ಹಿರಿಯ ನಾಗರಿಕರು ಆರೋಗ್ಯ ಕಾಳಜಿ ವಹಿಸಿ

KannadaprabhaNewsNetwork |  
Published : Jan 14, 2026, 03:45 AM IST
ಫೋಟೋ:13 ಎಚ್,ಎನ್,ಎಮ್ 02 :  ಹನುಮಸಾಗರದ ಶ್ರೀ ಕರಿಸಿದ್ದೇಶ್ವರ ಮಠದ ಬಸವ ಮಂಟಪದಲ್ಲಿ ಮಂಗಳವಾರ ನಡೆದ ಉಚಿತ ಹಿರಿಯ ನಾಗರಿಕರ ಆರೋಗ್ಯ ತಪಾಸಣೆ ಶಿಬಿರವನ್ನು ಪ್ರಮುಖರು ಉದ್ಘಾಟಿಸಿದರು.ಫೋಟೋ:13 ಎಚ್,ಎನ್,ಎಮ್ 02 ಬಿ :  ಹನುಮಸಾಗರದ ಶ್ರೀ ಕರಿಸಿದ್ದೇಶ್ವರ ಮಠದ ಬಸವ ಮಂಟಪದಲ್ಲಿ ಮಂಗಳವಾರ ನಡೆದ ಹಿರಿಯ ನಾಗರಿಕರಿಗೆ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಹಾಗೂ ಕಲಿಕೆ–ಟಾಟಾ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು.  | Kannada Prabha

ಸಾರಾಂಶ

ಇತ್ತೀಚಿನ ದಿನಗಳಲ್ಲಿ ಅಸಂಕ್ರಾಮಿಕ ರೋಗಗಳು ಹೆಚ್ಚಾಗಿ ಜನರನ್ನು ಕಾಡುತ್ತಿದ್ದು, ವಿಶೇಷವಾಗಿ ವೃದ್ಧಾಪ್ಯದಲ್ಲಿ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿತ ಕಾಯಿಲೆಗಳು ಹೆಚ್ಚಾಗಿ ಕಾಣಿಸುತ್ತಿವೆ

ಹನುಮಸಾಗರ: ವಯಸ್ಸು ಹೆಚ್ಚಾಗುತ್ತಿದ್ದಂತೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅತ್ಯವಶ್ಯಕ. ಹಿರಿಯ ನಾಗರಿಕರು ಆರೋಗ್ಯವಂತ ಜೀವನ ಶೈಲಿ ಅಳವಡಿಸಿಕೊಳ್ಳಬೇಕು ಎಂದು ತಾಲೂಕು ಆಯುಷ್ಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ಹೇಳಿದರು.

ಗ್ರಾಮದ ಶ್ರೀಕರಿಸಿದ್ದೇಶ್ವರ ಮಠದ ಬಸವ ಮಂಟಪದಲ್ಲಿ ಗ್ರಾಪಂ, ಆರೋಗ್ಯ ಇಲಾಖೆ ಹಾಗೂ ಕಲಿಕೆ–ಟಾಟಾ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ವಿತರಣೆ ಶಿಬಿರದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಅಸಂಕ್ರಾಮಿಕ ರೋಗಗಳು ಹೆಚ್ಚಾಗಿ ಜನರನ್ನು ಕಾಡುತ್ತಿದ್ದು, ವಿಶೇಷವಾಗಿ ವೃದ್ಧಾಪ್ಯದಲ್ಲಿ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿತ ಕಾಯಿಲೆಗಳು ಹೆಚ್ಚಾಗಿ ಕಾಣಿಸುತ್ತಿವೆ. ಆದ್ದರಿಂದ ಹಿರಿಯ ನಾಗರಿಕರು ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.ಆರೋಗ್ಯವಂತ ಜೀವನಕ್ಕಾಗಿ ಪ್ರತಿನಿತ್ಯ ಯೋಗಾಸನ, ವ್ಯಾಯಾಮ, ಪ್ರಾಣಾಯಾಮ ರೂಢಿಸಿಕೊಳ್ಳಬೇಕು. ಆಹಾರ ಪದ್ಧತಿಯಲ್ಲಿ ಕೂಡ ಜಾಗೃತಿ ಅಗತ್ಯವಾಗಿದ್ದು, ಸಕ್ಕರೆ, ಮೈದಾ, ಬಿಳಿ ಉಪ್ಪು,ಪಾಲಿಷ್ ಮಾಡಿದ ಅಕ್ಕಿ ಹಾಗೂ ಕಾಯಿಸದೇ ಹಾಲು ಸೇವನೆ ಕಡಿಮೆ ಮಾಡಬೇಕು. ಕೊಬ್ಬಿನಾಂಶ ಇರುವ ಆಹಾರ ಸೇವನೆಯಿಂದ ರಕ್ತನಾಳಗಳಲ್ಲಿ ಬ್ಲಾಕ್ ಉಂಟಾಗಿ ಗಂಭೀರ ಕಾಯಿಲೆಗಳು ಬರಬಹುದೆಂದು ಎಚ್ಚರಿಸಿದರು.

ಗ್ರಾಪಂ ಪಿಡಿಓ ನಿಂಗಪ್ಪ ಮೂಲಿಮನಿ ಉದ್ಘಾಟಿಸಿ ಮಾತನಾಡಿ, ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಸರ್ಕಾರದ ವಿವಿಧ ಯೋಜನೆ ಲಭ್ಯವಿದ್ದು, ಅವುಗಳ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ವೈದ್ಯರಾದ ಡಾ. ದೀಪಿಕಾ ಸೇರಿದಂತೆ ಆರೋಗ್ಯ ಇಲಾಖೆಯ ವಿವಿಧ ವಿಭಾಗಗಳ ಅಧಿಕಾರಿಗಳಾದ ಸುಧಾಕರ, ಚನ್ನಬಸಪ್ಪ ಹನುಮನಾಳ, ಎ.ಎಸ್. ಅಂತರಂಗಿ, ಬೀರಪ್ಪ ವಡಗಲಿ, ಸಿದ್ಧಲಿಂಗರಡ್ಡಿ, ಗ್ರಂಥಪಾಲಕಿ ದುರಗಮ್ಮ ಹಿರೇಮನಿ, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಮ್‌ ಜಿ ಕುರಿತು ಇಂದು ರಾಜ್ಯ ವಿಶೇಷ ಸಂಪುಟ ಸಭೆ
ಫೆ.13ಕ್ಕೆ ಕಾಂಗ್ರೆಸ್‌ ಸರ್ಕಾರಕ್ಕೆ 1000 ದಿನ