ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿತ್ರದುರ್ಗದ ಎಸ್.ಜೆ .ಎಂ. ವಿದ್ಯಾಪೀಠ, ಯುವ ಸಬಲೀಕರಣ ಇಲಾಖೆ ಕರ್ನಾಟಕ ಸರ್ಕಾರ, ತಾಂತ್ರಿಕ ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಎಸ್.ಜೆ.ಎಂ ಪಾಲಿಟೆಕ್ನಿಕ್ (ಅನುದಾನಿತ) ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಚಿತ್ರದುರ್ಗ ತಾಲೂಕಿನ ಪಂಡರಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಎನ್ಎಸ್ಎಸ್ ಶಿಬಿರದ ಮೂರನೇ ದಿನದ ಸಭಾ ಕಾರ್ಯಕ್ರಮದಲ್ಲಿ ಸ್ವ-ಉದ್ಯೋಗ ಕೈಗೊಳ್ಳುವ ವಿಷಯ ಕುರಿತು ಮಾತನಾಡಿದರು.
ನಿರುದ್ಯೋಗಿ ಯುವಕ ಯುವತಿಯರು 18 ರಿಂದ 45 ವರ್ಷದೊಳಗಿನ ಯಾರೇ ಆಗಿರಲಿ ಅವರಿಗೆ ನಮ್ಮಲ್ಲಿ ಲಭ್ಯವಿರುವ ಕೌಶಲ್ಯ ತರಬೇತಿ ನೀಡಲಾಗುವುದು . ಈ ಸಂಸ್ಥೆ ಇದುವರೆಗೆ ಜಿಲ್ಲೆಯಲ್ಲಿ ಮೂವತ್ತೈದು ಸಾವಿರ ಜನರಿಗೆ ತರಬೇತಿ ನೀಡಿದೆ. ತರಬೇತಿ ಪಡೆದ ಬಹುತೇಕರು ತಮ್ಮ ವೃತ್ತಿಯಲ್ಲಿ ನೈಪುಣ್ಯತೆಯೊಂದಿಗೆ ಕೆಲಸ ಆರಂಭಿಸಿ ಜೀವನದಲ್ಲಿ ಯಶಕಂಡಿದ್ದಾರೆ ಎಂದರು.ಸ್ವ ಉದ್ಯೋಗ ಮಾಡಲಿಚ್ಛಿಸುವವರು ಸಂಸ್ಥೆಗೆ ಬಂದು ಅರ್ಜಿ ಭರ್ತಿ ಮಾಡಿ ಹೋಗಬಹುದು. ಇಷ್ಟವಾದ ತರಬೇತಿ ಯಾವುದು ಎನ್ನುವುದನ್ನು ನಮೂದಿಸಿ ಹೋದಲ್ಲಿ ನಾವು ಆ ಸಂದರ್ಭಕ್ಕೆ ಕರೆಯುತ್ತೇವೆ. ತರಬೇತಿ ಸಂದರ್ಭದಲ್ಲಿ ಇಲ್ಲಿ ಎಲ್ಲವೂ ಉಚಿತವಾಗಿರುತ್ತದೆ .ಅದು ಪ್ರಯಾಣ ಭತ್ಯೆಯೂ ಸೇರಿದಂತೆ ಎಂದು ಸಂಸ್ಥೆಯ ಬಗೆಗಿನ ಅನೇಕ ಕೌಶಲ್ಯ ತರಬೇತಿಗಳ ಪರಿಚಯ ಮಾಡಿಕೊಟ್ಟರು.
ವೇದಿಕೆಯಲ್ಲಿ ರುಡ್ ಸೆಟ್ ಸಂಸ್ಥೆಯ ನಿರ್ದೇಶಕರಾದ ರಾಧಾ ಎಚ್.ಆರ್, ಪಂಡರಹಳ್ಳಿ ಗ್ರಾಮ ಪಂಚಾಯತಿ ಸದಸ್ಯೆ ಶಶಿರೇಖಾ ಮಂಜುನಾಥ್, ನಿವೃತ್ತ ಶಿಕ್ಷಕ ಜಿ.ಆರ್.ಹಾಲಪ್ಪ, ಎನ್ ಎಸ್ ಎಸ್ ಶಿಬಿರಾಧಿಕಾರಿ ಗೋವಿಂದರಾಜು. ಟಿ, ಶಿಬಿರದ ಮೇಲ್ವಿಚಾರಕ ಕೆ.ಸುರೇಶ್ ,ಸಹ ಮೇಲ್ವಿಚಾರಕ ಕೇಶವಮೂರ್ತಿ. ಎಂ ಮತ್ತಿತರರು ಉಪಸ್ಥಿತರಿದ್ದರು.