ಕಾರು- ಲಾರಿ ಮಧ್ಯೆ ಸರಣಿ ಅಪಘಾತ: ನಾಲ್ವರ ಸಾವು

KannadaprabhaNewsNetwork |  
Published : Jan 07, 2024, 01:30 AM IST
ಅಪಘಾತ | Kannada Prabha

ಸಾರಾಂಶ

ಮೊದಲು ಬೆಂಗಳೂರಿನಿಂದ ಶಿರಡಿಗೆ ಹೊರಟ ಕಾರು ಹಾಗೂ ಗೋವಾಕ್ಕೆ ಹೊರಟ ಕಾರಿನ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ನಾಲ್ವರು ಅಪಘಾತವಾದ ಕಾರಿನ ಬಳಿ ಮಾತನಾಡುತ್ತ ನಿಂತಿದ್ದ ವೇಳೆ ಲಾರಿ ಹರಿದು ಮೃತಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಕುಂದಗೋಳ

ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಬೆಳ್ಳಿಗಟ್ಟಿ ಬಳಿ ಶನಿವಾರ ಬೆಳಗಿನ ಜಾವ ನಡೆದಿದೆ.

ಹಾಸನ ಜಿಲ್ಲೆ ಅರಕಲಗೂಡಿನ ಮಣಿಕಂಠ (36), ಪವನ (23), ಚಂದ್ರಣ್ಣ (31) ಹಾಗೂ ಬೆಂಗಳೂರಿನ ಹರೀಶ (34) ಮೃತಪಟ್ಟವರು. ಇವರೆಲ್ಲರೂ ಹಾಸನದಿಂದ ಗೋವಾಕ್ಕೆ ತೆರಳುತ್ತಿದ್ದರು. ಬೆಳಗಿನ ಜಾವ ಮಂಜು ಕವಿದ ವಾತಾವರಣ ಇದ್ದುದರಿಂದಲೇ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಮೊದಲು ಬೆಂಗಳೂರಿನಿಂದ ಶಿರಡಿಗೆ ಹೊರಟ ಕಾರು ಹಾಗೂ ಗೋವಾಕ್ಕೆ ಹೊರಟ ಕಾರಿನ ನಡುವೆ ಅಪಘಾತ ನಡೆದಿದೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದರು. ಅವರನ್ನು ಆ್ಯಂಬುಲೆನ್ಸ್‌ ಮೂಲಕ ಹುಬ್ಬಳ್ಳಿ ಕಿಮ್ಸ್‌ಗೆ ಸಾಗಿಸಲಾಗಿದೆ. ಇನ್ನುಳಿದ ನಾಲ್ವರು ಅಪಘಾತವಾದ ಕಾರಿನ ಬಳಿಯೇ ಮಾತನಾಡುತ್ತ ನಿಂತಿದ್ದರು. ಇವರ ಮೇಲೆ ವೇಗವಾಗಿ ಬಂದ ತಮಿಳುನಾಡು ಮೂಲದ ಲಾರಿ ಹರಿದಿದೆ. ನಾಲ್ವರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ್‌ ಬ್ಯಾಕೋಡ್‌, ಹೆಚ್ಚುವರಿ ಎಸ್‌ಪಿ ಎನ್‌.ವಿ. ಬರಮನಿ, ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಶವಗಳನ್ನು ಹುಬ್ಬಳ್ಳಿ ಕಿಮ್ಸ್‌ಗೆ ಸಾಗಿಸಲಾಗಿದೆ.

ಕಿಮ್ಸ್‌ಗೆ ಸಚಿವ ಲಾಡ್‌ ಭೇಟಿ

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್‌ ಅವರು, ಕಿಮ್ಸ್‌ ಶವಗಾರಕ್ಕೆ ಭೇಟಿ ನೀಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಮಾಹಿತಿ ಪಡೆದರು. ಶವಗಳನ್ನು ನೋಡಿ ಭಾವುಕರಾದ ಲಾಡ್‌, ಇದೊಂದು ಅನಿರೀಕ್ಷಿತ ಅಪಘಾತ, ಕಾರು ಅಪಘಾತ ಸಂಭವಿಸಿದ ನಂತರ ರಸ್ತೆ ಬದಿ ನಿಂತವರ ಮೇಲೆ ಲಾರಿ ಹಾಯ್ದಿದೆ ಎಂದು ವಿಷಾಧಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾ.1ರಿಂದ ಸೇವೆ ಬಂದ್‌ ಸರ್ಕಾರಿ ವೈದ್ಯರಿಂದ ಎಚ್ಚರಿಕೆ
ಚರಿತ್ರೆ ತಿಳಿದಿದ್ದರಷ್ಟೇ ಚರಿತ್ರೆ ಸೃಷ್ಟಿಸಲು ಸಾಧ್ಯ: ಸಿಎಂ