ಕೆಚ್ಚೆದೆಯ ಯುವಜನತೆಯಿಂದ ಆತ್ಮನಿರ್ಭರ ಭಾರತ

KannadaprabhaNewsNetwork |  
Published : Jan 12, 2026, 01:15 AM IST
್ಿ್ಿ್ಿ | Kannada Prabha

ಸಾರಾಂಶ

ಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಯುವಜನರು ಪ್ರಮುಖ ಪಾತ್ರ ವಹಿಸುತ್ತಾರೆ. ಯುವಜನತೆ ಕ್ರಿಯಾತ್ಮಕ ಶಕ್ತಿಯಾಗಿ ಪುರುಷ ಸಿಂಹರಾಗಿ ಕೆಲಸ ಮಾಡಬೇಕು ಎಂದು ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಪಿ.ಕೃಷ್ಣಭಟ್‌ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ, ತುಮಕೂರುಆತ್ಮನಿರ್ಭರ ಭಾರತ ನಿರ್ಮಾಣದಲ್ಲಿ ಯುವಜನರು ಪ್ರಮುಖ ಪಾತ್ರ ವಹಿಸುತ್ತಾರೆ. ಯುವಜನತೆ ಕ್ರಿಯಾತ್ಮಕ ಶಕ್ತಿಯಾಗಿ ಪುರುಷ ಸಿಂಹರಾಗಿ ಕೆಲಸ ಮಾಡಬೇಕು ಎಂದು ಕರ್ನಾಟಕ ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಪಿ.ಕೃಷ್ಣಭಟ್‌ ಅಭಿಪ್ರಾಯಪಟ್ಟರು. ಅವರು ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ 33 ನೇ ವಾರ್ಷಿಕೋತ್ಸವದ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಯುವ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.ಇಂತಹ ಶಕ್ತಿಯುತವಾದ ಯುವಜನಾಂಗವನ್ನು ನಿರ್ಮಾಣ ಮಾಡುವ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಸಮಾಜ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಿದೆ. ಮುಂದಿಟ್ಟ ಹೆಜ್ಜೆ ಹಿಂದಿಡದೆ ಮುನ್ನುಗುವ ಕೆಚ್ಚೆದೆಯ ಯುವಜನತೆಯಿಂದ ಮಾತ್ರ ಶಕ್ತಿಯುತವಾದ ರಾಷ್ಟ್ರ, ಆತ್ಮನಿರ್ಭರ ಭಾರತ ನಿರ್ಮಾಣ ಸಾಧ್ಯ, ಎಂದರು.ಸ್ವಾಮಿ ವಿವೇಕಾನಂದರು ಹೇಳುವಂತೆ ಶಿಕ್ಷಣ ಎನ್ನುವುದು ಮನುಷ್ಯನಲ್ಲಿ ಈಗಾಗಲೇ ಇರುವಂತಹ ಪರಿಪೂರ್ಣತೆಯ ವ್ಯಕ್ತತೆ. ಚಾರಿತ್ರ್ಯ ನಿರ್ಮಾಣ ಮಾಡುವಂತಹ, ಮಾನಸಿಕ ಶಕ್ತಿಯನ್ನು ಪುಷ್ಠಿಗೊಳಿಸುವಂತಹ, ಬುದ್ಧಿಯನ್ನು ವೃದ್ಧಿಗೊಳಿಸುವಂತಹ, ಸ್ವಾವಲಂಬಿಗಳನ್ನಾಗಿಸುವಂತಹ ಶಿಕ್ಷಣ ಬೇಕಿದೆ. ದೃಢತೆ, ಸಮಗ್ರತೆ, ಅಚಲ ನಂಬಿಕೆ, ಆತ್ಮವಿಶ್ವಾಸ, ಪ್ರಾಮಾಣಿಕತೆಯಿಂದ ಮಾತ್ರ ಆತ್ಮನಿರ್ಭರ ಭಾರತ ನಿರ್ಮಾಣ ಸಾಧ್ಯ. ಪ್ರಜಾಪ್ರಭುತ್ವದಲ್ಲಿ ಜವಾಬ್ದಾರಿ ವಹಿಸಿಕೊಂಡು ಸಾಮಾಜಿಕ ಹಾಗೂ ರಾಷ್ಟ್ರೀಯ ಬೆಳವಣಿಗೆಯ ಕಾರ್ಯದಲ್ಲಿ ಸ್ವಪ್ರೇರಣೆಯಿಂದ ಭಾಗವಹಿಸುವಂತಹ ಯುವಜನತೆಯ ಅವಶ್ಯಕತೆಇದೆ ಎಂದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣೇಗೌಡರು ಮಾತನಾಡಿ ಸಮರ್ಥ ವ್ಯಕ್ತಿಗಳಿಂದ ಶ್ರೇಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಮಾನವ ಜನಾಂಗದ ಇತಿಹಾಸ ಆತ್ಮವಿಶ್ವಾಸ ಹೊಂದಿದ ಕೆಲವೇ ವ್ಯಕ್ತಿಗಳ ಇತಿಹಾಸ. ಆದ್ದರಿಂದ ವ್ಯಕ್ತಿತ್ವ ನಿರ್ಮಾಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಬೇಕು ಎಂದರು.

ರಾಣೆಬೆನ್ನೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜೀರವರು ದಿವ್ಯ ಉಪಸ್ಥಿತಿ ವಹಿಸಿ ಮಾತನಾಡಿ ಸ್ವಾಮಿ ವಿವೇಕಾನಂದರು ಹೇಳುವಂತೆ ಮನುಷ್ಯ ನಿರ್ಮಾಣ ಶಿಕ್ಷಣ ಇಂದು ಬೇಕಿದೆ. ಶಾರೀರಿಕ, ಮಾನಸಿಕ, ಬೌದ್ಧಿಕ, ಆಧ್ಯಾತ್ಮಿಕ ಶಕ್ತಿಗಳ ವೃದ್ಧಿಯಿಂದ ವ್ಯಕ್ತಿತ್ತ್ವದಲ್ಲಿ ಸಮಗ್ರತೆ ಮೂಡುತ್ತದೆ. ವಿವೇಕ ವಿದ್ಯಾರ್ಥಿ ಪುಸ್ತಕ ಪ್ರೌಢಶಾಲಾ ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಸೂಚಿ. ಸಹವಾಸ ಹಾಗೂ ಪರಿಸರ ವ್ಯಕ್ತಿತ್ವವನ್ನುರೂಪಿಸುತ್ತದೆ. ಭಗವದ್ಗೀತೆಯ ಹಾಗೂ ಉಪನಿಷತ್ತುಗಳ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯಾವುದರಿಂದ ನಮ್ಮಲ್ಲಿ ಅರಿವು, ಪ್ರಜ್ಞೆ ಜಾಗೃತವಾಗುತ್ತದೆಯೋ, ಯಾವುದು ನಮ್ಮನ್ನು ಸಮಸ್ಯೆಗಳಿಂದ ಮುಕ್ತರನ್ನಾಗಿಸುತ್ತದೆಯೋಅದು ಶಿಕ್ಷಣ,” ಎಂದು ನುಡಿದರು.

ತುಮಕೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ವೀರೇಶಾನಂದಜೀ, ರಾಣೆಬೆನ್ನೂರು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಪ್ರಕಾಶಾನಂದಜೀ, ಚಿತ್ರದುರ್ಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಬ್ರಹ್ಮನಿಷ್ಠಾನಂದಜೀ, ಹರಿಹರರಾಮಕೃಷ್ಣ ವಿವೇಕಾನಂದ ಆಶ್ರಮದ ಸ್ವಾಮಿ ಆತ್ಮ ದೀಪಾನಂದಜೀ, ತುಮಕೂರು ಆಶ್ರಮದ ಸ್ವಾಮಿ ಧೀರಾನಂದಜೀ ಹಾಗೂ ಸ್ವಾಮಿ ಪರಮಾನಂದಜೀರವರು ವೇದಘೋಷ ಹಾಗೂ ಭಗವನ್ನಾಮ ಸಂಕೀರ್ತನೆಯನ್ನು ನೆರವೇರಿಸಿಕೊಟ್ಟರು. ಸ್ವಾಮಿ ವೀರೇಶಾನಂದಜೀರವರು ಸ್ವಾಗತ ಹಾಗೂ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಪ್ರೊ.ಅನಸೂಯರವರು ನಿರೂಪಿಸಿ, ಚಿ. ಗಗನ್ ಅಬ್ಬಿನಹೊಳೆರವರು ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ