ಆಲಮೇಲ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ತಮ್ಮ ಜೀವನದ ಮುಂದಿನ ಗುರಿಯನ್ನು ನಿಶ್ಚಯಿಸಿದರೆ ಭವಿಷ್ಯ ಉಜ್ವಲವಾಗುವದು ಎಂದು ಕುಮಸಗಿ ಕಲ್ಲಾಲಿಂಗೇಶ್ವರ ಮಠದ ಶಿವಾನಂದ ಶಿವಾಚಾರ್ಯರು ಹೇಳಿದರು. ತಾಲೂಕಿನ ಕುಮಸಗಿ ಗ್ರಾಮದ ಕಲ್ಲಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡುತ್ತಿದ್ದರು. ಈಗಿನಿಂದಲೇ ಗುರಿ ಇಟ್ಟುಕೊಂಡು ಸತತ ಪರಿಶ್ರಮ ಪಟ್ಟರೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದರು.
ಕನ್ನಡಪ್ರಭ ವಾರ್ತೆ ಆಲಮೇಲ: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇ ತಮ್ಮ ಜೀವನದ ಮುಂದಿನ ಗುರಿಯನ್ನು ನಿಶ್ಚಯಿಸಿದರೆ ಭವಿಷ್ಯ ಉಜ್ವಲವಾಗುವದು ಎಂದು ಕುಮಸಗಿ ಕಲ್ಲಾಲಿಂಗೇಶ್ವರ ಮಠದ ಶಿವಾನಂದ ಶಿವಾಚಾರ್ಯರು ಹೇಳಿದರು. ತಾಲೂಕಿನ ಕುಮಸಗಿ ಗ್ರಾಮದ ಕಲ್ಲಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಮಾತನಾಡುತ್ತಿದ್ದರು. ಈಗಿನಿಂದಲೇ ಗುರಿ ಇಟ್ಟುಕೊಂಡು ಸತತ ಪರಿಶ್ರಮ ಪಟ್ಟರೆ ಯಶಸ್ಸು ಖಂಡಿತ ದೊರೆಯುತ್ತದೆ ಎಂದರು. ಅತಿಥಿ ಉಪನ್ಯಾಸಕ ಕಡಣಿ ಪಿ ಬಿ, ಕಾಲೇಜು ಪ್ರಾಚಾರ್ಯ ರಮೇಶ ಗಂಗನಳ್ಳಿ ಮಾತನಾಡಿ ಸತತ ಪರಿಶ್ರಮವೇ ಸಾಧನೆಗೆ ಮೂಲ ಸಾಧನ. ಸಾಧನೆಯ ಶಿಖರ ತಲುಪಲು ಕಠಿಣ ಪರಿಶ್ರಮ ಅಗತ್ಯ ಎಂದು ಹೇಳಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.