ಅಂಬೇಡ್ಕರ್ ಪ್ರತಿಮೆ ಅನಾವರಣ ವಿಳಂಬ ಖಂಡಿಸಿ ಅರೆಬೆತ್ತಲೆ ಚಳವಳಿ

KannadaprabhaNewsNetwork |  
Published : Aug 27, 2026, 02:00 AM IST
26ಎಚ್ಎಸ್ಎನ್7 :  | Kannada Prabha

ಸಾರಾಂಶ

ಸಂವಿಧಾನ ಶಿಲ್ಪಿ ಡಾ.ಬಿ. ಆರ್‌. ಅಂಬೇಡ್ಕರ್‌ ಅವರ ಪ್ರತಿಮೆ ಸ್ಥಾಪಿಸಿ ೧೦ ತಿಂಗಳು ಕಳೆದರೂ ಇದುವರೆಗೆ ಲೋಕಾರ್ಪಣೆ ಮಾಡಿಲ್ಲ. ಪ್ರತಿಮೆ ಲೋಕಾರ್ಪಣೆ ಮಾಡಲು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಮೆ ಎದುರಿನಲ್ಲಿಯೇ ಎರಡು ತಿಂಗಳ ಹಿಂದೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರೂ, ಮನವಿಗೆ ಸ್ಪಂದಿಸದೆ ಕಾಲಹರಣ ಮಾಡಿ ಪ್ರತಿಮೆಯ ಅನಾವರಣ ಮುಂದೂಡುತ್ತಿದ್ದಾರೆ. ಇದರ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿ ಎರಡು ತಿಂಗಳು ಕಳೆದರೂ ಇನ್ನೂ ಅನಾವರಣ ಮಾಡಲು ಹಿಂದೇಟು ಹಾಕು ತಿರುವ ತಾಲ್ಲೂಕು ಆಡಳಿತದ ಕಾರ್ಯ ವೈಖರಿ ಖಂಡಿಸಿ ಇಂದು ಅರೆಬೆತ್ತಲೆ ಚಳವಳಿ ಮಾಡು ತ್ತಿದ್ದೇವೆ ಎಂದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ. ಆರ್‌. ಅಂಬೇಡ್ಕರ್‌ ಪ್ರತಿಮೆ ಅನಾವರಣ ಮಾಡಲು ವಿಳಂಬ ಮಾಡುತ್ತಿರುವ ತಾಲೂಕು ಆಡಳಿತದ ಕಾರ್ಯ ವೈಖರಿ ಖಂಡಿಸಿ ಬಿಜೆಪಿಯ ಕಲೆ ಮತ್ತು ಸಾಹಿತ್ಯ ಪ್ರಾಕೋಷ್ಟದ ಜಿಲ್ಲಾ ಸಂಚಾಲಕ ನಂಜುಂಡಮೈಮ್ ಮತ್ತು ತಾಲೂಕು ಬಿಜೆಪಿ ಮುಖಂಡರು ಅರೆ ಬೆತ್ತಲೆ ಚಳವಳಿ ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾನಿರತರು, ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ. ಆರ್‌. ಅಂಬೇಡ್ಕರ್‌ ಅವರ ಪ್ರತಿಮೆ ಸ್ಥಾಪಿಸಿ ೧೦ ತಿಂಗಳು ಕಳೆದರೂ ಇದುವರೆಗೆ ಲೋಕಾರ್ಪಣೆ ಮಾಡಿಲ್ಲ. ಪ್ರತಿಮೆ ಲೋಕಾರ್ಪಣೆ ಮಾಡಲು ಕ್ರಮ ತೆಗೆದುಕೊಳ್ಳಬೇಕೆಂದು ಪ್ರತಿಮೆ ಎದುರಿನಲ್ಲಿಯೇ ಎರಡು ತಿಂಗಳ ಹಿಂದೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರೂ, ಮನವಿಗೆ ಸ್ಪಂದಿಸದೆ ಕಾಲಹರಣ ಮಾಡಿ ಪ್ರತಿಮೆಯ ಅನಾವರಣ ಮುಂದೂಡುತ್ತಿದ್ದಾರೆ. ಇದರ ವಿರುದ್ಧ ಉಗ್ರ ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿ ಎರಡು ತಿಂಗಳು ಕಳೆದರೂ ಇನ್ನೂ ಅನಾವರಣ ಮಾಡಲು ಹಿಂದೇಟು ಹಾಕು ತಿರುವ ತಾಲ್ಲೂಕು ಆಡಳಿತದ ಕಾರ್ಯ ವೈಖರಿ ಖಂಡಿಸಿ ಇಂದು ಅರೆಬೆತ್ತಲೆ ಚಳವಳಿ ಮಾಡು ತ್ತಿದ್ದೇವೆ ಎಂದರು.

ನಮ್ಮ ಮನವಿಯನ್ನು ಹಾಸನ ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಸಲ್ಲಿಸಿ ದ್ದೇವೆ. ಸೆ.೨೦ರ ಒಳಗೆ ಪ್ರತಿಮೆ ಅನಾ ವರಣ ಮಾಡದಿದ್ದರೆ ತಾಲೂಕು ಕಚೇರಿಯ ಲಬೋ " ಚಳವಳಿ ಮುಂಭಾಗ "ಲಬೋ ಯನ್ನು ಹಮ್ಮಿಕೊಳ್ಳ ಲಾಗುವುದು ಎಂದು ಎಚ್ಚರಿಸಿದರು. ಸೆ.೨೦ರ ನಂತರವೂ ಪ್ರತಿಮೆ ಲೋಕಾರ್ಪಣೆಗೆ ಕ್ರಮ ಕೈಗೊಳ್ಳದಿದ್ದರೆ ರಾಜಕೀಯ ನಾಯಕರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರೊಂದಿಗೆ ಅದ್ದೂರಿ ಕಾರ್ಯಕ್ರಮದೊಂದಿಗೆ ಪ್ರತಿಮೆ ಅನಾವರಣ ಮಾಡಲಾಗುವುದು ಎಂದರು.

ತಾಲೂಕು ಕಚೇರಿ ಆವರಣದಲ್ಲಿರುವ ಅಂಬೇಡ್ಕರ್‌ ಪ್ರತಿಮೆ ಮುಂಭಾಗ ಅರೆಬೆತ್ತಲೆ ಚಳವಳಿ ನಡೆಸಿ, ತದನಂತರ ತಾಲೂಕು ಕಚೇರಿ ಮುಂಭಾಗ ಮೆರವಣಿಗೆ ನಡೆಸಿ, ತಹಸೀಲ್ದಾರ್ ಜಿ.ಎಸ್. ಶಂಕರಪ್ಪ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ತಹಸೀಲ್ದಾರ್‌, ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತಂದು ಶೀಘ್ರವೇ ಪ್ರತಿಮೆ ಲೋಕಾ ರ್ಪಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಅರೆಬೆತ್ತಲೆ ಚಳವಳಿಯಲ್ಲಿ ಶ್ರವಣಬೆಳಗೊಳ ಮಂಡಲದ ಅಧ್ಯಕ್ಷ ಪರಮ ಗಂಗಾಧರ್‌, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್, ಗನ್ನಿ ವಿಶ್ವನಾಥ್, ಮಾಜಿ ಅಧ್ಯಕ್ಷ ರಂಗೇಗೌಡ, ಉಪಾಧ್ಯಕ್ಷ ಅಶೋಕ್ ಶೆಟ್ಟಿಹಳ್ಳಿ, ಮುಖಂಡ ಸತೀಶ್ ಗೌಡಗೆರೆ ಇನ್ನಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮದ್ದೂರು ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಸಾರ್ವಜನಿಕ ಚರ್ಚೆಗೆ ಸಿದ್ಧ
ಸಹಕಾರ ಸಂಘಕ್ಕೆ ಸದಸ್ಯರ ಬೆಂಬಲ ಅಗತ್ಯ: ಸಚಿವ ಚಲುವರಾಯಸ್ವಾಮಿ