ಕೊಪ್ಪಳ: ನಗರದ ಅರುಣೋದಯ ವ್ಯಸನಮುಕ್ತ ಕೇಂದ್ರದಲ್ಲಿ ಮೇರಾ ಯುವ ಭಾರತ ಕೊಪ್ಪಳ, ಯುವ ಧ್ವನಿ ಸಂಸ್ಥೆ ಮೋರನಹಳ್ಳಿ ಹಾಗೂ ಮಹಿಳಾ ಧ್ವನಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಾದಕ ದ್ರವ್ಯ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನ ಅರ್ಥಪೂರ್ಣವಾಗಿ ಆಚರಿಸಲಾಯಿತು.
2025ರ ವಿಶ್ವ ಮಾದಕ ದ್ರವ್ಯ ವರದಿ ಪ್ರಕಾರ ಜಗತ್ತಿನಾದ್ಯಂತ ಸುಮಾರು 316 ದಶಲಕ್ಷ ಜನರು ಮಾದಕ ದ್ರವ್ಯ ಬಳಸಿದ್ದಾರೆ. ಈ ಪೈಕಿ ಸುಮಾರು 64 ದಶಲಕ್ಷ ಜನರು ಮಾದಕ ದ್ರವ್ಯ ಬಳಕೆಯಿಂದ ಉಂಟಾಗುವ ಅಸ್ವಸ್ಥತೆಗಳಿಂದ ಬಳಲುತ್ತಿದ್ದಾರೆ. ಈ ಅಂಕಿ-ಅಂಶಗಳು ವ್ಯಸನದ ವಿರುದ್ಧ ಜಾಗೃತಿ, ತಡೆಗಟ್ಟುವಿಕೆ ಹಾಗೂ ಸೂಕ್ತ ಚಿಕಿತ್ಸೆಯ ಅಗತ್ಯ ಎತ್ತಿ ತೋರಿಸುತ್ತವೆ ಎಂದು ಹೇಳಿದರು.
ಮಾದಕ ದ್ರವ್ಯಗಳಿಗೆ ಇಲ್ಲ ಎನ್ನೋಣ:ವ್ಯಸನ ಮುಕ್ತ ಭಾರತ ನಿರ್ಮಿಸೋಣ ಎಂಬ ಸಂಕಲ್ಪದೊಂದಿಗೆ ಪ್ರತಿಯೊಬ್ಬರೂ ಸಮಾಜದಲ್ಲಿ ಜಾಗೃತಿ ಮೂಡಿಸಲು ಕೈಜೋಡಿಸಬೇಕು. ವಿಶೇಷವಾಗಿ ಯುವಜನರು ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಬದುಕಿನತ್ತ ಹೆಜ್ಜೆ ಹಾಕಬೇಕು ಎಂದು ಕರೆ ನೀಡಿದರು.
1098 ಜಿಲ್ಲಾ ಸಂಯೋಜಕ ಶರಣಪ್ಪ ಸಿಂಗನಾಳ ಮಾತನಾಡಿ, ವ್ಯಸನಕ್ಕೆ ಬಲಿಯಾದವರ ಕುಟುಂಬಗಳು ನೆಮ್ಮದಿ ಕಳೆದುಕೊಳ್ಳುವುದಲ್ಲದೆ ಕುಟುಂಬದ ಸದಸ್ಯರು ಹಾಗೂ ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಬದುಕಿನತ್ತ ಹೆಜ್ಜೆ ಇಡಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಗೀತಾಂಜಲಿ, ಕುಬೇಂದ್ರಾಚಾರ್, ಶಿವರಾಜ್ ಕಂಬಳಿ, ಶರಣು ವಿವೇಕಿ, ಚಿಕಿತ್ಸಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.