ದೇಶದ ಸಂಸ್ಕೃತಿ ಉಳಿಸುವಲ್ಲಿ ಸೇವಾದಳ ಪಾತ್ರ ಮುಖ್ಯ:

KannadaprabhaNewsNetwork |  
Published : Jan 22, 2025, 12:30 AM IST
ಹೊನ್ನಾಳಿ ಫೋಟೋ 21ಎಚ್.ಎಲ್.ಐ2.ಪಟ್ಟಣ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಭಾರತ ಸೇವಾ ದಳದವತಿಯಿಂದ ತಾಲೂಕಿನ ದೈಹಿಕ ಶಿಕ್ಷಕರು, ಶಿಕ್ಷಕರುಗಳಿಗೆ ರಾಷ್ಟ್ರಗೀತೆ, ರಾಷ್ಟ್ರ ಧ್ವಜ ಹಾಗೂ ಡ್ರಮ್ ಸೆಟ್ ನಿರ್ವಹಣೆ ಕುರಿತು ಕಾರ್ಯಾಗಾರದ ಸಮಾರೋಪ ಸಮಾಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. | Kannada Prabha

ಸಾರಾಂಶ

ಹೊನ್ನಾಳಿ ಪಟ್ಟಣ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ಡ್ರಮ್‌ಸೆಟ್ ನಿರ್ವಹಣೆ ಕುರಿತು ಕಾರ್ಯಾಗಾರದ ಸಮಾರೋಪ ಸಮಾಂಭದಲ್ಲಿ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ:

ರಾಷ್ಟ್ರಕಟ್ಟುವ ದೇಶದ ಸಂಸ್ಕೃತಿ ಉಳಿಸುವ ನಿಟ್ಟಿನಲ್ಲಿ ಭಾರತ್ ಸೇವಾದಳ ಮಹತ್ತರ ಪಾತ್ರವಹಿಸುತ್ತದೆ ಎಂದು ಮಾಜಿ ಸಚಿವ ಭಾರತ ಸೇವಾದಳ ಹೊನ್ನಾಳಿ ತಾಲೂಕಿನ ಅಧ್ಯಕ್ಷರೂ ಅದ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಭಾರತ ಸೇವಾ ದಳದ ವತಿಯಿಂದ ತಾಲೂಕಿನ ದೈಹಿಕ ಶಿಕ್ಷಕರು, ಶಿಕ್ಷಕರಿಗೆ ರಾಷ್ಟ್ರಗೀತೆ, ರಾಷ್ಟ್ರಧ್ವಜ ಹಾಗೂ ಡ್ರಮ್ ಸೆಟ್ ನಿರ್ವಹಣೆ ಕುರಿತ ಕಾರ್ಯಾಗಾರದ ಸಮಾರೋಪ ಸಮಾಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಕರಿಗೆ ಸೂಕ್ತ ತರಬೇತಿ ನೀಡುವ ಮೂಲಕ ವಿದ್ಯಾರ್ಥಿಗಳಿಗೆ ದೇಶಾಭಿಮಾನ, ದೈಹಿಕ ಮತ್ತು ಮಾನಸಿಕ ಆರೋಗ್ಯ, ಯೋಗ, ಧ್ಯಾನ ಪ್ರಾಣಾಯಾಮದ ಬಗ್ಗೆ ಅತ್ಯುತ್ತಮವಾದ ತರಬೇತಿ ಭಾರತ ಸೇವಾದಳ ನೀಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಸಂಪನ್ಮೂಲ ಶಿಕ್ಷಕರಾದ ಜಯಪ್ಪ ರಾಷ್ಟ್ರಧ್ವಜ ಆರೋಹಣ, ಅವರೋಹಣ ಮತ್ತು ಧ್ವಜ ಇತಿಹಾಸದ ಬಗ್ಗೆ ಇರುವ ನೀತಿ ನಿಯಾಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.

ಭಾರತ ಸೇವಾದಳ ಜಿಲ್ಲಾ ಸಂಘಟಕರಾದ ಫಕ್ಕೀರ್‌ಗೌಡ, ಜಿಲ್ಲಾ ಸಮಿತಿ ಸದಸ್ಯರಾದ ಹನುಮಂತಪ್ಪ, ಸಂಪನ್ಮೂಲ ಶಿಕ್ಷಕರಾದ ಮಂಜುನಾಥ ಭೀಮಪ್ಪ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ನಿವೃತ್ತ ಶಿಕ್ಷಕ ರುದ್ರಯ್ಯ ಅವರು ಸೇವಾದಳದ ಧ್ವಜಾರೋಹಣ ಮಾಡುವ ಮೂಲಕ ಸೇವಾದಳದ ತಮ್ಮ 47 ವರ್ಷಗಲ ಅನುಭವಗಳನ್ನು ಹಂಚಿಕೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!