ಕನ್ನಡಪ್ರಭ ವಾರ್ತೆ ಉಡುಪಿ
ಅವರು ಶುಕ್ರವಾರ ಗೀತಾಮಂದಿರದಲ್ಲಿ, ಪರ್ಯಾಯ ಪುತ್ತಿಗೆ ಮಠ ಹಾಗೂ ಪರೀಕದ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ - ಸೌಖ್ಯವನ ಇದರ ಸಹಯೋಗದೊಂದಿಗೆ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ‘ಯೋಗೇಶ್ವರ ಕೃಷ್ಣನೆಡೆಗೆ ಯೋಗ ನಡಿಗೆ’ ಕಾರ್ಯಕ್ರಮದ ಸಮಾರೋಪದಲ್ಲಿ ಆಶೀರ್ವಚನ ನೀಡಿದರು.
ವಿಶ್ವ ಯೋಗ ದಿನಾಚರಣೆ ಭಾರತೀಯ ಸಂಸ್ಕೃತಿಗೆ ಮುಕುಟಪ್ರಾಯವಾಗಿದೆ. ಯೋಗಕ್ಕೆ ಈಶ್ವರನೇ ಕೃಷ್ಣ, ಕೃಷ್ಣ ಬೋಧಿಸಿದ ಭಗವದ್ಗೀತೆಯ ಕೊನೆಯ ಸಂದೇಶ, ಯಾರೂ ಯೋಗವನ್ನು ಅನುಸರಿಸುತ್ತಾರೋ ಅವರಿಗೆ ವಿಜಯ, ಸಂಪತ್ತು ಪ್ರಾಪ್ತಿಯಾಗುತ್ತದೆ. ಆದ್ದರಿಂದ ಕೃಷ್ಣನ ಮೂಲ ಸಂದೇಶವೇ ಯೋಗವಾಗಿದೆ ಎಂದರು.ಆದರೆ ಯೋಗ ಎಂದರೆ ಕೇವಲ ಆಸನ, ಪ್ರಾಣಾಯಾಮವಲ್ಲ, ಜೀವನದ ಎಲ್ಲಾ ಕ್ರಿಯೆಗಳನ್ನು ಪರಿಪೂರ್ಣ ಮನಸ್ಸಿನಿಂದ ನಡೆಸಿದರೆ ಅದೂ ಯೋಗವೇ ಆಗಿರುತ್ತದೆ. ಅದನ್ನೇ ಮನೋಯೋಗ ಎನ್ನುತ್ತಾರೆ, ಅಂದರೆ ಮನಸ್ಸನ್ನು ನಿಯಂತ್ರಿಸುವುದು ಎಂದರ್ಥ ಎಂದವರು ವಿವರಿಸಿದರು.
ಇನ್ನೊಬ್ಬ ಮುಖ್ಯ ಅತಿಥಿ ಆದರ್ಶ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಜಿ.ಎಸ್.ಚಂದ್ರಶೇಖರ್ ಮಾತನಾಡಿದರು. ಧರ್ಮಸ್ಥಳ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಎಸ್.ಸೀತಾರಾಮ ತೋಳ್ಪಡಿತ್ತಾಯ, ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ ಪೂಜಾರಿ ಉಪಸ್ಥಿತರಿದ್ದರು.