ನಿರ್ದಿಷ್ಟ ಗುರಿಯೊಂದಿಗೆ ಸ್ವಾವಲಂಬಿಯಾಗಿ

KannadaprabhaNewsNetwork |  
Published : Mar 24, 2025, 01:15 AM IST
23ಐಎನ್‌ಡಿ5,ಇಂಡಿ ತಾಲೂಕಿನ ಬೊಳೆಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಉದ್ಘಾಟಿಸಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಇಂಡಿ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿ, ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವುದರ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ ಹಾಗೂ ಸ್ವಯಂ ಶಿಸ್ತಿನ ಗುಣಗಳನ್ನು ವಿದ್ಯಾರ್ಥಿ ಜೀವನದಿಂದಲೇ ರೂಢಿಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಇಂಡಿ

ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿ, ಜೀವನದಲ್ಲಿ ನಿರ್ದಿಷ್ಟ ಗುರಿ ಹೊಂದುವುದರ ಜೊತೆಗೆ ಗುರುಭಕ್ತಿ, ಶ್ರದ್ಧೆ, ಆಸಕ್ತಿ ಹಾಗೂ ಸ್ವಯಂ ಶಿಸ್ತಿನ ಗುಣಗಳನ್ನು ವಿದ್ಯಾರ್ಥಿ ಜೀವನದಿಂದಲೇ ರೂಢಿಸಿಕೊಂಡು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬೇಕು ಎಂದು ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಹೇಳಿದರು.

ತಾಲೂಕಿನ ಬೊಳೇಗಾಂವ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಜನೆಯೇ ವಿದ್ಯಾರ್ಥಿ ಜೀವನದ ಮುಖ್ಯ ಗುರಿಯಾಗಿರಬೇಕು. ಮಕ್ಕಳಲ್ಲಿ ಶಿಸ್ತು, ಸಂಸ್ಕಾರ ಮುಖ್ಯವಾಗಿರಲಿ. ಮಕ್ಕಳಲ್ಲಿ ಸಕಾರಾತ್ಮಕ ಯೋಚನೆ ಜಾಗೃತವಾಗಿರಬೇಕು. ಸದೃಢ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯವಾಗಿದೆ ಎಂದು ಹೇಳಿದರು.ಇಂಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೈ.ಟಿ.ಪಾಟೀಲ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಮಯಪ್ರಜ್ಞೆ ಬಹಳ ಮುಖ್ಯವಾಗಿರಬೇಕಿದೆ. ನಿರಂತರ ಅಧ್ಯಯನದಿಂದ ವಿದ್ಯಾರ್ಥಿಗಳು ಗುರಿ ತಲುಪಲು ಸಾಧ್ಯ. ಯಾವುದೇ ಗುರಿ ತಲುಪಬೇಕಾದರೂ ಶ್ರದ್ಧೆ, ಸಂಯಮ ಹಾಗೂ ಕಠಿಣ ಪರಿಶ್ರಮ ಅತ್ಯಗತ್ಯವಾಗಿ ಬೇಕು ಎಂದು ತಿಳಿಸಿದರು.ಹಿರೇರೂಗಿ ಗ್ರಾಮ ಪಂಚಾಯಿತಿ ಪಿಡಿಒ ಬಸವರಾಜ ಬಬಲಾದ ಮಾತನಾಡಿ, ಮಕ್ಕಳು ಕುಟುಂಬ, ಸಮಾಜ, ದೇಶದ ಆಸ್ತಿಯಾಗುವಂತೆ ಪಾಲಕರು, ಶಿಕ್ಷಕರು ಶ್ರಮಿಸಬೇಕು. ಮಕ್ಕಳಲ್ಲಿ ನಾನು ವಿಶ್ವಮಾನವನೆಂಬ ಪ್ರಜ್ಞೆ ಬೆಳೆಯಬೇಕಾಗಿದೆ. ಮಕ್ಕಳು ಪರಿಶ್ರಮ, ಪ್ರಾಮಾಣಿಕತೆ ಮತ್ತು ವಿನಯದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ತಡವಲಗ ಮಠದ ಅಭಿನವ ರಾಚೋಟೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಎಸ್‌ಡಿಎಂಸಿ ಅಧ್ಯಕ್ಷ ಶಿವಶಂಕರ ಕಪ್ಪೆನವರ ಅಧ್ಯಕ್ಷತೆ ವಹಿಸಿದ್ದರು. ಬಿಆರ್‌ಪಿ ಬಸವರಾಜ ಗೊರನಾಳ, ರಾಜ್ಯ ಸರ್ಕಾರಿ ನೌಕರರ ರಾಜ್ಯ ಘಟಕದ ಸಂಘಟನಾ ಮತ್ತು ಪ್ರಚಾರ ಸಮಿತಿ ಸದಸ್ಯ ರಮೇಶ ಮುಂಜಣ್ಣಿ, ಎಸ್‌ಡಿಎಂಸಿ ಉಪಾಧ್ಯಕ್ಷ ಸಿದ್ದು ಹುಣಶ್ಯಾಳ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾದೇವ ಹುಣಸಗಿ ಹಾಗೂ ಎಸ್‌ಡಿಎಂಸಿ ಸದಸ್ಯರು, ಗ್ರಾಪಂ ಸದಸ್ಯರು, ಗ್ರಾಮದ ಮುಖಂಡರು ಹಾಗೂ ಹಿರಿಯರು, ಮಕ್ಕಳು ಭಾಗವಹಿಸಿದ್ದರು.

ಮುಖ್ಯ ಶಿಕ್ಷಕ ಮಲ್ಲಪ್ಪ ಬಡದಾಳ ಸ್ವಾಗತಿಸಿದರು. ಈರಣ್ಣ ಹುಣಸಗಿ ನಿರೂಪಿಸಿದರು. ರಾಜೇಶ್ವರಿ ಕೊಳೆಕರ ವಾರ್ಷಿಕ ವರದಿ ಮಂಡಿಸಿದರು. ಎಸ್.ಎಂ.ಅಂಗಡಿ ವಂದಿಸಿದರು. ಮಲ್ಲಮ್ಮ ಹುಣಸಗಿ, ಕೆ.ಡಿ.ಬಿರಾದಾರ, ಸಂತೋಷ ಬಿರಾದಾರ, ಶಂಕರ ಹುಣಸಗಿ, ಸಂಜೀವ ಜಾಲಗೇರಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ