ಕನ್ನಡಪ್ರಭ ವಾರ್ತೆ ಕೆಜಿಎಫ್ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸಂಸ್ಕಾರವಂತ ಜೀವನ ನಡೆಸಲು ಹಾಗೂ ಆರೋಗ್ಯಕರ ಸಮಾಜ ಕಟ್ಟಲು ರಾಷ್ಟ್ರೀಯ ಸೇವಾ ಯೋಜನೆ ಪೂರಕ ವೇದಿಕೆ ಎಂದು ಕೆಜಿಎಫ್ನ ೩ನೇ ಅಪರ ಜಿಲ್ಲಾಸತ್ರ ನ್ಯಾಯಾಧೀಶರಾದ ಗಣಪತಿ ಗುರುಸಿದ್ದ ಬಾದಾಮಿ ತಿಳಿಸಿದರು.ಕೆಜಿಎಫ್ನ ಕೆಂಗಲ್ ಹನುಮಂತಯ್ಯ ಕಾನೂನು ವಿದ್ಯಾಲಯ, ಕೋಲಾರ ಜಿಲ್ಲಾ ನ್ಯಾಯಾಲಯಗಳ ಪ್ರಾಧಿಕಾರ, ರಾಮಸಾಗರ ಗ್ರಾ.ಪಂ ವ್ಯಾಪ್ತಿಯ ಕುಳೂರುನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ೨೦ ದಿನಗಳ ಸಮಾರೋಪ ಸಮಾರಂಭದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಸೇವಾ ಯೋಜನೆಯಲ್ಲಿ ಪಾಲ್ಗೊಳ್ಳಿ
ಪ್ರಿನ್ಸಿಪಲ್ ಸಿವಿಲ್ ನ್ಯಾಯಾಧೀಶರಾದ ವಿನೋದ್ ಕುಮಾರ್ ಮಾತನಾಡಿ, ಸರ್ಕಾರದ ಆದೇಶದಂತೆ ಜಮೀನಿಗೆ ಹೋಗುವ ದಾರಿಗಳನ್ನು ಯಾರು ತಡೆ ಮಾಡುವಂತಿಲ್ಲ, ರೈತರು ಸೌಹರ್ದಯುತವಾಗಿ ಸಮಸ್ಯಗಳನ್ನು ಬಗೆಹರಿಸಿಕೊಳ್ಳಿ, ಇನ್ನೂ ಹೆಣ್ಣು ಮಕ್ಕಳ ಅಸ್ತಿಯ ಹಕ್ಕಿಗೆ ಸಂಬಂಧಿಸಿದಂತೆ ಗ್ರಾಮದ ಜನರಿಗೆ ಮಾಹಿತಿ ನೀಡಿದರು.
ಕೋಲಾರ ನ್ಯಾಯಾಲಯಗಳ ಪ್ರಾಧಿಕಾರದ ಕಾರ್ಯದರ್ಶಿ ಸುನಿಲ್ ಎಸ್ ಹೊಸಮುನಿ, ಕೆಜಿಎಫ್ ವಕೀಲರ ಸಂಘದ ಅಧ್ಯಕ್ಷ ರಾಜಗೋಪಾಲಗೌಡ ಮಾತನಾಡಿದರು.ಕಾನೂನು ವಿದ್ಯಾಲಯದ ಪ್ರಾಂಶುಪಾಲ ಮ್ಯಾಥ್ಯೂಸ್, ವಕೀಲರ ಸಂಘದ ಉಪಾಧ್ಯಕ್ಷರಾದ ಮಣಿವಣ್ಣನ್, ದೀನೇಶ್, ಉಪ ಪ್ರಾಂಶುಪಾಲರಾದ ಪ್ರಸನ್ನಕುಮಾರ್ ಇದ್ದರು.