ರಾಜ್ಯದಲ್ಲಿ ಪ್ರತ್ಯೇಕ ಮಕ್ಕಳ ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಲಿ: ಡಾ. ಮಲ್ಲಿಕಾ ಘಂಟಿ

KannadaprabhaNewsNetwork |  
Published : Apr 27, 2026, 02:00 AM IST
25ಡಿಡಬ್ಲೂಡಿ25ಕಾರ್ಯಕ್ರಮದಲ್ಲಿ ಜಂಬುನಾಥ ಕಲ್ಯಾಣಿ, ಗುಂಡುರಾವ್ ದೇಸಾಯಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. | Kannada Prabha

ಸಾರಾಂಶ

ಮಕ್ಕಳ ಮಾನಸಿಕ ವಿಕಾಸಕ್ಕೆ ಪೂರಕ ಸಾಹಿತ್ಯವನ್ನು ಪ್ರೋತ್ಸಾಹಿಸಲು ಮತ್ತು ಈ ಕ್ಷೇತ್ರದ ಸಾಹಿತಿಗಳಿಗೆ ಸೂಕ್ತ ವೇದಿಕೆ ಕಲ್ಪಿಸಲು ಸರ್ಕಾರ ಕೂಡಲೇ ಪ್ರತ್ಯೇಕ ಮಕ್ಕಳ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು ಎಂದು ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಒತ್ತಾಯಿಸಿದರು.

ಧಾರವಾಡ: ಮಕ್ಕಳ ಮಾನಸಿಕ ವಿಕಾಸಕ್ಕೆ ಪೂರಕ ಸಾಹಿತ್ಯವನ್ನು ಪ್ರೋತ್ಸಾಹಿಸಲು ಮತ್ತು ಈ ಕ್ಷೇತ್ರದ ಸಾಹಿತಿಗಳಿಗೆ ಸೂಕ್ತ ವೇದಿಕೆ ಕಲ್ಪಿಸಲು ಸರ್ಕಾರ ಕೂಡಲೇ ಪ್ರತ್ಯೇಕ ಮಕ್ಕಳ ಸಾಹಿತ್ಯ ಅಕಾಡೆಮಿ ಸ್ಥಾಪಿಸಬೇಕು ಎಂದು ಹಂಪಿ ಕನ್ನಡ ವಿವಿಯ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ಒತ್ತಾಯಿಸಿದರು.

ಶನಿವಾರ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಕಲಾ ಶಿಕ್ಷಣ-ಸಂಸ್ಕೃತಿ ಪ್ರತಿಷ್ಠಾನ ಮುಂಡರಗಿ, ಚಿಲಿಪಿಲಿ ಸಂಸ್ಥೆ ಸಹಯೋಗದಲ್ಲಿ ಆದರ್ಶ ಶಿಕ್ಷಕಿ ಕಲಾ ನಿಂಗು ಸೊಲಗಿ ಸ್ಮರಣೆಯಲ್ಲಿ ಕೊಡುವ 2025ರ ಮಕ್ಕಳ ಸಾಹಿತ್ಯ ಗೌರವ ಪ್ರಶಸ್ತಿ ಹಾಗೂ ಮಕ್ಕಳ ಸಾಹಿತ್ಯ ಪುಸ್ತಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ಮಕ್ಕಳ ಉತ್ಕೃಷ್ಟ ಸಾಹಿತ್ಯ ಪ್ರಕಟವಾಗುತ್ತಿದ್ದರೂ ವಿಮರ್ಶಕರಿಂದ ತಾತ್ಸಾರಕ್ಕೆ ಒಳಗಾಗಿದೆ, ಸರ್ಕಾರಿ ಮಟ್ಟದಲ್ಲಿಯೂ ಅದಕ್ಕೆ ಸಿಗಬೇಕಾದ ಮನ್ನಣೆ ದೊರೆಯುತ್ತಿಲ್ಲ. 2010ರಲ್ಲಿಯೇ ಈ ಕುರಿತು ನಾನು ಲಿಖಿತವಾಗಿ ಮಕ್ಕಳ ಸಾಹಿತ್ಯ ಅಕಾಡೆಮಿ ಸ್ಥಾಪಿಸುವುದಕ್ಕಾಗಿ ಮನವಿ ಮಾಡಿದ್ದೆ. ಸರ್ಕಾರ ಇಂದಿನ ವರೆಗೂ ಕ್ರಮ ಕೈಗೊಂಡಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ, ವಿಶೇಷವಾಗಿ ವಿಜಯಪುರ ಜಿಲ್ಲೆಯಲ್ಲಿ ಮಕ್ಕಳ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಸಾಹಿತಿಗಳಿದ್ದಾರೆ.

ಈ ಹಿನ್ನೆಲೆಯಲ್ಲಿ ವಿಜಯಪುರದಲ್ಲೇ ಮಕ್ಕಳ ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟ ಅವರು, ಇಂದಿನ ತಾಂತ್ರಿಕ ಯುಗದಲ್ಲಿ ಭೌತಿಕ ವಸ್ತುಗಳ ವ್ಯಾಮೋಹದಿಂದ ಮನಸ್ಸು ಮನಸ್ಸು ದೂರವಾಗುತ್ತಿವೆ. ಮಕ್ಕಳನ್ನು ಭಾವನಾತ್ಮಕವಾಗಿ ಮತ್ತು ಸೃಜನಶೀಲವಾಗಿ ಬೆಳೆಸುವ ನಿಟ್ಟಿನಲ್ಲಿ ಸಾಹಿತ್ಯದ ಪಾತ್ರ ದೊಡ್ಡದಿದೆ. ಕರ್ನಾಟಕದ ಎಲ್ಲ ಗ್ರಾಪಂ ಮಟ್ಟದ ಗ್ರಂಥಾಲಯಗಳಲ್ಲಿ ಶಾಲೆಗಳಿಗೆ ಮಕ್ಕಳ ಸಾಹಿತ್ಯದ ಪುಸ್ತಕಗಳು ಲಭ್ಯವಾಗಬೇಕು.

ಮಕ್ಕಳ ಮಾನಸಿಕ ವಿಕಾಸದ ಸಾಹಿತ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಸರ್ಕಾರ ಮತ್ತು ಸಂಘ, ಸಂಸ್ಥೆಗಳು ಜಂಟಿಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.

ಸಮಾಜಮುಖಿ ಕಾರ್ಯಕರ್ತ ಆನಂದಗೌಡ ಪಾಟೀಲ, ಕಲಾವತಿ ಅಕ್ಕನ ಶಿಸ್ತು ನಮಗೆಲ್ಲ ಪ್ರೇರಣೆಯಾಗಿದೆ. ಅವರು ನಮಗೆ ನಿರಂತರ ಸ್ಪೂರ್ತಿಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಂಬುನಾಥ ಕಲ್ಯಾಣಿ, ಗುಂಡುರಾವ್ ದೇಸಾಯಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

2025ರ ಮಕ್ಕಳ ಸಾಹಿತ್ಯ ಗೌರವ ಪ್ರಶಸ್ತಿ ಪುರಸ್ಕೃತ ಜಂಬುನಾಥ ಕಂಚ್ಯಾಣಿಯವರ ಕುರಿತು, ಆಕಾಶವಾಣಿ ವಿಶ್ರಾಂತ ನಿಲಯ ನಿರ್ದೇಶಕ ಶರಣ ಬಸವ ಚೋಳಿನ, 2025 ರ ಮಕ್ಕಳ ಸಾಹಿತ್ಯ ಪುಸ್ತಕ ಪ್ರಶಸ್ತಿ ಪುರಸ್ಕೃತ ಸಾಹಿತಿ ಗುಂಡುರಾವ್ ದೇಸಾಯಿಯವರ ಚಾರ್ಲಿ ಚಾರ್ಲಿ ವೇರ್ ಆರ್ ಯು ಪುಸ್ತಕದ ಕುರಿತು ಮಕ್ಕಳ ಸಾಹಿತಿ ಡಾ. ವಿನಾಯಕ ಕಮತದ ಮಾತನಾಡಿದರು.

ಪ್ರಶಸ್ತಿ ಪುರಸ್ಕೃತರ ಪರವಾಗಿ ಜಂಬುನಾಥ ಕಲ್ಯಾಣಿ ಹಾಗೂ ಗುಂಡುರಾವ್ ದೇಸಾಯಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಶಂಕರ ಹಲಗತ್ತಿ ಮಾತನಾಡಿದರು. ಕಲಾಶಿಸಂ ಪ್ರತಿಷ್ಠಾನದ ಅಧ್ಯಕ್ಷ ಡಾ. ನಿಂಗು ಸೊಲಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಹಿರಿಯ ಮಕ್ಕಳ ಸಾಹಿತಿಗಳಾ ಡಾ. ಆನಂದ ಪಾಟೀಲ, ನಿಂಗಣ್ಣ ಕುಂಟಿ, ಡಾ. ಸಂಜೀವ ಕುಲಕರ್ಣಿ, ವಿಶ್ವೇಶ್ವರಿ ಹಿರೇಮಠ, ಮಹೇಶ ಹೊರಕೇರಿ, ಶಶಿಧರ್ ತೋಡ್ಕರ್, ಚೇತನ್ ಸೊಲಗಿ, ವಿಶ್ವಾಸ ಸೊಲಗಿ, ಶರಣು ಸೊಲಗಿ, ಶಿವಕುಮಾರ ಪಾಗದ, ಅಂಕಿತಾ ಸೊಲಗಿ, ಸಹನಾ ಕುಷ್ಟಗಿ, ವಿಕಾಸ ಪಾಗಾದ, ಸಂದೇಶ ಸೊಲಗಿ ನಿರ್ವಹಿಸಿದರು.

ರಂಗನಿರ್ದೇಶಕಿ ಸುನಂದಾ ನಿಂಬನಗೌಡ್ರ ಪ್ರಾರ್ಥಿಸಿದರು. ಕಲಾಶಿಸಂ ಪ್ರತಿಷ್ಠಾನ ಸಂಚಾಲಕ ಮಲ್ಲಿಕಾರ್ಜುನ ಸೊಲಗಿ ಸ್ವಾಗತಿಸಿದರು. ಕಲಾಶಿಸಂ ಪ್ರತಿಷ್ಠಾನದ ನಿರ್ದೇಶಕ ಶಿವಕುಮಾರ ಕುಷ್ಟಗಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೀಸಲಾತಿಯಲ್ಲಿ ವಾಲ್ಮೀಕಿ ಸಮುದಾಯಕ್ಕೆ ದೊಡ್ಡ ಅನ್ಯಾಯ-ರಾಜುಗೌಡ
ಸಾಮೂಹಿಕ ವಿವಾಹಗಳು ಸಮಾಜದಲ್ಲಿ ಸಾಮರಸ್ಯ ಉತ್ತೇಜಿಸುತ್ತವೆ-ಶಾಸಕ ಬಣಕಾರ