ಹಿರಿಯ ನಾಗರಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ. ರವಿಕುಮಾರ್

KannadaprabhaNewsNetwork |  
Published : Mar 02, 2026, 02:15 AM IST
ಸಿಕೆಬಿ-6  ನಗರದ ಸರ್ಕಾರಿ ನೌಕರರ ಭವನದಲ್ಲಿ   ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ವತಿಯಿಂದ ಆಯೋಜಿಸಿದ್ದ “ಮಾಹೆಗೊಮ್ಮೆ ಉಚಿತ ಆರೋಗ್ಯ ಸಲಹೆ” ಕಾರ್ಯಕ್ರಮದಲ್ಲಿ ಡಾ.ರವಿಕುಮಾರ್ ರನ್ನು ಸಂಘದ ಪದಾಧಿಕಾರಿಗಳು ಸನ್ಮಾನಿಸಿದರು | Kannada Prabha

ಸಾರಾಂಶ

ಕಳೆದ 5 ವರ್ಷಗಳಿಂದ ಸರ್ಕಾರಿ ಕೆಲಸದಿಂದ ವಯೋ ನಿವೃತ್ತಿಯಾದ ನಮ್ಮ ಸಂಘದ ಸದಸ್ಯರಿಗಾಗಿ ಸಾಕಷ್ಟು ಆರೋಗ್ಯ ಸಲಹಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ

ಚಿಕ್ಕಬಳ್ಳಾಪುರ: ಇಳಿ ವಯಸ್ಸಿನಲ್ಲಿ ನಿಯಮಿತವಾಗಿ ಆಹಾರ ಸೇವನೆ ಮಾಡುತ್ತಾ ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸುವುದು ಅತ್ಯಗತ್ಯ ಎಂದು ಮಕ್ಕಳ ತಜ್ಞ, ವೈದ್ಯಾಧಿಕಾರಿ ಡಾ. ರವಿಕುಮಾರ್ ಸಲಹೆ ನೀಡಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘದ ವತಿಯಿಂದ ಶನಿವಾರ ಆಯೋಜಿಸಿದ್ದ ಮಾಹೆಗೊಮ್ಮೆ ಉಚಿತ ಆರೋಗ್ಯ ಸಲಹೆ ಕಾರ್ಯಕ್ರಮದಲ್ಲಿ ಮಾತನಾಡಿ, ವ್ಯಾಯಾಮ, ವೈದ್ಯಕೀಯ ತಪಾಸಣೆ, ಸಾಕಷ್ಟು ನಿದ್ರೆ ಮತ್ತು ಮಾನಸಿಕ ನೆಮ್ಮದಿ ಇವುಗಳು ನೆಮ್ಮದಿಯ ಬದುಕಿಗೆ ಬಹು ಮುಖ್ಯ, ಸಾಂಪ್ರದಾಯಿಕ ಆಹಾರ ಯೋಗ ಮತ್ತು ಸಮಾಜದೊಂದಿಗೆ ಬೆರೆಯುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ ಎಂದರು.

ಸರ್ಕಾರಿ ನಿವೃತ್ತ ನೌಕರ ಸಂಘದ ಜಿಲ್ಲಾಧ್ಯಕ್ಷ ಡಾ.ಬಿ.ವಿ. ಕೃಷ್ಣ ಮಾತನಾಡಿ, ಕಳೆದ 5 ವರ್ಷಗಳಿಂದ ಸರ್ಕಾರಿ ಕೆಲಸದಿಂದ ವಯೋ ನಿವೃತ್ತಿಯಾದ ನಮ್ಮ ಸಂಘದ ಸದಸ್ಯರಿಗಾಗಿ ಸಾಕಷ್ಟು ಆರೋಗ್ಯ ಸಲಹಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ ಎಂದರು.

ಕಾರ್ಯದರ್ಶಿ ತಿರುಮಲಪ್ಪ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ. ರವಿಕುಮಾರ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಶ್ರೀನಿವಾಸ ರೆಡ್ಡಿ, ದಸ್ತಗೀರ್, ಜಯರಾಮರೆಡ್ಡಿ, ಹೈದರಾಲಿಖಾನ್, ನಾರಾಯಣಸ್ವಾಮಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಶ್ಚಿಮ ಘಟ್ಟ ಅವಲಂಬಿತ ಸಮುದಾಯಗಳ ಬಲವರ್ಧನೆಗೆ ಯೋಜನೆ: ನಾಗೇಶ
ಖಾಸಗಿ ಶಾಲಾ ಮಾನ್ಯತೆ ಮಾನದಂಡ ಇನ್ನಷ್ಟು ಸರಳ!