ಕನ್ನಡಪ್ರಭ ವಾರ್ತೆ ಉಡುಪಿ
ಈ ಸಂದರ್ಭದಲ್ಲಿ ಕಟೀಲು ಮೇಳದ ಹಿರಿಯ ಭಾಗವತರಾದ ಪದ್ಯಾಣ ಗೋವಿಂದ ಭಟ್ ಅವರನ್ನು ಸರ್ಪಂಗಳ ಸುಬ್ರಮಣ್ಯ ಭಟ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚೌಕಿ ಸಹಾಯಕರಾಗಿ ಐದು ದಶಕ ಸೇವೆ ಸಲ್ಲಿಸಿದ ಕಾಟುಕುಕ್ಕೆ ಗೋವಿಂದ ನಾಯ್ಕ ಅವರಿಗೆ ಸರ್ಪಂಗಳ ಕಲಾ ಸೇವಾ ಪುರಸ್ಕಾರ ನೀಡಿ ಗೌರವಿಸಲಾಯಿತು.ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಈರ್ವರನ್ನು ಸನ್ಮಾನಿಸಿದರು. ಕಾರ್ಯಕ್ರಮದ ಪ್ರಾಯೋಜಕರಾದ ಡಾ. ನರೇಂದ್ರ ಶೆಣೈ ಮತ್ತು ಡಾ. ಶೈಲಜಾ ಭಟ್ ಉಪಸ್ಥಿತರಿದ್ದರು.
ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದ್ದರು. ಬಳಿಕ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರಿಂದ ಕನಕಾಂಗಿ ಕಲ್ಯಾಣ ಯಕ್ಷಗಾನ ಪ್ರದರ್ಶನಗೊಂಡಿತು.