ಕನ್ನಡಪ್ರಭ ವಾರ್ತೆ ಭಾರತೀನಗರ
ಭಾರತೀ ಕಾಲೇಜಿನ ಆವರಣದಲ್ಲಿ ಭಾರತೀ ಎಜುಕೇಷನ್ ಟ್ರಸ್ಟ್, ರಾಜ್ಯ ಧ್ವನಿ ಮಹಿಳಾ ಮತ್ತು ಮಕ್ಕಳ ಸಂಸ್ಥೆ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಮಂಡ್ಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಆಶ್ರಯದಲ್ಲಿ ನಡೆದ ವಿಶ್ವ ಸಾಮಾಜಿಕ ನ್ಯಾಯ ಮತ್ತು ಭ್ರೂಣ ಹತ್ಯೆ ತಡೆಗಟ್ಟುವುದು, ಹೆಣ್ಣು ಮಕ್ಕಳ ಆಸ್ತಿ ಹಕ್ಕುಗಳ ಬಗ್ಗೆ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ನಮ್ಮನ್ನು ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಿದೆ. ದೇಶದಲ್ಲಿ ನಿರುದ್ಯೋಗ ಸಮಸ್ಯೆ, ಜನಸಾಮಾನ್ಯರಲ್ಲಿ ಹಸಿವು ಕಾಡುತ್ತಿದೆ. ನಾಗರೀಕ ಸಮಾಜವನ್ನು ಕಟ್ಟುವಂತಹ ಕೆಲಸ ನಮ್ಮ ಹೊಣೆಗಾರಿಕೆಯಾಗಿದೆ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಎದುರಾಗಲಿದೆ. ಸಮಾಜದ ಬಗ್ಗೆ ಚಿಂತನೆ ಮಾಡುವ ಮತ್ತು ಜಾತಿ, ಲಂಚಮುಕ್ತ, ಅಪರಾಧ ತಡೆಯುವಂತಹ ಗುಣಗಳಿದೆಯೋ ಅಂತಹವರಿಗೆ ಮತಹಾಕಿ ಎಂದು ಸಲಹೆ ನೀಡಿದರು.ಭ್ರೂಣಹತ್ಯೆ ತಡೆಗಟ್ಟಿ:
ಹೆಣ್ಣು ಸಮಾಜದ ಭಾಗವಾದಾಗ ಮಾತ್ರ ಸಮಾಜದಲ್ಲಿ ಸಮಾನತೆ ನೆಲೆಸುತ್ತದೆ. ಜಾತಿ, ಅಪರಾಧ, ಭ್ರಷ್ಟಚಾರ ಇವು ಸಮಾಜದಲ್ಲಿ ಕ್ಯಾನ್ಸರ್ ಖಾಯಿಲೆ ಇದ್ದಂತೆ. ಹೆಣ್ಣಿನ ಮೇಲೆ ಮೋಹವಿದ್ದಾಗ ಮಾತ್ರ ಅಪರಾಧವಾಗುತ್ತಿದೆ. ಹಣದ ಹಿಂದೆ ಓಡಿದಾಗ ಮಾತ್ರ ಭ್ರಷ್ಟಚಾರ ಶುರುವಾಗುತ್ತದೆ. ಇವೆಲ್ಲವನ್ನು ಮೆಟ್ಟಿ ನಿಲ್ಲುವಂತಹ ಕೆಲಸವನ್ನು ಸಾರ್ವಜನಿಕರು ಮಾಡಬೇಕು ಎಂದು ಹೇಳಿದರು.
ವಿದ್ಯಾರ್ಥಿ ದಿಶೆಯಲ್ಲೇ ಕಾನೂನು ಅರಿವುಗಳ ಬಗ್ಗೆ ತಿಳಿದುಕೊಳ್ಳಬೇಕು. ಇದರಿಂದ ಕಾನೂನಿನ ಚೌಕಟ್ಟಿನಲ್ಲಿ ಮುಂದಿನ ಪ್ರಜೆಗಳು ನಡೆಯಲು ಸಾಧ್ಯ. ಇಂತಹ ಕಾರ್ಯಕ್ರಮಗಳು ನಿರಂತರವಾಗಿ ನಡೆದರೆ ಮಕ್ಕಳಲ್ಲಿ ಕಾನೂನು ಅರಿವಿನ ಬಗ್ಗೆ ಜಾಗೃತಿ ಮೂಡುತ್ತದೆ ಎಂದರು.