ಸ್ವಉದ್ಯೋಗವು ಆರ್ಥಿಕ ಭದ್ರತೆಗೆ ಕಾರಣವಾಗುತ್ತದೆ : ದಯಾನಂದ ಕೋಟ್ಯಾನ್

KannadaprabhaNewsNetwork |  
Published : Jun 28, 2026, 03:45 AM IST
27ರುಡ್‌ಸೆಟ್ | Kannada Prabha

ಸಾರಾಂಶ

ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ವಸ್ತ್ರ ಕಲಾ (ಎಂಬ್ರಾಯ್ಡರಿ) ಲಘು ಉದ್ಯಮಿ ತರಬೇತಿಯಯನ್ನು ರಾಜ್ಯ ಟೈಲರಿಂಗ್ ಅಸೋಸಿಯೇಶನ್ ಇದರ ಉಡುಪಿ ಜಿಲ್ಲಾಧ್ಯಕ್ಷ ದಯಾನಂದ ಕೋಟ್ಯಾನ್ ಅವರು ಉದ್ಘಾಟಿಸಿದರು.

ಬ್ರಹ್ಮಾವರ: ಇಲ್ಲಿನ ಗ್ರಾಮಾಭಿವೃದ್ಧಿ ಮತ್ತು ಸ್ವಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆಯಲ್ಲಿ ವಸ್ತ್ರ ಕಲಾ (ಎಂಬ್ರಾಯ್ಡರಿ) ಲಘು ಉದ್ಯಮಿ ತರಬೇತಿಯಯನ್ನು ರಾಜ್ಯ ಟೈಲರಿಂಗ್ ಅಸೋಸಿಯೇಶನ್ ಇದರ ಉಡುಪಿ ಜಿಲ್ಲಾಧ್ಯಕ್ಷ ದಯಾನಂದ ಕೋಟ್ಯಾನ್ ಅವರು ಉದ್ಘಾಟಿಸಿದರು.ನಂತರ ಮಾತನಾಡಿದ ಅವರು, ಮಹಿಳೆಯರು ತಮ್ಮ ಆಸಕ್ತಿಯ ಕ್ಷೇತ್ರವಾಗಿರುವ ಟೈಲರಿಂಗ್ ಹಾಗೂ ಎಂಬ್ರಾಯ್ಡರಿ ಉದ್ಯಮವು ಅತ್ಯಂತ ಲಾಭದಾಯಕ ಹಾಗೂ ಬಹಳ ಬೇಡಿಕೆಯಿರುವ ಕ್ಷೇತ್ರವಾಗಿದೆ. ಇದರಿಂದ ಮಹಿಳೆಯರಿಗೆ ಸ್ವ ಉದ್ಯೋಗವನ್ನು ಕೈಗೊಂಡು ಆರ್ಥಿಕವಾಗಿ ಸಬಲತೆಯನ್ನು ಹೊಂದಲು ಸಾಧ್ಯವಾಗುತ್ತದೆ. ಸ್ವಾಭಿಮಾನದಿಂದ ಬದುಕಲು ಪ್ರೇರಣೆ ನೀಡುತ್ತದೆ. ಇನ್ನೊಬ್ಬರ ಮುಂದೆ ನಿಂತು ಕೈ ಚಾಚುವ ಪ್ರಮೇಯ ತಪ್ಪುತ್ತದೆ. ಹಾಗಾಗಿ ಸ್ವಉದ್ಯೋಗವು ಆರ್ಥಿಕ ಭದ್ರತೆ ಜೊತೆಗೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ ಎಂದರು.

ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದ ಯುವ ಜನತೆಗೆ ಸ್ವ ಉದ್ಯೋಗವನ್ನು ಪ್ರಾರಂಭಿಸಲು ರುಡ್‌ಸೆಟ್ ಸಂಸ್ಥೆ ನೆರವಾಗುತ್ತಿದೆ. ಒಂದು ತಿಂಗಳು ತಮ್ಮ ಇತರೆ ಕೆಲಸಗಳನ್ನು ಬದಿಗಿರಿಸಿ, ಸಂಸ್ಥೆಯು ನೀಡುವ ತರಬೇತಿಯನ್ನು ಉತ್ತಮ ರೀತಿಯಲ್ಲಿ ಪಡೆದು ಯಶಸ್ವಿ ಉದ್ಯಮಗಳಾಗಿ ಎಂದು ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಂಸ್ಥೆಯ ಹಿರಿಯ ಉಪನ್ಯಾಸಕ ಸಂತೋಷ್ ಶೆಟ್ಟಿ ಮಾತನಾಡಿ, ಸಂಸ್ಥೆಯಲ್ಲಿ ಸಿಗುವ ತರಬೇತಿಯನ್ನು ಶ್ರದ್ಧೆಯಿಂದ ಪಡೆದುಕೊಂಡು, ಇಲ್ಲಿನ ಸವಲತ್ತುಗಳನ್ನು ನಿಮ್ಮ ಪ್ರೀತಿಪಾತ್ರರಲಿ ಹಂಚಿಕೊಂಡು ದೇಶದ ಆರ್ಥಿಕ ವ್ಯವಸ್ಥೆಯನ್ನು ಸುಧಾರಿಸೋಣ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮವನ್ನು ಉಪನ್ಯಾಸಕಿ ಚೈತ್ರ ಕೆ. ನಿರೂಪಿಸಿ, ಸ್ವಾಗತಿಸಿದರು. ಹಿರಿಯ ಕಚೇರಿ ಸಹಾಯಕ ರವಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯುವ ಜನತೆಯಲ್ಲಿ ಯೋಗದ ಬಗ್ಗೆ ರೆಡ್‌ಕ್ರಾಸ್‌ ಅರಿವು: ಸಿಎ ಶಾಂತಾರಾಮ ಶೆಟ್ಟಿ
ಸ್ತ್ರೀ ಪರಿಪೂರ್ಣತೆಯ ಸಂಕೇತ: ಡಾ. ಮೋಹನ್ ಆಳ್ವ