- ಪುರಸಭೆ ನೇತೃತ್ವದಲ್ಲಿ ಬೀದಿನಾಟಕ-ಜಾಗೃತಿ ಕಾರ್ಯಕ್ರಮದಲ್ಲಿ ಬಾಲಾಜಿ ರಾವ್ - - - ಕನ್ನಡಪ್ರಭ ವಾರ್ತೆ ಚನ್ನಗಿರಿ
ಜಿಲ್ಲಾಡಳಿತ, ಕೌಶ್ಯಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪುರಸಭೆ ಆಶ್ರಯದಲ್ಲಿ ನಡೆದ ಬೀದಿ ನಾಟಕದ ಉದ್ಘಾಟನೆಯನ್ನು ಪುರಸಭೆ ಸಮದಾಯ ಸಂಘಟನಾಧಿಕಾರಿ ಬಾಲಾಜಿ ರಾವ್ ನೆರವೇರಿಸಿದರು.
ಬಳಿಕ ಮಾತನಾಡಿದ ಬಾಲಾಜಿ ರಾವ್ ಅವರು, ಬೀದಿ ಬದಿಯಲ್ಲಿ ವ್ಯಾಪಾರ ಮಾಡುವ ಸಣ್ಣಪುಟ್ಟ ವ್ಯಾಪಾರಿಗಳ ಶ್ರೇಯೋಭಿವೃದ್ಧಿಗೆ ಸರ್ಕಾರ 8 ಯೋಜನೆಗಳನ್ನು ಜಾರಿಗೆ ತಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಬೀದಿಬದಿ ವ್ಯಾಪಾರಿಗಳು ಕಚೇರಿಗೆ ಬಂದು ಮಾಹಿತಿ ಪಡೆಯಬೇಕು ಎಂದರು.ಸರ್ಕಾರ ಬೀದಿಬದಿಯ ವ್ಯಾಪಾರಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಸಬ್ಸಿಡಿ ದರದಲ್ಲಿ ತಳ್ಳುವ ಗಾಡಿ ಸೇರಿದಂತೆ ವಿವಿಧ ಸೌಲಭ್ಯಗಳ ಮಾಹಿತಿಯನ್ನು ಪ್ರಚುರಪಡಿಸಲು ಬೀದಿನಾಟಕ ಮತ್ತು ಪುರಸಭೆ ವಾಹನದಲ್ಲಿ ಧ್ವನಿವರ್ಧಕಗಳ ಮೂಲಕ ಪ್ರಚುರ ಪಡಿಸಲಾಗುತ್ತಿದೆ ಎಂದರು.
ಈ ಸಂದರ್ಭ ಹಿರಿಯ ಆರೋಗ್ಯ ನಿರೀಕ್ಷಕ ಶಿವರುದ್ರಪ್ಪ, ಕಚೇರಿ ಸಿಬ್ಬಂದಿ ಎನ್.ಎಚ್. ಹರ್ಷಿತಾ, ಭಾಗ್ಯಶ್ರೀ, ಪುರಸಭೆಯ ಪೌರಕಾರ್ಮಿಕರು ಹಾಜರಿದ್ದರು.
ಬೀದಿಬದಿ ವ್ಯಾಪಾರಸ್ಥರಿಗೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಬೀದಿ ನಾಟಕಕ್ಕೆ ಪುರಸಭೆಯ ಸಮುದಾಯ ಸಂಘಟನಾಧಿಕಾರಿ ಬಾಲಾಜಿ ರಾವ್ ಚಾಲನೆ ನೀಡಿದರು.