- ಮೆರವಣಿಗೆಗೆ ತಾಂಡ ಅಭಿವೃದ್ಧಿ ನಿಗಮ ಅಧ್ಯಕ್ಷ ಜಯದೇವ ನಾಯ್ಕ್ ಚಾಲನೆ
ಕನ್ನಡಪ್ರಭ ವಾರ್ತೆ ಚನ್ನಗಿರಿ
ತಾಲೂಕು ಬಂಜಾರ ಸಂಘದ ವತಿಯಿಂದ ಶ್ರೀ ಸೇವಾಲಾಲ್ ಮಹಾರಾಜರ 286ನೇ ಜಯಂತ್ಯುತ್ಸವ ಹಾಗೂ ಬಂಜಾರ ಜಾಗೃತಿ ಸಮಾವೇಶ ನಿಮಿತ್ತ ಏರ್ಪಡಿಸಿದ್ದ ಶ್ರೀ ಸೇವಾಲಾಲ್ ಭಾವಚಿತ್ರದ ಮೆರವಣಿಗೆ ಅತಿ ವಿಜೃಂಭಣೆಯಿಂದ ಸೋಮವಾರ ಪಟ್ಟಣದ ರಾಜಬೀದಿಗಳಲ್ಲಿ ನೆರವೇರಿತು. ಪಟ್ಟಣದ ಪ್ರವಾಸಿ ಮಂದಿರ ಆವರಣದಿಂದ ಅಲಂಕೃತಗೊಂಡ ಸಾರೋಟಿನಲ್ಲಿ ಶ್ರೀ ಸೇವಾಲಾಲ್ ಮಹಾರಾಜರ ಭಾವಚಿತ್ರ ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯ ವಾಹನಕ್ಕೆ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್.ಜಯದೇವ ನಾಯ್ಕ್ ಚಾಲನೆ ನೀಡಿದರು.ಮೆರವಣಿಗೆಯಲ್ಲಿ ವಿವಿಧ ಜನಪದ ಕಲಾ ತಂಡಗಳಾದ ಹೆಣ್ಣುಮಕ್ಕಳ ಡೊಳ್ಳುಕುಣಿತ, ಚಂಡೆ ಮದ್ದಳೆ, ಗೊಂಬೆಕುಣಿತ, ನಗಾರಿ ಸೇರಿದಂತೆ ಹಲವು ಜನಪದ ನೃತ್ಯಗಳು ಹಾಗೂ ಡಿ.ಜೆ. ಸಂಗೀತಕ್ಕೆ ಸಮಾಜದ ಯುವಜನರು ನರ್ತನ ಮಾಡಿ, ಮೆರವಣಿಗೆಯಲ್ಲಿ ಗಮನ ಸೆಳೆದರು.
- - -
ಕೋಟ್ ಬಂಜಾರ ಜನಾಂಗ ರಾಜ್ಯದಲ್ಲಿ 1 ಕೋಟಿಗೂ ಅಧಿಕ ಸಂಖ್ಯೆಯಲ್ಲಿದೆ. ನಮ್ಮದೇ ಆದಂತಹ ಆಚಾರ-ವಿಚಾರಗಳು, ವಿಶೇಷ ಉಡುಪುಗಳಿಂದ ಸಮುದಾಯವನ್ನು ಗುರುತಿಸಲಾಗುತ್ತದೆ. ಬಂಜಾರವು ವಿಶೇಷ ಕಲೆ, ಸಂಸ್ಕೃತಿ ಹೊಂದಿರುವ ಜನಾಂಗವಾಗಿದೆ. ಸಂತ ಸೇವಾಲಾಲರ ಜಯಂತ್ಯುತ್ಸವ ಮೆರವಣಿಗೆಗೆ ಚಾಲನೆ ನೀಡುವ ಅವಕಾಶ ದೊರೆತಿದ್ದು ನನಗೆ ಸಿಕ್ಕ ಸೌಭಾಗ್ಯ- ಜಯದೇವ ನಾಯ್ಕ್ಮೆ, ಅಧ್ಯಕ್ಷ
- - --7ಕೆಸಿಎನ್ಜಿ3.ಜೆಪಿಜಿ:
ಸಂತ ಸೇವಾಲಾಲ್ ಮಹಾರಾಜ್ 286ನೇ ಜಯಂತಿ ಮೆರವಣಿಗೆಗೆ ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ ಅಧ್ಯಕ್ಷ ಎನ್.ಜಯದೇವ ನಾಯ್ಕ್ ಚಾಲನೆ ನೀಡಿದರು.