ಇ-ಕೆವೈಸಿಗೆ ಸರ್ವರ್ ಸಮಸ್ಯೆ: ಪಡಿತರ ಗ್ರಾಹಕರ ಪರದಾಟ

KannadaprabhaNewsNetwork |  
Published : Sep 17, 2026, 02:00 AM IST
4.ರಾಗಿ ಬೆಳೆ ಬಾಡಿ ಒಣಗುತ್ತಿರುವುದು. | Kannada Prabha

ಸಾರಾಂಶ

ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಪಡಿತರ ಅಂಗಡಿಗಳ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ.

ಧಾರವಾಡ:

ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಸರ್ವರ್ ಸಮಸ್ಯೆ ಎದುರಾಗಿದ್ದು, ಜಿಲ್ಲೆಯಾದ್ಯಂತ ಪಡಿತರ ಗ್ರಾಹಕರು ಪರದಾಡುವಂತಾಗಿದೆ.

ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕ ನಿಗದಿಪಡಿಸಿರುವ ಹಿನ್ನೆಲೆಯಲ್ಲಿ ಪಡಿತರ ಅಂಗಡಿಗಳ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ವಿಶೇಷವಾಗಿ ಗಣೇಶ ಹಬ್ಬದ ರಜೆಗೆಂದು ಊರಿಗೆ ಬಂದಿರುವವರು ಇ-ಕೆವೈಸಿಗಾಗಿ ಪಡಿತರ ಅಂಗಡಿಗಳ ಎದುರು ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ವಾರಗಟ್ಟಲೆ ಅಂಗಡಿ ಎದುರು ಕಾಯುತ್ತಿದ್ದರೂ ಸರ್ವರ್ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳ್ಳುತ್ತಿಲ್ಲ. ಇದರಿಂದ ಕೆಲಸ ಕಾರ್ಯಗಳನ್ನು ಬದಿಗೊತ್ತಿ ಇಡೀ ದಿನ ಪಡಿತರ ಅಂಗಡಿಗಳ ಮುಂದೆ ನಿಲ್ಲಬೇಕಾಗಿದೆ ಎಂದು ಗ್ರಾಹಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲವು ಪಡಿತರ ಅಂಗಡಿಯಲ್ಲಿ ನೂರಾರು ಪಡಿತರ ಚೀಟಿಗಳಿಗೆ ಇ-ಕೆವೈಸಿ ಮಾಡಬೇಕಿದ್ದು, ಸರ್ವರ್ ಸಮಸ್ಯೆಯಿಂದ ಪ್ರತಿದಿನ ಕೆಲವೇ ಸಂಖ್ಯೆಯಲ್ಲಿ ಗ್ರಾಹಕರಿಗೆ ಪ್ರಕ್ರಿಯೆ ಪೂರ್ಣಗೊಳಿಸಲು ಸಾಧ್ಯವಾಗುತ್ತಿದೆ. ಹೀಗಾಗಿ ನಿಗದಿತ ಅವಧಿಯಲ್ಲಿ ಎಲ್ಲ ಪಡಿತರ ಚೀಟಿಗಳಿಗೆ ಇ-ಕೆವೈಸಿ ಪೂರ್ಣಗೊಳಿಸುವುದು ಹೇಗೆ ಎಂಬ ಆತಂಕ ಗ್ರಾಹಕರಲ್ಲಿ ಮೂಡಿದೆ.

ಸರ್ವರ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ, ಇ-ಕೆವೈಸಿ ಪ್ರಕ್ರಿಯೆಗೆ ಅಗತ್ಯವಿರುವಷ್ಟು ಸರ್ವರ್ ವ್ಯವಸ್ಥೆ ಕಲ್ಪಿಸಬೇಕು. ಇಲ್ಲವಾದಲ್ಲಿ ಇ-ಕೆವೈಸಿ ಗಡುವನ್ನು ವಿಸ್ತರಿಸಬೇಕು ಎಂದು ಗ್ರಾಹಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್‌ಎಸ್‌ಎಸ್‌ ಎಂದರೆ ಗೃಹಮಂತ್ರಿಗೆ ಚೇಳು ಕಡಿದಂಗಾಗುತ್ತೆ
ಮಳೆಗಾಲದಲ್ಲೇ ಬರಿದಾಗುತ್ತಿದೆ ಐತಿಹಾಸಿಕ ಭೀಷ್ಮ ಕೆರೆ!