ಹಿರಿಯ ನಾಗರಿಕರು ಸೌಲಭ್ಯ ಬಳಸಿಕೊಳ್ಳಬೇಕು

KannadaprabhaNewsNetwork |  
Published : Oct 02, 2024, 01:08 AM IST
೦೧ಕೆಎಲ್‌ಆರ್-೧೨ಕೋಲಾರದ ಪತ್ರಕರ್ತರ ಭವನದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕಾರ್ಯಕ್ರಮ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ ಎಸ್.ಹೊಸಮನಿ ಹಿರಿಯ ನಾಗರೀಕರನ್ನು ಸನ್ಮಾನಿಸಿದರು. | Kannada Prabha

ಸಾರಾಂಶ

ವಿಭಕ್ತ ಕುಟುಂಬಗಳಲ್ಲಿ ತಂದೆ-ತಾಯಿಯರನ್ನು ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದರಿಂದ ಸರ್ಕಾರಿ ಹಾಗೂ ಸರ್ಕಾರೇತರ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ಹಿರಿಯರ ಆಸ್ತಿ-ಪಾಸ್ತಿ ಮಕ್ಕಳು ಪಡೆದುಕೊಂಡು ಅವರ ಯೋಗಕ್ಷೇಮ ನೋಡದಿದ್ದರೆ ಅವರಿಗೆ ಆಸ್ತಿ ಮತ್ತೆ ಕೊಡಿಸುವ ಅಧಿಕಾರ ಆಯಾ ಜಿಲ್ಲಾ ಉಪವಿಭಾಗಾಧಿಕಾರಿಗೆ ಇದೆ.

ಕನ್ನಡಪ್ರಭ ವಾರ್ತೆ ಕೋಲಾರಹಿರಿಯರು ಕುಟುಂಬದಲ್ಲಿ ಯಾರಿಗೂ ಹೊರೆಯಾಗದಂತೆ ಜೀವನ ನಡೆಸಲು ಅನುಕೂಲವಾಗುವಂತೆ ಸರ್ಕಾರವು ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ನೆಮ್ಮದಿಯ ಜೀವನ ನಡೆಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನಿಲ ಎಸ್.ಹೊಸಮನಿ ಹೇಳಿದರು. ನಗರದ ಪತ್ರಕರ್ತರ ಭವನದಲ್ಲಿ ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ೨೦೦೭ರಲ್ಲಿ ಹಿರಿಯ ನಾಗರೀಕರ ಸುರಕ್ಷತೆಗಾಗಿ ಕಾಯ್ದೆ ಜಾರಿಗೊಳಿಸಿದ್ದು, ಹಿರಿಯರು ಈ ಕಾಯ್ದೆಯ ಪ್ರಯೋಜನ ಪಡೆಯಬೇಕು, ಆಸರೆಯಿಲ್ಲದವರಿಗೆ ಊಟ ಬಟ್ಟೆ ಹಾಗೂ ಜೀವನಾಂಶ ಒದಗಿಸಲು ಸಹಾಯವಾಗುತ್ತಿದೆ ಎಂದರು. ತಂದೆ, ತಾಯಿಯನ್ನು ಪೋಷಿಸಿ

ವಿಭಕ್ತ ಕುಟುಂಬಗಳಲ್ಲಿ ತಂದೆ-ತಾಯಿಯರನ್ನು ನೋಡಿಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದರಿಂದ ಸರ್ಕಾರಿ ಹಾಗೂ ಸರ್ಕಾರೇತರ ವೃದ್ಧಾಶ್ರಮಗಳು ಹೆಚ್ಚಾಗುತ್ತಿವೆ. ವೃದ್ಧರನ್ನು ತುಂಬಾ ಜೋಪಾನವಾಗಿ ನೋಡಿಕೊಳ್ಳಬೇಕು, ಹಿರಿಯ ಹಿರಿಯರ ಆಸ್ತಿ-ಪಾಸ್ತಿ ಮಕ್ಕಳು ಪಡೆದುಕೊಂಡು ಅವರ ಯೋಗಕ್ಷೇಮ ನೋಡದೆ ಇರುವವರ ವಿರುದ್ಧ, ಅವರಿಗೆ ಆಸ್ತಿಪಾಸ್ತಿಗಳನ್ನು ಮತ್ತೆ ಕೊಡಿಸುವ ಅಧಿಕಾರ ಆಯಾ ಜಿಲ್ಲಾ ಉಪವಿಭಾಗಾಧಿಕಾರಿಗೆ ನೀಡಿದೆ ಎಂದು ಹೇಳಿದರು.ಹಳೇ ಬೇರು, ಹೊಸ ಚಿಗುರು ಕೂಡಿರಲು ಮರ ಸೊಗಸು ಎನ್ನುವ ಹಾಗೆ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನು ಸನ್ಮಾರ್ಗದಲ್ಲಿ ನಡೆಸಲು ಹಿರಿಯರ ಮಾರ್ಗದರ್ಶನ ಅತ್ಯವಶ್ಯಕ, ಅವರ ನೆರಳಿನಲ್ಲಿ ನಾವು ಉತ್ತಮ ಜೀವನ ಕಟ್ಟಿಕೊಳ್ಳಲು ಸಾಧ್ಯ, ಹಿರಿಯ ನಾಗರೀಕರ ಸಹಾಯಕ್ಕಾಗಿ ಕೇಂದ್ರ ಸರ್ಕಾರದಿಂದ ೧೪೫೬೭, ರಾಜ್ಯ ಸರ್ಕಾರದಿಂದ ೧೦೯೦ ಸಹಾಯವಾಣಿಯನ್ನು ನೀಡಿದ್ದು, ಇದರಿಂದ ತಮ್ಮ ವೃದ್ಧಾಪ್ಯ ಸಮಸ್ಯೆಗಳಿಗೆ ಪರಿಹಾರ ಪಡೆಯಬಹುದಾಗಿದೆ ಎಂದು ತಿಳಿಸಿದರು.ಸಹಾಯವಾಣಿ ಸಂಖ್ಯೆ ಪ್ರದರ್ಶಿಸಿ

ಇತ್ತೀಚಿಗೆ ಕಾನೂನು ಸೇವೆಗಳ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆ ಪಡೆಯಲು ಸಹಾಯವಾಣಿ ತೆರೆಯಲಾಗಿದೆ. ಬಸ್-ರೈಲ್ವೆ ನಿಲ್ದಾಣಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಈ ಉಚಿತ ಸಹಾಯವಾಣಿ ಸಂಖ್ಯೆ ಪ್ರದರ್ಶಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದರು. ರಸ್ತೆ ಬದಿಗಳಲ್ಲಿ, ದೇವಸ್ಥಾನಗಳ ಬಳಿ ನಿರಾಶ್ರಿತ ಹಿರಿಯ ನಾಗರೀಕರು ಕಂಡು ಬಂದರೆ ಕೂಡಲೇ ಕರೆ ಮಾಡಿ ಮಾಹಿತಿ ತಿಳಿಸುವುದು ಸಾಮಾಜಿಕ ಜವಾಬ್ದಾರಿ ಎಂದರು.ಶತಾಯುಷಿಗಳಿಗೆ ಸನ್ಮಾನ

ಶತಾಯುಷಿಗಳಾದ ಗದ್ದೆಕಣ್ಣೂರು ಸಂಗಪ್ಪ, ತಲಗುಂದ ಚೌಡಪ್ಪ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹಿರಿಯರನ್ನು ಸನ್ಮಾನಿಸಲಾಯಿತು. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ ಹಿರಿಯರಿಗೆ ಪ್ರಶಸ್ತಿ ವಿತರಿಸಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಇಲಾಖಾಧಿಕಾರಿ ರಮ್ಯ.ಎಂ ಇದ್ದರು.

PREV

Recommended Stories

ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಕಮ್ಮಿ ಫಲಿತಾಂಶ ಬಂದರೆ ಶಿಕ್ಷಕರ ವೇತನ ಕಟ್ ಇಲ್ಲ