ಚಿಂತನೆಗಳ ಮೂಲಕ ಹೊಡೆದೋಡಿಸಬೇಕು. ವಿಚಾರಗಳು ಶುದ್ಧವಾಗಿದ್ದರೆ ಮನಸ್ಸು ಸಹ ನಿರ್ಮಲವಾಗುತ್ತದೆ. ಮನಸ್ಸು ನಿರ್ಮಲವಾದರೆ ಮನವೇ ಮಂದಿರವಾಗುತ್ತದೆ. ಆ ನಿಟ್ಟಿನಲ್ಲಿ ಬದಲಾವಣೆಯ ಪರ್ವಕ್ಕೆ ಮನಸ್ಸು ತೆರೆದುಕೊಳ್ಳಬೇಕು ಎಂದರು.

ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಚೇರ್‌ಮನ ಬಸವರಾಜ ಕೌಲಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕ ಮಂಡಳಿ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಶರಣಗೌಡ ಪಾಟೀಲ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಟಿ ವೃಕ್ಷ ಅಭಿಯಾನದಿಂದ ಅರಣ್ಯ ಪ್ರದೇಶ ಶೇ.2.4ಕ್ಕೆ ಏರಿಕೆ: ಪ್ರಶಾಂತ.ಪಿ.ಕೆ.ಎಂ
ಕಾಲುವೆ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ